ಪೆರುವಾಜೆಯಲ್ಲಿ ಹೈಟೆಕ್‌ ಅಂಗನವಾಡಿ

ಹವಾನಿಯಂತ್ರಣ, ಸಿಸಿ ಕೆಮರಾ, ಟಿವಿ ಅಳವಡಿಸಿ ಮನೆಯ ವಾತಾವರಣ ಸೃಷ್ಟಿ

Team Udayavani, Mar 2, 2020, 5:20 AM IST

Hi-Tech-Anganwadi

ಸುಳ್ಯ: ಹವಾನಿಯಂತ್ರಿತ ಸೌಲಭ್ಯ, ಸಿ.ಸಿ. ಕೆಮರಾ, ಟಿ.ವಿ. ಹೀಗೆ ತತ್‌ಕ್ಷಣ ಕಂಡಾಗ ಮನೆಯಂತೆ ಕಾಣುವ ಈ ಕಟ್ಟಡ ಅಸಲಿಗೆ ಮನೆ ಅಲ್ಲ. ಹಲವು ಸೌಲಭ್ಯಗಳಿಂದ ಕೂಡಿರುವ ಮನೆ ವಾತಾವರಣ ಹೊಂದಿರುವ ಹೈಟೆಕ್‌ ಅಂಗನವಾಡಿ.

ಅವಿಭಜಿತ ಜಿಲ್ಲೆಯಲ್ಲೇ ಮಾದರಿ ಎನ್ನುವಂತಿರುವ ಸುಳ್ಯ ತಾಲೂಕಿನ ಪೆರುವಾಜೆಯಲ್ಲಿ ನೂತನವಾಗಿ ನಿರ್ಮಿಸಿರುವ ಈ ಅಂಗನವಾಡಿ ಕೇಂದ್ರ ಹಲವು ಹೊಸತನಗಳ ಸ್ಪರ್ಶದ ಮೂಲಕ ಗಮನ ಸೆಳೆಯುತ್ತಿದೆ.

ಹವಾನಿಯಂತ್ರಿತ ಅಂಗನವಾಡಿ
ಸುಮಾರು 26 ಪುಟಾಣಿಗಳಿರುವ ಇಲ್ಲಿನ ಅಂಗನವಾಡಿ ಕೇಂದ್ರವನ್ನು 11.95 ಲಕ್ಷ ರೂ. ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾಗಿದೆ. ಎರಡು ಕೊಠಡಿ ಹೊಂದಿದ್ದು, ಆರ್‌ಸಿಸಿ ಕಟ್ಟಡ ಇದಾಗಿದೆ. ಪುಟಾಣಿಗಳ ಚಟುವಟಿಕೆಗೆ ಪೂರಕವಾಗಿ ಕೊಠಡಿಗೆ ಹವಾನಿಯಂತ್ರಿತ ಸೌಲಭ್ಯ, ಟಿ.ವಿ., ಆಯಾಸ ನೀಗಲು ಹಾಗೂ ವಿಶ್ರಾಂತಿಗೆ ಹಾಸಿಗೆ, ಭದ್ರತಾ ವ್ಯವಸ್ಥೆಯಾಗಿ ಸಿಸಿ ಕೆಮರಾ, ರೆಫ್ರಿಜರೇಟರ್‌ ಸೌಲಭ್ಯ ಇರುವ ಅಡುಗೆ ಕೊಠಡಿ, ಸ್ಟಾಕ್‌ ರೂಂ ಹೀಗೆ ಹತ್ತಾರು ಸೌಲಭ್ಯ ಕಲ್ಪಿಸಲಾಗಿದೆ. ವಿದ್ಯುತ್‌ ಸಂಪರ್ಕ ಇದ್ದು, ಭವಿಷ್ಯತ್ತಿನಲ್ಲಿ ಸೋಲಾರ್‌ ಅಳವಡಿಸಲು ಉದ್ದೇಶಿಸಲಾಗಿದೆ.

11.95 ಲಕ್ಷ ರೂ. ವೆಚ್ಚ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಬಾರ್ಡ್‌ ಯೋಜನೆಯಲ್ಲಿ 6.95 ಲಕ್ಷ ರೂ. ಮತ್ತು ಪೆರುವಾಜೆ ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಡಿ 5 ಲಕ್ಷ ರೂ. ಸೇರಿ ಒಟ್ಟು 11.95 ಲಕ್ಷ ರೂ. ವೆಚ್ಚದಲ್ಲಿ ಈ ಕಟ್ಟಡ ನಿರ್ಮಿಸಲಾಗಿದೆ. ಸರಕಾರದ ಅನುದಾನದಲ್ಲಿ ಕಟ್ಟಡ ಹಾಗೂ ಇತರ ಸೌಲಭ್ಯಗಳನ್ನು ದಾನಿಗಳ ನೆರವಿನಿಂದ ಕ್ರೋಡೀಕರಿಸಲಾಗಿದೆ ಎನ್ನುತ್ತಾರೆ ದಾನಿಗಳ ಸಂಪರ್ಕದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗ್ರಾ.ಪಂ. ಉಪಾಧ್ಯಕ್ಷ ಸುನೀಲ್‌ ರೈ ಪೆರುವಾಜೆ.

ಪೂರಕ ಸವಲತ್ತು
ಪೆರುವಾಜೆ ನೂತನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಅನುಕೂಲಕ್ಕೆ ಪೂರಕವಾಗಿರುವ ಸವಲತ್ತುಗಳನ್ನು ಸರಕಾರದ ಅನುದಾನ ಮತ್ತು ದಾನಿಗಳ ಸಹಕಾರದಿಂದ ಒದಗಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 165 ಅಂಗನವಾಡಿಗಳಿವೆ ಎಂದು ಸುಳ್ಯದ ಸಿಡಿಪಿಒ ರಶ್ಮಿ ಅಶೊಕ್‌ ಹೇಳಿದರು.

ಮಾದರಿ ಅಂಗನವಾಡಿ
ಉದ್ಯೋಗ ಖಾತರಿ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅನುದಾನ ಬಳಸಿ ಈ ಅಂಗನವಾಡಿ ಕೇಂದ್ರ ನಿರ್ಮಿಸಲಾಗಿದೆ. ಇದೊಂದು ಮಾದರಿ ಅಂಗನವಾಡಿ ಕೇಂದ್ರವಾಗಬೇಕು ಎನ್ನುವುದು ಆಶಯ.
 - ಅನಸೂಯಾ, ಅಧ್ಯಕ್ಷರು, ಪೆರುವಾಜೆ ಗ್ರಾ.ಪಂ.

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.