ಮುಸ್ಲಿಂ ಬಾಂಧವರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂ ಯುವಕರು
ಅಯೋಧ್ಯಾ ತೀರ್ಪು, ಈದ್ ಮಿಲಾದ್ ಹಬ್ಬ
Team Udayavani, Nov 10, 2019, 6:29 PM IST
ಸುಬ್ರಹ್ಮಣ್ಯ ; ಸುಪ್ರೀಂ ಕೋರ್ಟ್ ಆಯೋಧ್ಯಾ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ನೀಡಿದ ಐತಿಹಾಸಿಕ ತೀರ್ಪನ್ನು ದೇಶದ ಎಲ್ಲ ಧರ್ಮಮ ಜಾತಿ. ಮತ ಪಂಥಕ್ಕೆ ಸೇರಿದ ಜನ ಸ್ವಾಗತಿಸಿದರೆ ಇತ್ತ ಪಂಜದ ಯುವಕರು ವಿಶೇಷವಾಗಿ ಮುಸ್ಲಿಂ ಬಾಂಧವರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಳೆಂಜ ಪಂಜ ಮಾರ್ಗವಾಗಿ ನೆಲ್ಲಿಕಟ್ಟೆ ತನಕ ಮೆರವಣಿಗೆ ನಡೆಯುತ್ತಿದ್ದ ವೇಳೆ ಪಂಜದಲ್ಲಿ ಮುಸ್ಲಿಂ ಬಾಂಧವರಿಗೆ ಸಿಹಿತಿಂಡಿ ಹಂಚಿ ಭಾವೈಕ್ಯತೆ ಮೆರೆದಿದ್ದಾರೆ.
ಬಹಳ ಸಮಯದಿಂದ ಇತ್ಯರ್ಥವಾಗದೆ ರಾಜಕೀಯ ಪಕ್ಷಗಳ ಚುನಾವಣಾ ದಾಳವಾಗಿ ಉಪಯೋಗವಾಗುತ್ತಿದ್ದ ಅಯೋಧ್ಯ ವಿಚಾರವೂ ಸೌಹಾರ್ದಯುತವಾಗಿ ಮುಗಿದು ಎರಡು ಧರ್ಮದವರು ಸಹ ಶಾಂತಿ ಕಾಪಾಡಿಕೊಂಡು ಬಂದಂತಾಗಬೇಕು ಎಂಬ ಆಶಯ ವ್ಯಕ್ತಪಡಿಸಿದ ಪಂಜದ ಸಹೃದಯಿ ಹಿಂದೂ ಸಹೋದರರು ವಿಶೇಷ ರೀತಿಯಲ್ಲಿ ಸಂಭ್ರಮಾಚರಣೆ ನಡೆಸಿ ಆದರ್ಶಪ್ರಾಯರಾದರು.
ಈ ಸಂದರ್ಭ ಆಶಿತ್ ಕಲ್ಲಾಜೆ, ನಿಧೀಶ್ ಕಕ್ಯಾನ, ರಮೇಶ್ ಪುತ್ಯ ಪಂಜ ಬದ್ರಿಯಾ ಜುಮ್ಮಾ ಮಸೀದಿಯ ಗುರುಗಳಾದ ಗುರು ಝಿಯಾದ್ ಸಾಕಪಿ. ಅಧ್ಯಕ್ಷ ಉಮರ್ ಸಿಗೆಯಾಡಿ, ಅಬ್ಬಾಸ್ ಮುಸ್ಲಿಯಾರ್, ರಫೀಕ್ ಕಬಕ ಮತ್ತು ಸಿದ್ಧೀಕ್ ಪೊಳೆಂಜ, ಚಂದ್ರಶೇಖರ ಕರಿಮಜಲು ದಯಾನಂದ ಎಣ್ಮೂರು, ರೋಹಿತ್ ಚೀಮುಳ್ಳು, ಉದಯ ಪಲ್ಲೋಡಿ, ಭರತ್ ಪಂಜ, ವಸಂತ ಅಡ್ಕ, ರಂಜಿತ್ ಪಂಜ, ಕೀರ್ತನ್ ಪಲ್ಲೋಡಿ ಹಾಗೂ ನೂರಾರು ಮಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