ತ್ಯಾಜ್ಯ ತುಂಬಿ ನಿಂತಿವೆ ಹೆದ್ದಾರಿ ಬದಿಯ ತೋಡುಗಳು
ಸುರತ್ಕಲ್: ಪೆಪ್ಲೈನ್ ಕಾಮಗಾರಿ ಅವಾಂತರ, ಹೂಳು, ಕಸಕಡ್ಡಿ
Team Udayavani, Apr 4, 2022, 11:36 AM IST
ಸುರತ್ಕಲ್: ಪಾಲಿಕೆಗೆ ಸೇರಿದ ರಾಜಕಾಲುವೆಯ ಸಮಸ್ಯೆಯಂತೆಯೇ ಹೆದ್ದಾರಿ ಇಲಾಖೆಯು ಚತುಷ್ಪಥ ರಸ್ತೆಯ ಇಕ್ಕೆಲಗಳಲ್ಲಿ ನಿರ್ಮಿಸಿದ ತೋಡುಗಳೂ ದುಃಸ್ಥಿತಿಯಲ್ಲಿವೆ. ಮಳೆ ನೀರು ರಸ್ತೆ ಮತ್ತು ಇಕ್ಕೆಲಗಳ ತಗ್ಗು ಪ್ರದೇಶಗಳಿಗೆ ನುಗ್ಗುವುದರಲ್ಲಿ ಅನುಮಾನವಿಲ್ಲ.
ಸುರತ್ಕಲ್ ಭಾಗದಲ್ಲಿ ಗ್ಯಾಸ್ ಪೈಪ್ ಲೈನ್, ಜಲಸಿರಿ, ಕೇಬಲ್ ಅಳವಡಿಕೆ ಹೀಗೆ ವಿವಿಧ ಕಾರಣಗಳಿಗಾಗಿ ಹೆದ್ದಾರಿ ಬದಿ ಹೊಂಡ ತೋಡಿ ಬಿಡಲಾಗಿದ್ದು, ಮಳೆಗೆ ಹೆದ್ದಾರಿ ಬದಿ ತೋಡು ಪಾಲಾಗಿದೆ. ಭೂಗತ ಗ್ಯಾಸ್ ಪೈಪ್ಲೈನ್ ಕೊರೆಯುವ ಸಂದರ್ಭ ಮೇಲೆ ಬಂದ ಕೆಸರು ಮಿಶ್ರಿತ ನೀರು ಮಣ್ಣು ಸಮೀಪದ ತೋಡು ಸೇರಿ ಭರ್ತಿಯಾಗಿದೆ. ಸುರತ್ಕಲ್ನ ತಡಂಬೈಲ್ ಮತ್ತು ಸರ್ವಿಸ್ ರಸ್ತೆಯ ನಡುವೆ ಕಾಮಗಾರಿ ನಡೆದ ಹಲವು ಕಡೆ ಇದೇ ಸ್ಥಿತಿಯಿದೆ. ಪೂರ್ವ ಮುಂಗಾರು ಇನ್ನೇನು ಆರಂಭವಾಗಲಿದ್ದು, ಇದುವರೆಗೆ ತೋಡು ಸ್ವತ್ಛಗೊಳಿಸುವ ಕೆಲಸಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿಲ್ಲ. ಅಧಿಕಾರಿಗಳು ಕನಿಷ್ಠ ಪಕ್ಷ ಸರ್ವಿಸ್ ರಸ್ತೆ, ತೋಡುಗಳ ಸ್ಥಿತಿಗತಿ ಪರಿಶೀಲನೆಯನ್ನೂ ನಡೆಸಿಲ್ಲ. ಹಲವು ಕಡೆ ವಿವಿಧ ಬಡಾವಣೆ, ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಸಂಪರ್ಕ ಕಲ್ಪಿಸಲು ತೋಡಿಗೆ ಮಣ್ಣು ಸುರಿಯಲಾಗಿದೆ. ಇನ್ನು ಹಲವೆಡೆ ಹೆದ್ದಾರಿ ಬದಿ ತೋಡುಗಳು ತ್ಯಾಜ್ಯ ಎಸೆಯುವ ಗುಂಡಿಯಾಗಿ ಮಾರ್ಪಟ್ಟಿವೆ. ಮಳೆನೀರಿನ ಜತೆಗೆ ತ್ಯಾಜ್ಯ ಸೇರಿಕೊಂಡು ಸರಾಗ ಹರಿವಿಗೆ ಅಡ್ಡಿಯಾಗಿ ಉಕ್ಕೇರುವುದು ಖಚಿತ. ಇನ್ನು ಹಲವು ಕಡೆ ತೋಡು ಬ್ಲಾಕ್ ಆಗಿ ಮಳೆ ನೀರು ಸರ್ವಿಸ್ ರಸ್ತೆಯಲ್ಲಿ ಹರಿದು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗುವ ಭೀತಿಯಿದೆ. ಹೆದ್ದಾರಿ ಇಲಾಖೆಯ ಅನುಮತಿಯೊಂದಿಗೆ ರಸ್ತೆ ಅಗೆದಿದ್ದರೂ ಪಾಲಿಕೆ ವ್ಯಾಪ್ತಿಯ ಬಡಾ ವಣೆಗಳಿಗೆ ಮಳೆಗಾಲದಲ್ಲಿ ಸಮಸ್ಯೆ ಆಗಲಿ ರುವುದರಿಂದ ಪಾಲಿಕೆ ಅಧಿಕಾರಿಗಳು ತೋಡುಗಳ ಸ್ವತ್ಛತೆಗೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಬೇಕಿದೆ.
