ಕಂಡು ಕೇಳರಿಯದ ಭಾರೀ ಮಳೆ: ಗ್ರಾಮೀಣ ಜನತೆ ತತ್ತರ 


Team Udayavani, Aug 17, 2018, 10:46 AM IST

17-agust-4.jpg

ಉಪ್ಪಿನಂಗಡಿ : ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳೆರಡು ಈ ವರ್ಷ ಮೂರು ದಿನಗಳ ಅವಧಿಯಲ್ಲಿ ಎರಡನೇ ಬಾರಿ ಸಂಗಮಗೊಂಡು ಉಕ್ಕಿ ಹರಿಯುತ್ತಿದ್ದು, ಸಂಜೆ 4 ಗಂಟೆ ಸುಮಾರಿಗೆ ನದಿ ನೀರು ದೇವಸ್ಥಾನದ ಒಳ ಪ್ರಾಂಗಣವನ್ನು ಪ್ರವೇಶಿಸಿದ ಬಳಿಕ ನದಿಗಳು ಶಾಂತಗೊಳ್ಳುವಂತೆ ಪ್ರಾರ್ಥಿಸಿ, ಸಂಗಮ ಪೂಜೆಯನ್ನು ನೆರವೇರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಹರೀಶ್‌ ಉಪಾಧ್ಯಾಯ, ಸಹ ಅರ್ಚಕರಾದ ಶಂಕರ್‌ ಭಟ್‌, ಮಧುಸೂದನ ಭಟ್‌ ಪೂಜಾ ಕೈಂಕರ್ಯವನ್ನು ನೆರವೇರಿಸಿದ ಬಳಿಕ ಸಾವಿರಾರು ಭಕ್ತರು ಸಂಗಮ ತೀರ್ಥ ಸ್ನಾನ ಮಾಡಿ ಪುನೀತರಾದರು.

ಅಕಾಲಿಕ ತೆರೆದ ಗರ್ಭಗುಡಿ
ಮಧ್ಯಾಹ್ನ ಪೂಜೆಯ ಬಳಿಕ ಮುಚ್ಚುವ ದೇಗುಲದ ಗರ್ಭಗುಡಿಯ ಬಾಗಿಲು ಮತ್ತೆ ತೆರೆಯುವುದು ಸಂಜೆಯೇ. ಆದರೆ, ನದಿಗಳು ಉಕ್ಕೇರಿ ಬಂದ ಹಿನ್ನೆಲೆಯಲ್ಲಿ ಗಂಗಾಪೂಜೆ ನೆರವೇರಿಸುವ ಸಲುವಾಗಿ ಅಕಾಲಿಕವಾಗಿ ಗರ್ಭಗುಡಿಯ ಬಾಗಿಲು ತೆರೆಯುವ ಅನಿವಾರ್ಯತೆ ಮೂಡಿತು. ತಂತ್ರಿಗಳ ಸಲಹೆ ಪಡೆದು, ಭಕ್ತರ ಹಿತಕ್ಕಾಗಿ ಅಕಾಲಿಕವಾಗಿ ಗರ್ಭಗುಡಿ ಬಾಗಿಲು ತೆರೆಯಬಹುದು ಎಂಬ ನಿರ್ದೇಶನದ ಮೇರೆಗೆ ಬಾಗಿಲು ತೆರೆದು, ಗಂಗಾಪೂಜೆ ನೆರವೇರಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ರಾಧಾಕೃಷ್ಣ ನಾಯಕ್‌, ಪ್ರಕಾಶ್‌ ರೈ ಬೆಳ್ಳಿಪ್ಪಾಡಿ, ಡಾ|ರಾಜಾರಾಮ ಕೆ.ಬಿ. ಉಪಸ್ಥಿತರಿದ್ದರು. ಸಂಗಮ ವೀಕ್ಷಿಸುವ ಕುತೂಹಲ ಹಾಗೂ ಪುಣ್ಯಸ್ನಾನ ಮಾಡುವ ಹಂಬಲದೊಂದಿಗೆ ಸಹಸ್ರಾರು ಜನ ಉಪ್ಪಿನಂಗಡಿಗೆ ಆಗಮಿಸಿದ್ದರು. ಎದೆಯ ಮಟ್ಟ ನೀರಿನಲ್ಲಿ ನಿಂತು ಪುಣ್ಯಸ್ನಾನ ಮಾಡಿದರು.

ಉಪ ವಿಭಾಗಾಧಿಕಾರಿ ಭೇಟಿ
ನದಿಗಳು ಉಕ್ಕಿ ನೆರೆ ಭೀತಿ ಮೂಡುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಸಹಾಯಕ ಆಯುಕ್ತ ಎಚ್‌.ಕೆ. ಕೃಷ್ಣ ಮೂರ್ತಿ, ಮುಳುಗಡೆಯಾದ ಪ್ರದೇಶಗಳಿಂದ ಜನರನ್ನು ತೆರವುಗೊಳಿಸಲು ಬೋಟ್‌ ಗಳನ್ನು ಕಳುಹಿಸಿಕೊಟ್ಟರು. ಇಲಾಖೆ ಅಧಿಕಾರಿಗಳು, ಜನ ಪ್ರತಿನಿಧಿಗಳನ್ನು ತುರ್ತು ಸಭೆಗೆ ಆಹ್ವಾನಿಸಿ, ಪರಿಹಾರ ಕ್ರಮಗಳ ಕುರಿತು ಸೂಕ್ತ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.