ಮಹಾಮಳೆಗೆ ಮಂಗಳೂರು ತತ್ತರ : ಜನಸಾಮಾನ್ಯರ ಬದುಕು ದುಸ್ತರ


Team Udayavani, May 29, 2018, 10:42 PM IST

rain-m-29-5.jpg

ಮಹಾನಗರಿ ಮಂಗಳೂರು ಮಂಗಳವಾರ ಅಕ್ಷರ ಸಹ ತತ್ತರಿಸಿಹೋಗಿತ್ತು. ಸೋಮವಾರ ರಾತ್ರಿಯಿಂದಲೇ ಸುರಿಯಲಾರಂಭಿಸಿದ ಕುಂಭದ್ರೋಣ ಮಳೆ ಮಂಗಳವಾರವೂ ತನ್ನ ಬಿರುಸನ್ನು ಕಳೆದುಕೊಳ್ಳಲಿಲ್ಲ. ಪರಿಣಾಮವಾಗಿ ಮೊದಲೇ ಸೂಕ್ತ ಒಳಚರಂಡಿ ವ್ಯವಸ್ಥೆಗಳಿಲ್ಲದ ಮಂಗಳೂರು ನಗರ ಮತ್ತು ಅದರ ಸುತ್ತಮುತ್ತ ಬರೇ ನೀರು ನೀರು. ಚರಂಡಿಗಳೆಲ್ಲಾ ತುಂಬಿ ರಸ್ತೆಗಳ ಮೇಲೆ ಹರಿದು ಬಳಿಕ ತಗ್ಗು ಪ್ರದೇಶದ ಮನೆ-ಅಂಗಡಿಗಳಿಗೆಲ್ಲಾ ನುಗ್ಗಿದ ಮಳೆನೀರು ಕುಡ್ಲ ನಿವಾಸಿಗಳನ್ನು ಕಂಗಾಲಾಗಿಸಿತು. ಈತನ್ಮಧ್ಯೆ, ಅಗ್ನಿಶಾಮಕ ದಳ, ವಿವಿಧ ಸಂಘಸಂಸ್ಥೆಗಳ ಸ್ವಯಂಸೇವಕರು ಹಾಗೂ ನಾಗರಿಕರು ತಮ್ಮ ತಮ್ಮ ಪ್ರದೇಶಗಳಲ್ಲಿ ನೆರೆನೀರಿಗೆ ಸಿಲುಕಿದವರ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರು, ಇತ್ತ ಕೆಲವರು ಸಂಚಾರ ನಿಯಂತ್ರಣ ಕಾರ್ಯದಲ್ಲೂ ಪೊಲೀಸರಿಗೆ ನೆರವು ನೀಡಿದರು.

ಒಟ್ಟಿನಲ್ಲಿ ಸರಿಯಾದ ರೀತಿಯ ಟೌನ್ ಪ್ಲ್ಯಾನಿಂಗ್ ಮತ್ತು ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮುಂಗಾರು ಮಳೆಯ ಪ್ರಾರಂಭದಲ್ಲೇ ಕರಾವಳಿ ಇತ್ತೀಚಿನ ದಿನಗಳಲ್ಲಿ ಕಾಣದಿದ್ದ ಕೃತಕ ನೆರೆ ಇಲ್ಲಿನ ಸಾಮಾನ್ಯ ಜನರ ಬದುಕನ್ನು ಅಕ್ಷರಸಹ ನರಕವನ್ನಾಗಿಸುತ್ತಿದೆ. ಸ್ಮಾರ್ಟ್ ಸಿಟಿಯಾಗುವತ್ತ ಸಾಗುತ್ತಿರುವ ಮಂಗಳೂರು ನಗರಕ್ಕೆ ಈ ರೀತಿಯ ಪ್ರಾಕೃತಿಕ ವಿಪತ್ತುಗಳು ಅಪ್ಪಳಿಸಿದಾಗ ನಗರ ಸ್ವರೂಪದ ಬಂಡವಾಳ ಬಯಲಾಗುತ್ತದೆ. ಇನ್ನಾದರೂ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಮಂಗಳೂರಿಗರ ಬದುಕನ್ನು ಸಹ್ಯವಾಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುತ್ತಾರೋ ಎಂಬುದನ್ನು ಕಾದುನೋಡಬೇಕಾಗಿದೆ.

