ಕರಾವಳಿಯಾದ್ಯಂತ ಭಾರೀ ಮಳೆ, ಭತ್ತದ ಬೆಳೆ ನಷ್ಟ
Team Udayavani, Nov 7, 2021, 6:50 AM IST
ಮಂಗಳೂರು: ಅರಬಿ ಸಮುದ್ರ ಮತ್ತು ಬಂಗಾಲಕೊಲ್ಲಿಯಲ್ಲಿ ನಿಮ್ನ ಒತ್ತಡ ನಿರ್ಮಾಣವಾಗಿದ್ದು,ಕರಾವಳಿಯಾದ್ಯಂತ ಉತ್ತಮ ಮಳೆಯಾಗು ತ್ತಿದೆ. ಮಳೆಯಿಂದ ಕೆಲವು ಕಡೆ ಭತ್ತದ ಬೆಳೆ ನಷ್ಟವಾಗಿದೆ.
ದ.ಕ., ಉಡುಪಿ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ ಮತ್ತು ಶನಿವಾರ ಬಿರುಸಿನಿಂದ ಕೂಡಿದ ಮಳೆಯಾಗಿದೆ. ಸುಳ್ಯ ತಾಲೂಕಿನ ಹಲವೆಡೆ ಶುಕ್ರವಾರದಿಂದ ಭಾರೀ ಮಳೆಯಾಗಿದ್ದು, ಗ್ರಾಮೀಣ ಭಾಗಗಳಲ್ಲಿ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ನೀರಿಗೆ ಕೊಚ್ಚಿ ಹೋಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಶನಿವಾರ ಸುರಿದ ಮಳೆಗೆ ಸೋಮಾವತಿ ನದಿಯಲ್ಲಿ ಕೊಚ್ಚಿ ಹೋದ ದನವನ್ನು ರಕ್ಷಣೆ ಮಾಡಲಾಗಿದೆ. ಉಳಿದಂತೆ ಪುತ್ತೂರು, ಉಪ್ಪಿನಂಗಡಿ, ಕಡಬ, ಕುಂಬ್ರ, ಪಾಣಾಜೆ, ಸುಳ್ಯ, ಚೊಕ್ಕಾಡಿ, ಪಂಜ, ಬೆಳ್ತಂಗಡಿ, ಮಡಂತ್ಯಾರು ಧರ್ಮಸ್ಥಳ, ಉಜಿರೆ, ಚಾರ್ಮಾಡಿ, ಬಂಟ್ವಾಳ, ಬಿ.ಸಿ. ರೋಡು, ಮಾಣಿ, ಕಲ್ಲಡ್ಕ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗಿದೆ. ಕೆಲವು ಕಡೆ ಗಾಳಿ-ಮಳೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿತ್ತು. ಮಂಗಳೂರಿನಲ್ಲಿ ಶನಿವಾರ ದಿನವಿಡೀ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಮಳೆ ಮಳೆಯಾಗಿದೆ.
ಭತ್ತದ ಬೆಳೆ ನಷ್ಟ
ಕಿನ್ನಿಗೋಳಿ: ಭಾರೀ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಕಿನ್ನಿಗೋಳಿ ಪ್ರದೇಶದ ಭತ್ತದ ಗದ್ದೆಗಳು ಹಾನಿಗೀಡಾದ ಕಾರಣ ಭಾರೀ ನಷ್ಟ ಉಂಟಾಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ
ಉಡುಪಿ: ಮನೆಗಳಿಗೆ ಹಾನಿ
ಉಡುಪಿ ಜಿಲ್ಲೆಯಲ್ಲಿ ಗುರುವಾರ, ಶುಕ್ರವಾರ ಬಂದ ಸಿಡಿಲು, ಗುಡುಗು ಸಹಿತ ಭಾರೀ ಮಳೆಗೆ ಜಿಲ್ಲೆಯಲ್ಲಿ ವಿವಿಧ ಮನೆಗಳಿಗೆ ಹಾನಿಯಾಗಿದೆ. ಕಾಪು ತಾಲೂಕಿನಲ್ಲಿ ಮೂರು ಮನೆಗಳು, ಉಡುಪಿ ತಾಲೂಕಿನ ಎರಡು ಮನೆಗಳಿಗೆ ಸಿಡಿಲಿನಿಂದ ಮನೆಗೆ ಭಾಗಶಃ ಹಾನಿಯಾಗಿದೆ. ಕುಂದಾಪುರ ತಾಲೂಕಿನಲ್ಲಿ ಜಾನುವಾರಿಗೆ ಸಿಡಿಲು ಬಡಿದು ಮೃತಪಟ್ಟಿದೆ. ಕುಂದಾಪುರ ತಾಲೂಕಿನ 12 ಮನೆಗಳಿಗೆ ಹಾನಿ ಉಂಟಾಗಿದೆ. ವಿವಿಧ ತಾಲೂಕುಗಳಲ್ಲಿ ಶನಿವಾರವೂ ಮಳೆಯಾಗಿದೆ.
ನಾಲ್ಕು ದಿನ ಮಳೆ ಸಾಧ್ಯತೆ
ರಾಜ್ಯ ಕರಾವಳಿ ಭಾಗದಲ್ಲಿ ನ.7ರಿಂದ 10ರವರೆಗೆ “ಎಲ್ಲೋ ಅಲರ್ಟ್’ ಘೊಷಿಸಲಾಗಿದ್ದು ಕೆಲವು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!