ಶಿರಾಡಿಯಲ್ಲಿ ವಾಹನ ಸಂಚಾರ : ಎಚ್ಚರದ ಚಾಲನೆ ಅಗತ್ಯ
Team Udayavani, Aug 3, 2018, 10:49 AM IST
ನೆಲ್ಯಾಡಿ: ಶಿರಾಡಿ ಘಾಟಿ ರಸ್ತೆಯು ಆ. 1ರ ಮಧ್ಯರಾತ್ರಿಯಿಂದಲೇ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಮುಕ್ತವಾಗಿದ್ದು, 7 ತಿಂಗಳಿನಿಂದ ಬಿಕೋ ಎನ್ನುತ್ತಿದ್ದ ಹೆದ್ದಾರಿ ವಾಹನಗಳಿಂದ ಗಿಜಿಗುಟ್ಟಲಾರಂಭಿಸಿದೆ. ಗುಂಡ್ಯ ಪೇಟೆಯಲ್ಲಿ ವ್ಯಾಪಾರ ವಹಿವಾಟುಗಳು ಆರಂಭಗೊಂಡಿವೆ.
ರಾಷ್ಟ್ರೀಯ ಹೆದ್ದಾರಿ 48ರ ಕೆಂಪು ಹೊಳೆಯಿಂದ ಶಿರಾಡಿ ಗ್ರಾಮದ ಅಡ್ಡ ಹೊಳೆವರೆಗೆ 8.50 ಮೀ. ಅಗಲ, 12.38 ಕಿ.ಮೀ. ಉದ್ದದ ರಸ್ತೆಗೆ ಕಾಂಕ್ರೀಟ್ ಅಳವಡಿಸುವ ಕಾಮಗಾರಿಯನ್ನು ಮಂಗಳೂರಿನ ಓಷಿಯನ್ ಕನ್ಸ್ಟ್ರಕ್ಷನ್ ಸಂಸ್ಥೆ ಜನವರಿಯಲ್ಲಿ ಆರಂಭಿಸಿತ್ತು. ಈ ಹಿನ್ನೆಲೆಯಲ್ಲಿ ಸಕಲೇಶಪುರದಿಂದ ಧರ್ಮಸ್ಥಳವರೆಗೂ ಹೆದ್ದಾರಿ ಬದಿಯ ಹೊಟೇಲ್ ಗಳು, ಅಂಗಡಿ ಮುಂಗಟ್ಟುಗಳು ವ್ಯಾಪಾರವಿಲ್ಲದೆ ತೀವ್ರ ಆರ್ಥಿಕ ಹೊಡೆತ ಅನುಭವಿಸಿದ್ದವು. ಕೆಲವು ಮಳಿಗೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಪ್ರಸ್ತುತ ಎಲ್ಲ ಮಳಿಗೆಗಳು ಮತ್ತೆ ಬಾಗಿಲು ತೆರೆದು ಗ್ರಾಹಕರನ್ನು ಸೆಳೆಯಲು ಸಜ್ಜಾಗಿವೆ.
ವಾಹನ ಸವಾರರೇ ಎಚ್ಚರ !
ಶಿರಾಡಿ ಘಾಟಿ ರಸ್ತೆ ಸಂಚಾರಕ್ಕೆ ಮುಕ್ತವಾಗಿದ್ದರೂ ಅಲ್ಲಲ್ಲಿ ತಡೆಗೋಡೆಗಳ ಕಾಮಗಾರಿ ಈಗಲೂ ನಡೆಯುತ್ತಿದೆ. ಹೊಳೆಯ ನೀರಿನ ರಭಸಕ್ಕೆ ರಸ್ತೆಯ ಬದಿ ಕೊಚ್ಚಿಕೊಂಡು ಹೋಗುವ ಸಾಧ್ಯತೆ ಇರುವುದರಿಂದ ಅಂತಹ ಕಡೆಗಳಲ್ಲಿ ವಾಹನ ಸವಾರರು ನಿಗದಿತ ವೇಗದಲ್ಲಿಯೇ ಎಚ್ಚರದಿಂದ ವಾಹನ ಚಲಾಯಿಸುವುದು ಸೂಕ್ತ. ಮಾರನಹಳ್ಳಿಯಲ್ಲಿ ಹೊಳೆನೀರಿನ ರಭಸಕ್ಕೆ ರಸ್ತೆ ಬದಿಯ ಮಣ್ಣು ಕೊಚ್ಚಿಹೋಗಿ ಕಾಂಕ್ರೀಟ್ ರಸ್ತೆಯ ತಳಭಾಗಕ್ಕೂ ಕೆಲವು ದಿನಗಳ ಹಿಂದೆ ಅಪಾಯ ಎದುರಾಗಿತ್ತು. ಇದೀಗ ತಾತ್ಕಾಲಿಕವಾಗಿ ಸರಿಪಡಿಸಲಾಗಿದೆಯಾದರೂ ಎಚ್ಚರದಿಂದಲೇ ಸಾಗುವುದು ಉತ್ತಮ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