ಪ್ಯಾಸೆಂಜರ್‌ ರೈಲು ಆರಂಭಕ್ಕೆ ಹಿಂದೇಟು

ವಿದ್ಯಾರ್ಥಿಗಳು, ಸ್ಥಳೀಯರಿಗೆ ಸಂಕಷ್ಟ

Team Udayavani, Jan 11, 2021, 6:10 AM IST

ಪ್ಯಾಸೆಂಜರ್‌ ರೈಲು ಆರಂಭಕ್ಕೆ ಹಿಂದೇಟು

ಮಂಗಳೂರು: ಕಾಸರಗೋಡು- ಮಂಗಳೂರು ಮತ್ತು ಮಡಗಾಂವ್‌ – ಮಂಗ ಳೂರು ಮಧ್ಯೆ ಸಂಚರಿಸುತ್ತಿದ್ದ ಪ್ಯಾಸೆಂಜರ್‌ ರೈಲುಗಳನ್ನು ಪುನರಾರಂಭಿಸಲು ರೈಲ್ವೇ ಮಂಡಳಿ ಇನ್ನೂ ಅನುಮತಿ ನೀಡಿಲ್ಲ. ಇದರಿಂದ ಕರಾವಳಿ ಭಾಗದ ವಿದ್ಯಾರ್ಥಿಗಳು ಮತ್ತು ಸ್ಥಳೀಯ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಕೋವಿಡ್ ಅಡ್ಡಿ :

ಕಡಿಮೆಯಾಗಿ ಜನ ಜೀವನ ಬಹು ತೇಕ ಸಹಜ ಸ್ಥಿತಿಯತ್ತ ಮರಳುತ್ತಿದೆ. ಸ್ಥಗಿತ ಗೊಂಡಿರುವ ರೈಲುಗಳನ್ನು ವಿಶೇಷ ರೈಲು ಗಳಾಗಿ ಓಡಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಈ ಹಿಂದೆ ಇದ್ದ ಏಳು ಸಬರ್ಬನ್‌ ರೈಲು ಗಳನ್ನು ಡಿ. 8ರಿಂದ ಪ್ರಾರಂಭಿಸಲಾಗಿದೆ. ಆದರೆ ಕಾಸರಗೋಡು ಮತ್ತು ರಾಜ್ಯದ ಕರಾವಳಿಯ ಜನರಿಗೆ ಅತೀ ಉಪಯುಕ್ತವಾಗಿದ್ದ ಮತ್ತು ತೀರಾ ಅವಶ್ಯವಾಗಿರುವ ಪ್ಯಾಸೆಂಜರ್‌ ರೈಲುಗಳನ್ನು ಪುನರಾರಂಭಿಸಲು ರೈಲ್ವೇ ಮಂಡಳಿ ಹಿಂದೇಟು ಹಾಕುತ್ತಿದೆ. ಇದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಎಲ್ಲರಿಗೂ ಅನುಕೂಲಕರ :

ಮಂಗಳೂರು-ಮಡಗಾಂವ್‌ ಡೆಮು, ಪ್ಯಾಸೆಂಜರ್‌ ರೈಲುಗಳು ಈ ಭಾಗದವರಿಗೆ ಉಪಯುಕ್ತವಾಗಿದ್ದವು.

ಮಡಗಾಂವ್‌-ಮಂಗಳೂರು ಸೆಂಟ್ರಲ್‌ ಡೆಮು :

ಪ್ರಯಾಣ: ಬೆಳಗ್ಗೆ 5ಕ್ಕೆ ಮಡಗಾಂವ್‌ನಿಂದ ಹೊರಟು ಮಧ್ಯಾಹ್ನ 12.05ಕ್ಕೆ ಮಂಗಳೂರು ಸೆಂಟ್ರಲ್‌.

ಮರುಪ್ರಯಾಣ: ಅಪರಾಹ್ನ 2.45ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ರಾತ್ರಿ 10.30ಕ್ಕೆ ಮಡಗಾಂವ್‌

ಮಂಗಳೂರು-ಮಡಗಾಂವ್‌ ಪ್ಯಾಸೆಂಜರ್‌ ರೈಲು :

ಪ್ರಯಾಣ: ಬೆಳಗ್ಗೆ 5.30ಕ್ಕೆ ಮಂಗಳೂರಿನಿಂದ ಹೊರಟು ಅಪರಾಹ್ನ 12.40ಕ್ಕೆ ಮಡಗಾಂವ್‌.

