ಮುಗುಳಿ ಶಾಲೆ ಮುಕುಟಕ್ಕೆ ಸುವರ್ಣ ಕಳೆ ತಂದ ದಾನಿಗಳು

ಶಾಲಾಭಿವೃದ್ಧಿಗೆ 7.50 ಲಕ್ಷ ರೂ. ವಿನಿಯೋಗ ; ನಮ್ಮೂರ ಸರಕಾರಿ ಶಾಲೆ ಕಲ್ಪನೆ

Team Udayavani, Feb 5, 2022, 4:23 PM IST

ಮುಗುಳಿ ಶಾಲೆ ಮುಕುಟಕ್ಕೆ ಸುವರ್ಣ ಕಳೆ ತಂದ ದಾನಿಗಳು

ಬೆಳ್ತಂಗಡಿ: ನಾವು ಬೆಳೆದ ಊರು, ನಾವು ಕಲಿತ ಶಾಲೆ ಎಂಬ ಅಭಿಮಾನ ಕೇವಲ ನಮ್ಮ ಬೆಳವಣಿಗೆಯ ಹಂತದವರೆಗೆ ಮಾತ್ರ ಸ್ಮರಿಸಿದರೆ ಸಾಲದು; ನಮ್ಮ ದುಡಿಮೆ ಒಂದಂಶವನ್ನು ಮುಂದಿನ ಪೀಳಿಗೆ ಸ್ಮರಿಸುವಂತ ಕೊಡುಗೆ ನೀಡಿದರೆ ಅದುವೇ ನಮ್ಮ ಕರ್ತವ್ಯ ಪ್ರಜ್ಞೆ ಎಂಬಂತೆ ಬಡವರ್ಗದ ಮಕ್ಕಳೇ ಇರುವ ಸರಕಾರಿ ಶಾಲೆಯೊಂದಕ್ಕೆ 7.50 ಲಕ್ಷ ರೂ. ವಿನಿಯೋಗಿಸಿ ಸಮಗ್ರ ಅಭಿವೃದ್ಧಿಗೆ ಪಣತೊಟ್ಟ ಮಾದರಿ ಶಿಕ್ಷಣ ಪ್ರೇಮಿಗಳಿವರು.

ಬೆಳ್ತಂಗಡಿ ತಾಲೂಕಿನ ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಮುಗುಳಿಯಲ್ಲಿ ಒಂದು ಪರಿಣಾಮಕಾರಿ ಶಿಕ್ಷಣ ಕ್ರಾಂತಿಗೆ ನಾಂದಿ ಹಾಡಿರುವ ಯಶೋಗಾಥೆಯಿದು. ದಾನಿಗಳ ಎರಡು ಎಕ್ರೆಯಲ್ಲಿ 1960ರಲ್ಲಿ 1ನೇ ತರಗತಿಯಿಂದ 7ನೇ ತರಗತಿವರೆಗೆ ಸ್ಥಾಪನೆಯಾದ ಶಾಲೆಯಿದು. ಸ್ಥಾಪಕ ಅಧ್ಯಕ್ಷರಾಗಿ ಮುಗುಳಿ ದಿ| ಎಂ.ಪರಮೇಶ್ವರ ರಾವ್‌ ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದವರು. 2012ರಲ್ಲಿ ಶಾಲೆ ಸುವರ್ಣ ಮಹೋತ್ಸವ ಆಚರಿಸಿದ್ದು, 2014ರಲ್ಲಿ ಶಿಕ್ಷಣ ಇಲಾಖೆಯಿಂದ ತಾಲೂಕಿನ ಉತ್ತಮ ಶಾಲೆ ಎಂಬ ಪ್ರಶಸ್ತಿಗೂ ಪಾತ್ರವಾಗಿದೆ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ವೇನೋ ಇದೆ. ಆದರೆ ಮೂಲ ಸೌಕರ್ಯವೆಂಬ ಕೊರಗು ಪ್ರತೀ ಮಕ್ಕಳಿಗೆ ಕಾಡುತ್ತಿದೆ.

ಇದೇ ಕೊರಗು ಮುಗುಳಿ ಶಾಲೆಗೂ ಕಾಡುತ್ತಿತ್ತು. ಮುಗುಳಿ ಶಾಲೆ ಆರಂಭಿಸುವ ಸಮಯ ಮಳೆಗಾದಲ್ಲಿ ಬೀಳುವ ಹಂತದಲ್ಲಿದ್ದಾಗ ದಿ| ಎಂ.ಪರಮೇಶ್ವರ ರಾವ್‌ ತಮ್ಮ ಮನೆ ನಿರ್ಮಾಣಕ್ಕೆಂದು ಇಟ್ಟಿದ್ದ ಅಡ್ಡಹಾಸು, ಹೆಂಚು ಇತ್ಯಾದಿ ಪರಿಕರಗಳನ್ನು ಶಾಲೆಗೆಂದು ದಾನವಾಗಿ ನೀಡಿ ಸದೃಢ ಶಿಕ್ಷಣಕ್ಕೆ ಕಾರಣಕರ್ತರಾಗಿದ್ದರು. ಈ ಸಮಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಂಚ್‌, ಡೆಸ್ಕ್, ಅನೇಕ ದಾನಿಗಳ ಸಹಕಾರವೂ ಶಾಲೆಗೆ ದೊರೆತಿತ್ತು. ಆದರೆ ಕಾಲಕ್ರಮೇಣ ಶಾಲೆ ದುಸ್ಥಿತಿಗೆ ತಲುಪಿತ್ತು.

