ಗರಿಷ್ಠ ಸೌಲಭ್ಯಗಳ ಶಾಲೆಗೀಗ ಆಂಗ್ಲ ಮಾಧ್ಯಮ ಶಿಕ್ಷಣದ ಗರಿ


Team Udayavani, May 23, 2019, 6:00 AM IST

s-15

ಬಡಗನ್ನೂರು: ಮೂರು ವರ್ಷಗಳ ಹಿಂದೆಯೇ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳನ್ನು ಆರಂಭಿಸುವ ಮೂಲಕ ಯಶಸ್ಸನ್ನು ಕಂಡ ಕಾವು ಸರಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸ್ತುತ ವರ್ಷದಿಂದ 1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭವಾಗಲಿದೆ. ಆಂಗ್ಲ ಮತ್ತು ಕನ್ನಡ ಮಾಧ್ಯಮ ಎರಡೂ ವಿಭಾಗಗಳೂ ಇರಲಿದ್ದು, ಹೆತ್ತವರು ತಮ್ಮ ಆಸಕ್ತಿಯ ಮೇರೆಗೆ ಮಕ್ಕಳನ್ನು ಆಂಗ್ಲ ಅಥವಾ ಕನ್ನಡ ಮಾಧ್ಯಮಕ್ಕೆ ಸೇರಿಸಬಹುದಾಗಿದ್ದು, ಮೇ 21ರಿಂದಲೇ 1ನೇ ತರಗತಿಗೆ ದಾಖಲಾತಿಗಳು ಆರಂಭಗೊಂಡಿವೆ.

ಶತಮಾನೋತ್ಸವ ಕಂಡ ಶಾಲೆ
ಮಾಟ್ನೂರು ಗ್ರಾಮಕ್ಕೆ ಒಳಪಟ್ಟಿರುವ ಈ ಶಾಲೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವು ಎನ್ನುವಲ್ಲಿ ಇದೆ. 1914ರಲ್ಲಿ ಸ್ಥಾಪನೆಗೊಂಡ ಕಾವು ಸರಕಾರಿ ಶಾಲೆ 2004ರಲ್ಲಿ ಶತಮಾನೋತ್ಸವ ಆಚರಿಸಿದೆ. ಶಾಲೆಯಲ್ಲಿ ಒಟ್ಟು 13 ಕೊಠಡಿಗಳಿದ್ದು, ಇದರಲ್ಲಿ 8 ಕ್ಲಾಸ್‌ ರೂಮ್‌ಗಳಿವೆ. ಭೋಜನ ಕೊಠಡಿ, ಗ್ರಂಥಾಲಯ, ಬಿಸಿಯೂಟದ ಕೊಠಡಿ ಇವೆ. ಶಾಲೆಗೆ 1.85 ಎಕ್ರೆ ಜಾಗವಿದ್ದು, ವಿಶಾಲವಾದ ಆಟದ ಮೈದಾನವಿದೆ. ಸರಕಾರಿ ಶಾಲೆಯನ್ನು ದತ್ತು ಪಡೆದುಕೊಂಡು, ರಾಜ್ಯದಲ್ಲೇ ಮಾದರಿಯಾಗಿಸಲು ಹೊರಟಿರುವ ಸಾಹಸ ಗಾಥೆ ಇಲ್ಲಿದೆ. ಇಲ್ಲಿ ಸರಾಸರಿ 250 ವಿದ್ಯಾರ್ಥಿಗಳಿದ್ದಾರೆ.

