ಅರ್ಧಕ್ಕೆ ನಿಂತ ಹೆದ್ದಾರಿ ಕಾಮಗಾರಿ; ಸಂಚಾರ ದುಸ್ತರ


Team Udayavani, Aug 13, 2021, 3:20 AM IST

ಅರ್ಧಕ್ಕೆ ನಿಂತ ಹೆದ್ದಾರಿ ಕಾಮಗಾರಿ; ಸಂಚಾರ ದುಸ್ತರ

ತೆಂಕಎಡಪದವು ಗ್ರಾಮ ಹಾದು ಹೋಗುವ ರಾಜ್ಯ ಹೆದ್ದಾರಿ ಬದಿ ಚರಂಡಿ ಇಲ್ಲದೇ ಇರುವುದರಿಂದ ಸಮಸ್ಯೆಯನ್ನು ಎದುರಿಸುವಂತಾಗಿದೆ. ಅಲ್ಲದೇ ಗ್ರಾಮವು ವಿವಿಧ ಮೂಲ ಸೌಲಭ್ಯಗಳನ್ನು ಎದುರಿಸುತ್ತಿದ್ದು, ಇದನ್ನು ಪರಿಹರಿಸಲು ಮುಂದಾಗಬೇಕಿದೆ. ಸಂಬಂಧಪಟ್ಟವರನ್ನು ಗಮನಸೆಳೆಯಲು “ಉದಯವಾಣಿ ಸುದಿನ’ವು ಒಂದು ಊರು-ಹಲವು ದೂರು ಸರಣಿಯ ಮೂಲಕ ಪ್ರಯತ್ನಿಸಲಾಗಿದೆ.

ಕೈಕಂಬ: ತೆಂಕ ಎಡಪದವು ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುತ್ತದೆ. ಆದರೆ ಮಳೆಯ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆಯೇ ಇಲ್ಲ. ಇದರಿಂದಾಗಿ ಹೆದ್ದಾರಿಯಲ್ಲಿಯೇ ಮಳೆ ನೀರು ಹರಿದು ಹೋಗುತ್ತದೆ. ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ಅಗತ್ಯವಿದೆ.

9.62 ಕೋ.ರೂ. ಅನುದಾನದಲ್ಲಿ ಎಡಪದವು ಕುಪ್ಪೆಪದವು-ಮುತ್ತೂರು ಮೂಲಕ ಬಂಟ್ವಾಳ ತಾಲೂಕು ಸಂಪರ್ಕಿಸುವ ರಾಜ್ಯ ಹೆದ್ದಾರಿಯ 4ನೇ ಹಂತದ ಅಭಿವೃದ್ಧಿ ಕಾಮಗಾರಿ ಅರ್ಧದಲ್ಲಿ ನಿಂತಿದೆ. ಕಳೆದ ವರ್ಷದ ಆ. 24ರಂದು ಕಾಮಗಾರಿಯ ಗುದ್ದಲಿಪೂಜೆ ನಡೆದಿತ್ತು. ಎಡಪದವು-ಕುಪ್ಪೆಪದವು- ಮುತ್ತೂರು ತನಕ 7.40 ಕಿ.ಮೀ. ಡಾಮರು ಕಾಮಗಾರಿ ಹಾಗೂ 5.50ಮೀ. ನಿಂದ ರಸ್ತೆಯ 7ಮೀ. ನವರೆಗೆ ವಿಸ್ತರಣೆಯಾಗಬೇಕಿತ್ತು. ಅದರೆ ಎಡಪದವಿನಿಂದ ಪದ್ರೆಂಗಿ ತನಕ ವಿಸ್ತರಣೆ ಕಾಮಗಾರಿ ನಡೆದು ಜಲ್ಲಿಕಲ್ಲು ಹಾಕಲಾಗಿದೆ. ಬಳಿಕ ಮುಂದೆ ಕಾಮಗಾರಿಯೇ ನಡೆದಿಲ್ಲ. ಜಲ್ಲಿಕಲ್ಲು ಮಳೆಗೆ ಕೊಚ್ಚಿ ಹೋಗಿದ್ದು, ವಾಹನಗಳ ಸಂಚಾರಕ್ಕೆ ರಸ್ತೆಯೂ ಅಪಾಯಕಾರಿಯಾಗಿದೆ. ಕಳೆದ 6 ತಿಂಗಳಿನಿಂದ ಯಾವುದೇ ಕಾಮಗಾರಿ ನಡೆದಿಲ್ಲ.