ಮರುಪ್ರಯಾಣ: ಅಪರಾಹ್ನ 1ಕ್ಕೆ ಮಡಗಾಂವ್‌ನಿಂದ ಹೊರಟು ರಾತ್ರಿ 9.20ಕ್ಕೆ ಮಂಗಳೂರು.

ಪ್ರಯೋಜನ: ವಿದ್ಯಾರ್ಥಿಗಳು, ಪ್ರವಾಸಿಗರು, ಉದ್ಯೋಗಿಗಳು.

ಪ್ರಯಾಣಿಕರಿಗೆ ಆರ್ಥಿಕ ಹೊರೆ :

ಚೆರ್ವತ್ತೂರು -ಮಂಗಳೂರು, ಕಣ್ಣೂರು- ಮಂಗಳೂರು ಪ್ಯಾಸೆಂಜರ್‌ ರೈಲುಗಳು ವಿದ್ಯಾರ್ಥಿ ಗಳಿಗೆ,ಉದ್ಯೋಗಿಗಳಿಗೆ, ವ್ಯಾಪಾರ, ವ್ಯವಹಾರ ಉದ್ದೇಶಕ್ಕೆ ಬರುವವರಿಗೆ ಅನುಕೂಲಕರವಾಗಿತ್ತು. ಆದರೆ ಪ್ಯಾಸೆಂಜರ್‌ ರೈಲುಗಳು ಆರಂಭಗೊಳ್ಳದೆ ವಿದ್ಯಾರ್ಥಿಗಳು ಹೆಚ್ಚು ಹಣ ವ್ಯಯಿಸಿ ಬಸ್‌ ಸಂಚಾರ ನಡೆಸಬೇಕಿದೆ. ಇಲ್ಲವಾದರೆ ಮಂಗಳೂರಿನಲ್ಲೇ ಹಾಸ್ಟೆಲ್‌, ಪಿಜಿಗಳಲ್ಲಿ ಉಳಿಯುವ ಪರಿಸ್ಥಿತಿ ಎದುರಾಗಿದೆ. ಈ ಮಾರ್ಗದಲ್ಲಿ ಕೆಲವು ವಿಶೇಷ ರೈಲುಗಳು ಸಂಚರಿಸುತ್ತಿವೆ ಯಾದರೂ ಸೀಮಿತ ನಿಲ್ದಾಣಗಳಲ್ಲಷ್ಟೇ ನಿಲುಗಡೆ ಹೊಂದಿವೆ. ಅವುಗಳಿಗೆ ಕೌಂಟರ್‌ ಟಿಕೆಟ್‌ ಸಿಗುವುದಿಲ್ಲ.

ಕಾಸರಗೋಡಿನಿಂದ ಮಂಗಳೂರಿಗೆ ದಿನಂಪ್ರತಿ ಆಗಮಿಸುವ ಸಾವಿರಾರು ವಿದ್ಯಾರ್ಥಿಗಳು, ಉದ್ಯೋಗಿಗಳು ಪ್ಯಾಸೆಂಜರ್‌ ರೈಲುಗಳನ್ನೇ ಆಶ್ರಯಿಸಿದ್ದರು. ಸಾರ್ವಜನಿಕರಿಗೂ ಪ್ರಯೋಜನಕಾರಿಯಾಗಿತ್ತು. ಈಗ ಶಾಲೆ-ಕಾಲೇಜುಗಳು ಆರಂಭಗೊಂಡಿವೆ. ಸದ್ಯದಲ್ಲೇ ಪಾಲಾ^ಟ್‌ ವಿಭಾಗದ ರೈಲ್ವೇ ಬಳಕೆದಾರರ ಸಮಿತಿ ಸಭೆ ನಡೆಯುವ ಸಾಧ್ಯತೆಗಳಿದ್ದು, ಕೊರೊನಾ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಈ ರೈಲುಗಳ ಸಂಚಾರವನ್ನು ಕೂಡಲೇ ಮರು ಆರಂಭಿಸುವಂತೆ ಬೇಡಿಕೆ ಮಂಡಿಸುತ್ತೇನೆ.  - ಹನುಮಂತ ಕಾಮತ್‌, ಪಾಲ್ಘಾಟ್‌ ವಿಭಾಗ ರೈಲ್ವೇ ಬಳಕೆದಾರರ ಸಲಹಾ ಸಮಿತಿಯ ಸದಸ್ಯ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.