ಗುಡುಗು ಸಹಿತ ಭಾರೀ ಗಾಳಿ-ಮಳೆ: ವಿವಿಧೆಡೆ 


Team Udayavani, May 10, 2018, 11:26 AM IST

10-May-9.jpg

ಪುತ್ತೂರು: ಕೋಡಪದವು, ಏತಡ್ಕ, ಇಡ್ಕಿದು, ಬದಿಯಡ್ಕ, ಜಾಲ್ಸೂರು, ಉರುವಾಲು, ಬಳ್ಪ, ಕೇನ್ಯ, ಕಲ್ಲಾಜೆ, ಮರ್ಕಂಜ, ಕಳಂಜ, ಕಲ್ಮಡ್ಕ, ಎಣ್ಮೂರು ಭಾಗಗಳಲ್ಲಿ ಮಂಗಳವಾರ ಸಂಜೆಯಿಂದ ತೊಡಗಿ ತಡರಾತ್ರಿವರೆಗೆ ಉತ್ತಮ ಮಳೆಯಾಗಿದೆ.

ಪುತ್ತೂರು ತಾಲೂಕಿನ ಕುಂಡಡ್ಕ- ಚೆನ್ನಾವರ ರಸ್ತೆ ಮಧ್ಯೆ ಹಲಸಿನ ಮರವೊಂದು ಮುರಿದು ಬಿದ್ದು, ಸಂಚಾರಕ್ಕೆ ತಡೆಯಾಗಿತ್ತು. ಬಳಿಕ ಊರವರೇ ಮರವನ್ನು ತೆರವುಗೊಳಿಸಿದರು. ವಿವಿಧೆಡೆ ತೋಟಗಳಲ್ಲಿ ಅಡಿಕೆ, ಬಾಳೆಗಿಡಗಳಿಗೆ ಹಾನಿಯಾಗಿದೆ. ಸರ್ವೆಯಲ್ಲಿ ಮರಬಿದ್ದು ಕಮ್ಮಾರ ಶಾಲೆಯೊಂದು ಸಂಪೂರ್ಣ ಹಾನಿಯಾಗಿದೆ.

ಪುಣ್ಚತ್ತಾರು ಶ್ರೀ ಹರಿಭಜನ ಮಂದಿರದ ಬಳಿ ಗುಡ್ಡ ಕುಸಿದು ಹಾನಿಯಾಗಿದೆ. ಹಲವೆಡೆ ಮಳೆ ನೀರು ಹರಿಯಲು ಚರಂಡಿಯಿಲ್ಲದೆ ರಸ್ತೆಯಲ್ಲೇ ನೀರು ನಿಂತಿತ್ತು. ಕೆಲವು ದಿನಗಳಿಂದ ಬಿಸಿಲಿನ ತಾಪ ಹೆಚ್ಚಾಗಿತ್ತು, ಇಳೆ ತಂಪಾಗಿದೆ. ಕೃಷಿಕರಿಗೂ ಮಳೆ ಖುಷಿ ತಂದಿದೆ.

ಗೋಡೆ, ಛಾವಣಿಗೆ ಹಾನಿ
ಸುಬ್ರಹ್ಮಣ್ಯ:
ಮಂಗಳವಾರ ಸಂಜೆ ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ.

ಕೊಲ್ಲಮೊಗ್ರು ಗ್ರಾಮದ ಮಿತ್ತೋಡಿ ಲಕ್ಷ್ಮಣ ಗೌಡ ಅವರ ಮನೆಗೆ ಸಿಡಿಲು ಬಡಿದು ಗೋಡೆ ಹಾಗೂ ಛಾವಣಿಗೆ ಹಾನಿಯಾಗಿದೆ. ಅವರ ಮನೆಗೆ ಅಳವಡಿಸಿದ್ದ ವೈರಿಂಗ್‌ ಹೊತ್ತಿ ಉರಿದು ನಷ್ಟ ಉಂಟಾಗಿದೆ. ಮುಖ್ಯ ಪೇಟೆ ಬಳಿಯ ಹೊನ್ನಪ್ಪ ಎಂಬವರ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹತ್ತಿಕೊಂಡಿದೆ. ಈ ಭಾಗದಲ್ಲಿ ಹಲವು ಮನೆ ಹಾಗೂ ಕೊಟ್ಟಿಗೆಗೆ ಸಿಡಿಲು ಬಡಿದಿದೆ.

ಸಂಜೆ ನಾಲ್ಕರಿಂದ ನಡುರಾತ್ರಿ ತನಕವೂ ಮಳೆಯಾಗಿದೆ. ಸಿಡಿಲು, ಮಿಂಚಿಗೆ ವಿದ್ಯುತ್‌ ಪರಿವರ್ತಕ ಕೇಂದ್ರಗಳಲ್ಲಿ ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡ ಪರಿಣಾಮ ವಿದ್ಯುತ್‌ ಸಂಪರ್ಕ ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕತ್ತಲೆಯಲ್ಲಿ ರಾತ್ರಿ ಕಳೆಯಬೇಕಾಯಿತು. ಬುಧವಾರ ಸಂಜೆ ತನಕವೂ ಈ ಭಾಗಗಳಿಗೆ ವಿದ್ಯುತ್‌ ಸರಬರಾಜು ಅಗಿರಲಿಲ್ಲ. ದೂರವಾಣಿ ಹಾಗೂ ಮೊಬೈಲ್‌ ಸಂಪರ್ಕ ಕಡಿತಗೊಂಡ ಕಾರಣ ಕೊಲ್ಲಮೊಗ್ರು, ಬಾಳುಗೋಡು, ಹರಿಹರ, ಕಲ್ಮಕಾರು ಭಾಗದ ಜನತೆ ಹೊರಭಾಗದ ಸಂಪರ್ಕ ಕಡಿತಗೊಂಡು ತೀರಾ ಸಂಕಷ್ಟ ಅನುಭವಿಸಿದರು.

ಸುಬ್ರಹ್ಮಣ್ಯ ನಗರ ಸಹಿತ ಈ ಭಾಗದ ಪ್ರಮುಖ ಸಂಪರ್ಕ ರಸ್ತೆಗಳ ಬದಿ ಸೂಕ್ತ ಚರಂಡಿ ವ್ಯವಸ್ಥೆಗಳಿಲ್ಲದೆ ಮಳೆ ನೀರು ಕಿರು ಸೇತುವೆ ಮೇಲ್ಭಾಗದಲ್ಲಿ ಹರಿದು ರಸ್ತೆಗೆ ನುಗ್ಗಿ ಕೆಸರು ತುಂಬಿದ ರಸ್ತೆಗಳಲ್ಲಿ ಸಂಚಾರ ಕಷ್ಟಕರವಾಗಿತ್ತು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.