ರಾಷ್ಟ್ರೀಯ ಹೆದ್ದಾರಿ 169ಗೆ ಕುಪ್ಪೆಪದವಿನ ರಾಜ್ಯ ಹೆದ್ದಾರಿಯು ಎಡಪದವು ಪೇಟೆಯಲ್ಲಿ ಸಂಪರ್ಕಿಸುತ್ತದೆ. ಆದರೆ ಆ ಪ್ರದೇಶದ ಅಗಲ ಕಿರಿದಾಗಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇಲ್ಲಿ ಎಲ್ಲೆಂದರಲ್ಲಿ ವಾಹನ ನಿಲುಗಡೆಯಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ.

ತೆಂಕಎಡಪದವು ಗ್ರಾಮ ಹಾದು ಹೋಗುವ ರಾಜ್ಯ ಹೆದ್ದಾರಿ ಬದಿ ಚರಂಡಿ ಇಲ್ಲದೇ ಇರುವುದರಿಂದ ಸಮಸ್ಯೆಯನ್ನು ಎದುರಿಸುವಂತಾಗಿದೆ. ಅಲ್ಲದೇ ಗ್ರಾಮವು ವಿವಿಧ ಮೂಲ ಸೌಲಭ್ಯಗಳನ್ನು ಎದುರಿಸುತ್ತಿದ್ದು, ಇದನ್ನು ಪರಿಹರಿಸಲು ಮುಂದಾಗಬೇಕಿದೆ. ಸಂಬಂಧಪಟ್ಟವರನ್ನು ಗಮನಸೆಳೆಯಲು “ಉದಯವಾಣಿ ಸುದಿನ’ವು ಒಂದು ಊರು-ಹಲವು ದೂರು ಸರಣಿಯ ಮೂಲಕ ಪ್ರಯತ್ನಿಸಲಾಗಿದೆ.

ಸರಕಾರಿ ಸವಲತ್ತುಗಳು ಕಡಿಮೆ :

ಎಡಪದವು ಪೇಟೆಯಾದರೂ ಹೆಚ್ಚಿನ ಜನಸಂಖ್ಯೆ ಇದ್ದರೂ ಕೂಡ ಇಲ್ಲಿ ಯಾವುದೇ ಸರಕಾರಿ ಸೌಕರ್ಯ ಪಡೆಯಬೇಕಾದರೆ ಬೇರೆ ಗ್ರಾಮವನ್ನು ಆಶ್ರಯಿಸಬೇಕಾಗಿದೆ. ಕುಪ್ಪೆಪದವು, ಕೊಂಪದವು, ಗಂಜಿಮಠಗಳಲ್ಲಿ ಪ್ರಾ.ಆ. ಕೇಂದ್ರ ಇದ್ದು ಅದನ್ನೇ ನಂಬಿ ಇರಬೇಕು. ದಾದಿಯ ಉಪಕೇಂದ್ರ ಮಾತ್ರ ಇದೆ. ಅಲ್ಲಿ ದಾದಿಯರೇ ಇಲ್ಲ. ಪಶು ವೈದ್ಯಕೀಯ ಚಿಕಿತ್ಸೆ ಕೇಂದ್ರ, ಮೊರಾರ್ಜಿ ವಸತಿ ಕೇಂದ್ರ, ನೆಮ್ಮದಿ ಕೇಂದ್ರ, ರೈತ ಸಂಪರ್ಕ ಕೇಂದ್ರ ಇಲ್ಲದಿರುವ ಕಾರಣ ಪಕ್ಕದ ಗ್ರಾಮಗಳನ್ನು ನಂಬಿಬೇಕಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಕಾಲೇಜು ಇಲ್ಲ ದೇ ಕಾರಣ ಉನ್ನತ ಶಿಕ್ಷಣಕ್ಕೆ ಮೂಡುಬಿದಿರೆ ಅಥವಾ ಮಂಗಳೂರಿಗೆ ತೆರಳಬೇಕಾಗಿದೆ.