ಸರಕಾರಿ ಶಾಲೆಗಳಲ್ಲಿ ಮೊದಲ ಬಾರಿಗೆ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಕ್ಲಾಸ್‌ಗಳನ್ನು ಆರಂಭ ಮಾಡಿದ ಹೆಗ್ಗಳಿಕೆ ಕಾವು ಸರಕಾರಿ ಶಾಲೆಗೆ ಸಲ್ಲಬೇಕಾಗಿದೆ. 2016ರಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳನ್ನು ಆರಂಭಿಸಲಾಯಿತು. ಮೂರು ವರ್ಷಗಳಿಂದ ಸರಾಸರಿ 60 ಮಕ್ಕಳು 1ನೇ ತರಗತಿಗೆ ಭಡ್ತಿ ಹೊಂದುತ್ತಿದ್ದಾರೆ ಎನ್ನುತ್ತಾರೆ ಶಾಲಾ ಮುಖ್ಯಗುರು ಬಿ. ಹುಕ್ರಪ್ಪ ನಾಯ್ಕ…. ಅತ್ಯಂತ ಕನಿಷ್ಠ ಶುಲ್ಕದೊಂದಿಗೆ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಎಲ್.ಕೆ.ಜಿ. ಯು.ಕೆ.ಜಿ. ತರಗತಿಗಳ ನಿರ್ವಹಣೆಗಾಗಿಯೇ ಇಬ್ಬರು ಶಿಕ್ಷಕಿಯರು ಹಾಗೂ ಓರ್ವ ಸಹಾಯಕಿಯನ್ನು ನೇಮಕ ಮಾಡಿಕೊಳ್ಳಲಾಗಿದೆ.

ಆಂಗ್ಲ ಮಾಧ್ಯಮ
ಕಾವು ಸರಕಾರಿ ಶಾಲೆಯಲ್ಲಿ 2019ರ ಜೂನ್‌ನಿಂದಲೇ 1ನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭವಾಗಲಿದೆ. ಸರಕಾರದ ನಿಯಮದಂತೆ ತಾಲೂಕಿನ 9 ಶಾಲೆಗಳಲ್ಲಿ 1ನೇ ತರಗತಿಯಿಂದಲೇ ಆಂಗ್ಲಮಾಧ್ಯಮ ಶಿಕ್ಷಣ ಆರಂಭವಾಗಲಿದ್ದು, ಅದರಲ್ಲಿ ಕಾವು ಸರಕಾರಿ ಶಾಲೆಯೂ ಒಂದು. ಶಾಲೆಯಲ್ಲಿ ಒಟ್ಟು 9 ಶಿಕ್ಷಕರಿದ್ದು, ಬ್ಬರು ಶಿಕ್ಷಕರಿಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ನಡೆಸಲು ವಿಶೇಷ ತರಬೇತಿಯೂ ನಡೆಯುತ್ತಿದೆ.

ಪ್ರಸಕ್ತ ವರ್ಷದಿಂದಲೇ ಹವಾ ನಿಯಂತ್ರಿತ ಸ್ಲಾರ್ಟ್‌ ಕ್ಲಾಸ್‌ ರೂಮ್‌ ಆರಂಭವಾಗಲಿದೆ. ಎಂಆರ್‌ಪಿಎಲ್‌ ವತಿಯಿಂದ ನಿರ್ಮಿಸಿಕೊಟ್ಟ ಅತ್ಯಾಧುನಿಕ ಸುಸಜ್ಜಿತ ಶೌಚಾಲಯವೂ ಜೂನ್‌ ತಿಂಗಳಲ್ಲಿ ಉದ್ಘಾಟನೆಗೊಳ್ಳಲಿದೆ. ರಂಗ ಮಂದಿರ ನಿರ್ಮಾಣ, ಹೊಸ ಕಟ್ಟಡಗಳ ನಿರ್ಮಾಣ ಯೋಜನೆಗಳಿವೆ.