Latest Updates:
– ಮಂಗಳೂರು ನಗರದಾದ್ಯಂತ ನೆರೆ ನೀರಿನಿಂದ ಸಾರ್ವಜನಿಕರು ತೊಂದರೆಗೊಳಗಾಗಿರುವುದರಿಂದ ನಗರವಾಸಿಗಳಿಗೆ ತುರ್ತು ಔಷಧಿಗಳು ಅಥವಾ ವೈದ್ಯಕೀಯ ನೆರವಿನ ಅಗತ್ಯವನ್ನು ಪೂರೈಸಲು ಟೀಂ ಹೆಲ್ತ್ –ಇ ಎಂಬ ಉತ್ಸಾಹಿಗಳ ತಂಡವು ಯಾವುದೇ ಸರ್ವಿಸ್ ಚಾರ್ಜ್ ಇಲ್ಲದೇ ನಿಮ್ಮ ಮನೆ ಬಾಗಿಲಿಗೆ ಔಷಧಿಗಳನ್ನು ತಲುಪಿಸುವ ಉತ್ತಮ ಕಾರ್ಯವನ್ನು ಮಾಡುತ್ತಿದೆ. ದಯವಿಟ್ಟು ಈ ಸೇವೆಯ ಸದುಪಯೋಗವನ್ನು ಮಂಗಳೂರು ನಗರವಾಸಿಗಳು ಪಡೆದುಕೊಳ್ಳಿ, ನೀವು ಮಾಡಬೇಕಾಗಿರುವುದಿಷ್ಟೇ : ತುರ್ತು ಔಷಧಿಗಳಿಗೆ ನಿಮ್ಮ ಬಳೀಯಿರುವ ಮೆಡಿಕಲ್ ಪ್ರಿಸ್ಕ್ರಿಪ್ಷನ್ ಅನ್ನು 9148247777 ಸಂಖ್ಯೆಗೆ ವಾಟ್ಸ್ಯಾಪ್ ಮಾಡಿ. ಸಂಪರ್ಕ ವ್ಯಕ್ತಿಯ ಹೆಸರು: ನೀರವ್ ಭಂಡಾರಿ

– ನಗರಕ್ಕೆ ಬರಲಿದೆ NDRF ತಂಡ. ಬುಧವಾರದಂದು ನಗರಕ್ಕೆ ಕಾಲಿಡಲಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ. ಇದರಿಂದ ರಕ್ಷಣೆ ಮತ್ತು ಪರಿಹಾರ ಕಾರ್ಯಗಳು ವೇಗ ಪಡೆದುಕೊಳ್ಳುವ ಸಾಧ್ಯತೆ.

– ಬಾರೀ ಮಳೆಯ ಹಿನ್ನಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಞೆಗಳು ಮಂದೂಡಿಕೆ.

– ಈಗಾಗಲೇ ನಗರದ ಐದು ಕಡೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿಯವರಿಂದ ಮಾಹಿತಿ.

– ಬುಧವಾರದಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ.

– ಭಾರೀ ಮಳೆ ಮತ್ತು ಕೃತಕ ನೆರೆಗೆ ನಗರದಲ್ಲಿ ಎರಡು ಜೀವಗಳ ಬಲಿ.

– ಮಳೆ ನೀರಿನಲ್ಲಿ ತೇಲಿಬಂದು ಆತಂಕ ಸೃಷ್ಟಿಸಿದ ಹಾವು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.