ಇತರ ಸಮಸ್ಯೆಗಳೇನು? :

ಜ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾರಣ ಹೇಳಿ ಹಲವು ವರ್ಷಗಳಾಗುತ್ತಾ ಬಂದಿದೆ. ಆದರೆ ಇನ್ನು ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯ ಇಲ್ಲ. ಪೇಟೆಯಲ್ಲಿ ಹೆಚ್ಚು ಖಾಸಗಿ ಸ್ಥಳ ಇರುವುದರಿಂದ ಇದಕ್ಕೆ ಕಾರಣ ಎಂದು ಹೇಳಲಾಗುತ್ತದೆ

  • ಬಸ್‌ ನಿಲ್ದಾಣ ಹಾಗೂ ಪ್ರಯಾಣಿಕರ ತಂಗುದಾಣವೂ ಸಮರ್ಪಕವಾಗಿ ಇಲ್ಲ. ರಸ್ತೆಯಲ್ಲಿಯೇ ಪ್ರಯಾಣಿಕರು ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪಾರ್ಕಿಂಗ್‌ ವ್ಯವಸ್ಥೆ ಇಲ್ಲದೇ
  • ವಾಹನಗಳನ್ನು ಅಡ್ಡಾದಿಡ್ಡಿ ಪಾರ್ಕಿಂಗ್‌ ಮಾಡಲಾಗುತ್ತಿದೆ. ಇದರಿಂದ ವಾಹನ ಸಂಚಾರಕ್ಕೂ ತೊಂದರೆಯಾಗಿದೆ.
  • ಕೃಷಿ ಮಾರುಕಟ್ಟೆ ಇದ್ದರೂ ಅದು ಉಪಯೋಗಕ್ಕೆ ಇಲ್ಲದಂತಾಗಿದೆ. ಈ ಬಗ್ಗೆ ಗಮನಹರಿಸಿ ರೈತರಿಗೆ ಉಪಯೋಗಕ್ಕೆ ಬರುವಂತೆ ಮಾಡಬೇಕಿದೆ.
  • ಎಡಪದವು -ಒಡೂxರು -ಗಂಜಿಮಠ ಸಂಪರ್ಕಿಸುವ ರಸ್ತೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೀಘ್ರ ಅನುಷ್ಠಾನ ಆಗಬೇಕೆಂಬುದು ಸ್ಥಳೀಯರ ಬೇಡಿಕೆ.
  • ಕೋರ್ಡೆಲ್‌ ಪ್ರದೇಶದಲ್ಲಿ ನೀರಿನ ಸಮಸ್ಯೆ ಇದೆ. ಹೊಸ ಕೊಳವೆ ಬಾವಿಯಲ್ಲೂ ನೀರಿಲ್ಲ. ಸುಮಾರು 40 ರಷ್ಟು ಕೊಳವೆ ಬಾವಿ, 6 ಸರಕಾರಿ ಬಾವಿಗಳಿವೆ.
  • ಮಾಡಪಾಡಿ-ಕೋರ್ಡೆಲ್‌ಗೆ ಸಂಪರ್ಕಕ್ಕೆ ಬಸ್‌ ವ್ಯವಸ್ಥೆಯೇ ಇಲ್ಲ. ಕಣ್ಣೋರಿ- ಕೊಂಪದವು ಇಲ್ಲಿಗೆ ಬಸ್‌ನ ವ್ಯವಸ್ಥೆ ಆಗಬೇಕಿದೆ.
  • ಪೂಪಾಡಿಕಲ್ಲು ಪ್ರದೇಶಕ್ಕೆ ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ ಇದೆ.
  • ಮನೆ ನಿವೇಶನಕ್ಕೆ 400 ಅರ್ಜಿಗಳು ಬಂದಿವೆ. ಮಾಡಪಾಡಿಯಲ್ಲಿ 2 ಎಕರೆ ಜಾಗ ಮನೆ ನಿವೇಶನಗಳ ನೀಡಿಕೆಗೆ ಜಾಗ ಕಾದಿರಿಸಲಾಗಿದೆ. ಪದ್ರೆಂಗಿಯಲ್ಲಿ 4 ಎಕರೆ ಜಾಗವನ್ನು ಸರ್ವೆಗೆ ಕಳುಹಿಸಲಾಗಿದೆ. 94ಸಿಸಿಯಲ್ಲಿ 4 ಮನೆೆಗಳಿಗೆ ಹಕ್ಕು ಪತ್ರ ನೀಡಲು ಬಾಕಿ ಇದೆ.
  • ತ್ಯಾಜ್ಯ ಘಟಕಕ್ಕೆ ಕಣ್ಣೋರಿಯಲ್ಲಿ 1ಎಕರೆ ಜಾಗದಲ್ಲಿ ತ್ಯಾಜ್ಯ ಘಟಕ ಸಿದ್ಧಗೊಂಡಿದೆ. ವಿಲೇವಾರಿಗೆ ವಾಹನ ತರಲು ಬಾಕಿ ಇದೆ.

 

-ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.