ದತ್ತು ಸ್ವೀಕಾರ
ಕಾವು ಶಾಲಾ ಹಳೆ ವಿದ್ಯಾರ್ಥಿಯಾಗಿರುವ ಕಾವು ಹೇಮನಾಥ ಶೆಟ್ಟಿ ಮೂರು ವರ್ಷಗಳ ಹಿಂದೆ ಕಾವು ಶಾಲೆಯನ್ನು ದತ್ತು ಸ್ವೀಕರಿಸಿದರು. ಆ ಬಳಿಕ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಇವರ ಮುತುವರ್ಜಿಯಲ್ಲೇ ಎಲ….ಕೆ.ಜಿ., ಯು.ಕೆ.ಜಿ. ತರಗತಿಗಳನ್ನು ಆರಂಭಿಸಲಾಯಿತು. ಹೇಮನಾಥ ಶೆಟ್ಟಿಯವರ ಪತ್ನಿ, ಜಿ.ಪಂ. ಶಿಕ್ಷಣ ಮತ್ತು ಸ್ಥಾಯೀ ಸಮಿತಿ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ ಅವರು ಶಾಲೆಗೆ ಹಲವು ಅನುದಾನಗಳನ್ನು ಒದಗಿಸಿಕೊಟ್ಟಿದ್ದಾರೆ. ಕಾವು ಶ್ರೀ ಲಕ್ಷ್ಮೀಮಾಧವ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷ ಪಾವನರಾಮ ಅವರು ಎಲ್ಲ ತರಗತಿಗಳಿಗೆ ಧ್ವನಿವರ್ಧಕ, ಲ್ಯಾಪ್‌ಟಾಪ್‌ ಕೊಡುಗೆಯಾಗಿ ನೀಡಿದ್ದಾರೆ. ಕ್ರಿಯಾಶೀಲ ಶಿಕ್ಷಕರ ಕರ್ತವ್ಯ ಪ್ರಜ್ಞೆ, ಶಾಲಾಭಿವೃದ್ಧಿ ಸಮಿತಿ ಸಹಕಾರ, ದಾನಿಗಳು, ವಿದ್ಯಾರ್ಥಿಗಳು ಹಾಗೂ ಹೆತ್ತವರ ಉತ್ತೇಜನದಿಂದ ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಷ್ಟು ಸೌಲಭ್ಯಗಳನ್ನು ಪಡೆದುಕೊಂಡಿದೆ.

ಶಾಲಾ ಸೌಲಭ್ಯಗಳು
1ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ, ಎಂಆರ್‌ಪಿಎಲ್‌ ಕೊಡುಗೆಯ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ, ವಿಶಾಲವಾದ ಆಟದ ಮೈದಾನ, ವಾಚನಾಲಯ, ಸೌರವಿದ್ಯುತ್‌ ಘಟಕ, ಬಯೋಗ್ಯಾಸ್‌ ಘಟಕ, ಸುಸಜ್ಜಿತವಾದ ಭೋಜನ ಶಾಲೆ, ಎಲ್‌.ಕೆ.ಜಿ., ಯು.ಕೆ.ಜಿ. ತರಗತಿ, ಹವಾ ನಿಯಂತ್ರಿತ ಸ್ಮಾರ್ಟ್‌ ಕ್ಲಾಸ್‌ರೂಮ…, ಪ್ರಯೋಗ ಸಲಕರಣೆಗಳು, ಆಟೋಟ ಸಾಮಗ್ರಿಗಳು ಇತ್ಯಾದಿ ಸೌಲಭ್ಯಗಳಿವೆ.

ಸ್ಪರ್ಧೆಗೆ ಇಳಿದಿಲ್ಲ
ನಾವು ಯಾರ ಜತೆಯೂ ಸ್ಪರ್ಧೆಗೆ ಇಳಿದಿಲ್ಲ. ಸರಕಾರಿ ಶಾಲೆಯನ್ನು ರಾಜ್ಯದv ಮಾದರಿಯಾಗಿ ಮಾಡಬೇಕೆಂಬ ಊರಿನವರ ಕನಸಿಗೆ ಬೆಂಬಲ ನೀಡುತ್ತಿದ್ದೇನೆ. ಶ್ರೀಮಂತರ ಮಕ್ಕಳಷ್ಟೇ ಇಂಗ್ಲಿಷ್‌ ಕಲಿತರೆ ಸಾಕೇ? ಕೂಲಿ ಕಾರ್ಮಿಕನ ಮಕ್ಕಳೂ ಆಂಗ್ಲಭಾಷೆ ಕಲಿಯಬೇಕು. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು. ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ವಿದ್ಯಾದಾನ ನಡೆಯುತ್ತಿದೆ.
 - ಕಾವು ಹೇಮನಾಥ ಶೆಟ್ಟಿ, ಶಾಲೆಯನ್ನು ದತ್ತು ಪಡೆದವರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.