ಮತ್ತೊಮ್ಮೆ ಅದೇ
ಕಲ್ಪನೆಯಡಿ ಪ್ರಗತಿ
ಶಾಲೆಯ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿ ಬೇಡಿಕೆ ಮೇರೆಗೆ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಇದೇ ಊರಿನವರಾದ ಜಗದೀಶ್‌ ರಾವ್‌ ಮುಗುಳಿ ತಾವು ಕಲಿತ ಶಾಲೆಯ ಅಭಿವೃದ್ಧಿಯನ್ನು ಚಿಂತಿಸಿದ್ದರು. ಇದಕ್ಕೆ ಸಹಕಾರ ನೀಡಿದವರು ಬೆಳ್ತಂಗಡಿಯ ಹಿರಿಯ ನ್ಯಾಯವಾದಿ ಬಿ.ಕೆ.ಧನಂಜಯ ರಾವ್‌. ಇವರಿಬ್ಬರ ಸಂಯೋಜನೆಯಲ್ಲಿ ರೋಟರಿ ಇಂದಿರಾನಗರ ಬೆಂಗಳೂರು ಹಾಗೂ ರೋಟರಿ ಬೆಳ್ತಂಗಡಿ ಸಹಭಾಗಿತ್ವದಲ್ಲಿ ಇದೀಗ 7.50 ಲಕ್ಷ ರೂ. ಶಾಲೆಯ ಅಭಿವೃದ್ಧಿಗೆ ಮೀಸಲಿರಿಸಲಾಗಿದೆ. ಈಗಾಗಲೆ ರೈಲಿನ ಮಾದರಿ ಶಾಲೆಗೆ ಬಣ್ಣ ಬಳಿದು, ಪ್ರತೀ ಕೊಠಡಿ ಸಹಿತ ಶೌಚಾಲಯಕ್ಕೆ ಟೈಲ್ಸ್‌ ಅಳವಡಿಕೆ, ಮುಂಭಾಗ ಗಾರ್ಡನಿಂಗ್‌ ರಚನೆ, ಧ್ವಜಸ್ತಂಭ ನಿರ್ಮಾಣ ಸಹಿತ ಅಗತ್ಯ ಸೌಕರ್ಯ ಒದಗಿಸಲಾಗುತ್ತಿದೆ.

ಬೇಡಿಕೆಗಳಿವೆ ಹತ್ತಾರು
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಇಬ್ರಾಹಿಂ ಶಾಲೆಯ ಬಹುತೇಕ ಅಗತ್ಯ ಕೆಲಸಗಳನ್ನು ತಾವೇ ನಿರ್ವಹಿಸಿ ಮುತುವರ್ಜಿ ವಹಿಸುತ್ತಿದ್ದಾರೆ. ಶಾಲೆಗೆ ಕಾಂಪೌಂಡ್‌ ಕೊರತೆ ಇದೆ, ಆಟದ ಮೈದಾನ ನಿರ್ವಹಣೆಯಿಲ್ಲದೆ ಸೊರಗುತ್ತಿದೆ. 1ರಿಂದ 7ರವರೆಗೆ ಪ್ರಸಕ್ತ 52 ವಿದ್ಯಾರ್ಥಿಗಳ ದಾಖಲಾತಿಯಿದೆ. ಮುಖ್ಯ ಶಿಕ್ಷಕರು ಸಹಿತ ಇಬ್ಬರು ಶಿಕ್ಷಕರ ಹುದ್ದೆ ಖಾಲಿ ಇದೆ. ಪ್ರಭಾರ ಮುಖ್ಯಶಿಕ್ಷಕಿಯಾಗಿ ಲೂಸಿಲೀನ ಮೊರಾಸ್‌ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಿಕ್ಷಕಿ ಶಶಿಕಲಾ ದಾನಿಗಳನ್ನು ಒಗ್ಗೂಡಿಸಿ ಶಾಲಾ ಏಳಿಗೆಗೆ ಶ್ರಮಿಸುತ್ತಿದ್ದಾರೆ.

ಮಾ. 19ಕ್ಕೆ ಹಸ್ತಾಂತರ
ಶಿಕ್ಷಣವೆಂಬುದು ಬದುಕಿನ ಬುನಾದಿ. ನಾವು ಕಲಿತ ಶಾಲೆಗೆ ನಮ್ಮಿಂದಾದ ಕೊಡುಗೆ ನೀಡಿಬೇಕು ಎಂಬ ಉದ್ದೇಶದಿಂದ ಮುಗುಳಿ ಸರಕಾರಿ ಶಾಲೆಗೆ ಶಿಕ್ಷಕರ ಬೇಡಿಕೆಯಂತೆ ಸವಲತ್ತು ಒದಗಿಸುತ್ತಿದ್ದೇವೆ. ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಿ ಅತ್ಯುತ್ತಮ ಫಲಿತಾಂಶ ತಂದುಕೊಡಬೇಕೆಂಬ ಬೇಡಿಕೆ ನಮ್ಮದು. ಶೀಘ್ರ ಕಾಮಗಾರಿ ಪೂರ್ಣಗೊಳಿಸಿ ಮಾ. 19ರಂದು ಹಸ್ತಾಂತರಿಸುವ ಯೋಜನೆಯಿದೆ.
-ಬಿ.ಕೆ.ಧನಂಜಯ ರಾವ್‌,
ಹಿರಿಯ ನ್ಯಾಯವಾದಿ

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.