ಮುಕ್ಕ ಪ್ರದೇಶದಲ್ಲಿ ಬೃಹತ್ ರಾಜ ಕಾಲುವೆಯ ಕಾಮಗಾರಿಗೆ ಹೆದ್ದಾರಿ ಇಲಾಖೆ ಮುಂದಾಗಿದ್ದು, ಮಳೆಗಾಲಕ್ಕೆ ಮುನ್ನ ಪೂರ್ಣಗೊಳಿಸಲು ಹೆಣಗಾಡುತ್ತಿದೆ. ಬೈಕಂಪಾಡಿ ಪ್ರದೇಶದಲ್ಲಿ ಇದ್ದ ತೋಡುಗಳು ಹೂಳು ತುಂಬಿ ಕಾಣದಂತಾಗಿವೆ. ಘನ ಟ್ರಕ್ಗಳ ಸಂಚಾರದಿಂದ ಈ ತೋಡುಗಳು ಸರ್ವನಾಶವಾಗಿವೆ. ವಿವಿಧೆಡೆ ಅಂಗಡಿ ಮುಂಗಟ್ಟುಗಳ ಮುಂಭಾಗ ತೋಡುಗಳಿಗೆ ಅಡ್ಡಲಾಗಿ ಪೈಪ್ಗ್ಳನ್ನು ಅಳವಡಿಸಿದೆ. ಇಲ್ಲಿ ಕಟ್ಟಿಕೊಂಡಿರುವ ತ್ಯಾಜ್ಯ ರಾಶಿಯನ್ನು ಸ್ವತ್ಛಗೊಳಿಸಿಲ್ಲ. ಬೈಕಂಪಾಡಿ ಜಂಕ್ಷನ್ ಭಾಗದಲ್ಲಿ ತೋಡುಗಳ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲೇ ಹರಿದು ಸ್ಥಳೀಯ ಕಾಲುವೆ ಸೇರುತ್ತದೆ. ಇದರಿಂದ ಒಳ ರಸ್ತೆಗಳ ಡಾಮರು ಎದ್ದು ಹೋಗಿದೆ.
ಹೆದ್ದಾರಿ ಬದಿಯ ತೋಡುಗಳ ನಿರ್ಮಾಣ ಅವೈಜ್ಞಾನಿಕವಾಗಿದ್ದು, ಚಿತ್ರಾಪುರ, ಕುಳಾಯಿ ಭಾಗದಲ್ಲಿ ಮಳೆ ನೀರು ತೋಡಿನಲ್ಲಿಯೇ ನಿಂತು ನುಸಿ ಕಾಟಕ್ಕೆ ಕಾರಣವಾಗುತ್ತಿದೆ.
ಹೆದ್ದಾರಿ ಅಧಿಕಾರಿಗಳೇ ಹೊಣೆ
ಹೆದ್ದಾರಿ ಬದಿ ತೋಡುಗಳು ಹೂಳು, ಕಸ ಕಡ್ಡಿ ಸ್ವತ್ಛತೆಗೆ ಹೆದ್ದಾರಿ ಇಲಾಖೆಯೇ ಮುಂದಾಗಬೇಕು. ಈ ಬಗ್ಗೆ ಪಾಲಿಕೆಯು ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವ ಕೆಲಸ ಮಾಡಲಿದೆ. ಮಳೆಗಾಲದಲ್ಲಿ ಮನೆ, ಬಡಾವಣೆಗೆ ಕೃತಕ ನೀರು ನುಗ್ಗಿದರೆ ಹೆದ್ದಾರಿ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು. -ಪ್ರೇಮಾನಂದ ಶೆಟ್ಟಿ, ಮೇಯರ್, ಮಂಗಳೂರು ಮನಪಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಬಸ್ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!
MUST WATCH
ಹೊಸ ಸೇರ್ಪಡೆ
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು