ಭಾರೀ ಮಳೆ; ಕೃತಕ ನೆರೆಗೆ ಸಿಲುಕಿಕೊಂಡವರ ರಕ್ಷಣೆ

ಕಟ್ಟಡ ಕುಸಿತದ ಅಪಾಯವರಿತು ಹೊರಗೋಡಿದ ಜನ; ಅಣಕು ಕಾರ್ಯಾಚರಣೆ

Team Udayavani, Apr 9, 2019, 6:00 AM IST

0804mlr27-forum-mall-

ಅಗ್ನಿ ಅವಘಡ, ಕಟ್ಟಡ ಕುಸಿತ, ನೆರೆ ಸಂದರ್ಭ ಸಾರ್ವಜನಿಕರು ಕೈಗೊಳ್ಳಬೇಕಾದ ಸುರಕ್ಷಿತ ಕ್ರಮಗಳ ಬಗ್ಗೆ ಅಣಕು ಕಾರ್ಯಾಚರಣೆ ಜರಗಿತು

ಪಾಂಡೇಶ್ವರ: ಇಲ್ಲಿನ ಮಾಲ್‌ ಒಂದರಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಇದ್ದಕ್ಕಿದ್ದಂತೆ ಸೈರನ್‌ ಮೊಳಗಿತು. ಮಾಲ್‌ ಒಳಗಿದ್ದ ಜನ ಅಪಾಯದ ಮುನ್ಸೂಚನೆಯರಿತು ಓಡಿ ಬಂದರು. ಈ ವೇಳೆ ಭಾರೀ ಮಳೆಗೆ ವಾಹನ ಪಾರ್ಕಿಂಗ್‌ ಸ್ಥಳದಲ್ಲಿ ನೀರು ತುಂಬಿ ಕೃತಕ ನೆರೆ ಸೃಷ್ಟಿಯಾಗಿ ಹಲವರು ಸಿಲುಕಿಕೊಂಡಿದ್ದಾರೆಂಬ ಸುದ್ದಿ ಹರಡಿತು.

ಕ್ಷಣಾರ್ಧದಲ್ಲಿ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್‌ ಸಿಬಂದಿ, ಸ್ವಯಂ ಸೇವಕರು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಎಲ್ಲರನ್ನು ರಕ್ಷಿಸಿದರು.

ಅಷ್ಟಕ್ಕೂ ಇದು ಅಣುಕು ಕಾರ್ಯಾ ಚರಣೆ. ಅಗ್ನಿಶಾಮಕ ದಳ, ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ ತಂಡ, ಜಿಲ್ಲಾ ಆರೋಗ್ಯ ಇಲಾಖೆ, ಗೃಹರಕ್ಷಕದಳ, ಪೊಲೀಸ್‌ ಇಲಾಖೆ ವತಿಯಿಂದ ನಗರದ ಫೋರಂ ಪಿಝಾ ಮಾಲ್‌ನಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಗ್ನಿ ಅವಘಡ, ಕಟ್ಟಡ ಕುಸಿತ, ನೆರೆ ಸಂದರ್ಭ ಕೈಗೊಳ್ಳಬೇಕಾದ ಸುರಕ್ಷಿತ ಕ್ರಮಗಳು, ಯಾವ ರೀತಿ ಕಾರ್ಯಾಚರಣೆಗಳು ನಡೆಯುತ್ತವೆ ಎಂಬು ದನ್ನು ಜನಸಾಮಾನ್ಯರಿಗೆ ತಿಳಿಸಲಾಯಿತು. ಇಂತಹ ಅವಘಡಗಳುಂಟಾದಾಗಜನ ಯಾವ ರೀತಿ ಸುರಕ್ಷತೆ ಬಗ್ಗೆ ಗಮನ ಹರಿಸ ಬೇಕು ಎಂಬ ಬಗ್ಗೆಯೂ ತಿಳಿಸಲಾಯಿತು.

ಕಟ್ಟಡ ಕುಸಿತದ ವೇಳೆ…
ಇದೇ ವೇಳೆ ಕಟ್ಟಡ ಕುಸಿತದ ಸಂದರ್ಭ ರಕ್ಷಣಾ ಕಾರ್ಯಾಚರಣೆ ಹೇಗಿರುತ್ತದೆ ಎಂಬುದನ್ನೂ ಅಣುಕು ಕಾರ್ಯಾಚರಣೆ ಮೂಲಕ ಪ್ರದರ್ಶಿಸಲಾಯಿತು. ಕುಸಿತ ಗೊಂಡ ಕಟ್ಟಡದ ಅವಶೇಷಗಳಡಿ ವ್ಯಕ್ತಿ ಸಿಲುಕಿ ಹಾಕಿಕೊಂಡರೆ ವಿಕ್ಟಿಮ್‌ ಲೊಕೇಶನ್‌ ಕೆಮರಾ ಬಳಸಿ ಆ ವ್ಯಕ್ತಿ ಯಾವ ಭಾಗದಲ್ಲಿ ಸಿಲುಕಿಕೊಂಡಿದ್ದಾನೆ ಎಂಬುದನ್ನು ಪತ್ತೆ ಹಚ್ಚಲಾಗುತ್ತದೆ. ಬಳಿಕ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸಿ ವ್ಯವ ಸ್ಥಿತವಾಗಿ ಸಿಲುಕಿಕೊಂಡ ವ್ಯಕ್ತಿಯನ್ನು ರಕ್ಷಿ ಸಲು ಕಾರ್ಯಾಚರಣೆ ನಡೆಯುತ್ತದೆ. ಅಲ್ಲದೆ, ಇಲ್ಲಿ ಶ್ವಾನಗಳನ್ನೂ ಬಳಸಿಕೊಂಡು ವ್ಯಕ್ತಿ ಯಾವ ಭಾಗದಲ್ಲಿದ್ದಾನೆಂದು ಪತ್ತೆ ಹಚ್ಚಬಹುದು ಎಂಬುದನ್ನು ಮಾದರಿ ಕಾರ್ಯಾಚರಣೆ ಮೂಲಕ ರಕ್ಷಣಾ ತಂಡ ದವರು ತೋರಿಸಿಕೊಟ್ಟರು. ಯಾವುದೇ ಅಪಾಯಗಳಾದಾಗ ಮಾಲ್‌ ಅಥವಾ ಇತರ ಸಾರ್ವಜನಿಕ ಸ್ಥಳಗಳಲ್ಲಿ ಜನ ತತ್‌ಕ್ಷಣ ಹೊರಗೆ ಹೋಗಬೇಕು. ಆದರೆ ಬೇಗನೇ ಹೋಗಬೇಕೆಂಬ ಧಾವಂತದಲ್ಲಿ ಲಿಫ್ಟ್‌ ಬಳಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಮೆಟ್ಟಿಲುಗಳನ್ನೇ ಇಂತಹ ಸಂದರ್ಭ ಬಳಸಬೇಕು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಎನ್‌ಡಿಆರ್‌ಎಫ್ನ ಸುಬೀಷ್‌ ಕೆ.ಎಸ್‌., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ ರಾವ್‌, ವಿಪತ್ತು ನಿರ್ವಹಣಾ ಅಧಿಕಾರಿ ವಿಜಯ ಕುಮಾರ್‌, ಗೃಹರಕ್ಷಕದಳದ ರಮೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಅಣಕು ದೃಶ್ಯಗಳು
ನೆರೆ ನೀರಿನಲ್ಲಿ ಮುಳುಗುವ ವ್ಯಕ್ತಿಯನ್ನು ದೋಣಿಯ ಮೂಲಕ ಹೇಗೆ ರಕ್ಷಿಸ ಬಹುದು ಎಂಬುದನ್ನು ಎನ್‌ಡಿಆರ್‌ಎಫ್‌ ಸಿಬಂದಿ ತೋರಿಸಿಕೊಟ್ಟರು. ಇದಕ್ಕಾಗಿ ಮೂರು ರಕ್ಷಣಾ ಬೋಟ್‌ಗಳನ್ನು ತಂದು ಕಾರ್ಯಾಚರಣೆಯಲ್ಲಿ ಪ್ರದರ್ಶಿಸಲಾಯಿತು. ನೆರೆ ಸಂದರ್ಭ ಗಾಯಗೊಂಡವರನ್ನು ತುರ್ತು ಆಸ್ಪತ್ರೆಗೆ ಸಾಗಿಸಲು ಆ್ಯಂಬುಲೆನ್ಸ್‌, ಬೈಕ್‌ ಆ್ಯಂಬುಲೆನ್ಸ್‌ಗಳನ್ನು ಬಳಸಿಕೊಂಡು ಆಸ್ಪತ್ರೆಗೆ ಸಾಗಿಸುವ ದೃಶ್ಯಗಳನ್ನು ಪ್ರದರ್ಶಿ ಸಲಾಯಿತು.

ಜಾಗೃತಿ ಕೆಲಸ
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯ ಅಗ್ನಿಶಾಮಕದಳ ಅಧಿಕಾರಿ ಟಿ.ಎನ್‌. ಶಿವಶಂಕರ್‌, ಮಳೆಗಾಲಕ್ಕೂ ಮುನ್ನ ತುರ್ತು ಕಾರ್ಯಾಚರಣೆಯ ಬಗ್ಗೆ ಜನರಿಗೆ ಮಾಹಿತಿ ನೀಡಬೇಕೆಂಬುದು ಸರಕಾರದ ಆದೇಶ. ಈ ಹಿನ್ನೆಲೆಯಲ್ಲಿ ಫೋರಂ ಮಾಲ್‌ನಲ್ಲಿ ಅಣುಕು ಕಾರ್ಯಾಚರಣೆ ನಡೆಸಿ ಜನರನ್ನು ಜಾಗೃತಿಗೊಳಿಸುವ ಕೆಲಸ ನಡೆದಿದೆ ಎಂದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.