ಸಂಸ್ಕಾರ, ಸಂಸ್ಕೃತಿಯಿಂದ ಹಿಂದೂ ಧರ್ಮ ಸಮೃದ್ಧಿ

ಗುರುವಂದನ, ಪೌರ ಸಮ್ಮಾನ ಸ್ವೀಕರಿಸಿ ಒಡಿಯೂರು ಶ್ರೀ

Team Udayavani, Nov 22, 2021, 5:21 AM IST

ಸಂಸ್ಕಾರ, ಸಂಸ್ಕೃತಿಯಿಂದ ಹಿಂದೂ ಧರ್ಮ ಸಮೃದ್ಧಿ

ಮಂಗಳೂರು: ಮತಾಂತರ, ಧಾರ್ಮಿಕ ಸ್ಥಳಗಳಿಗೆ ಹಾನಿ ಸೇರಿದಂತೆ ಹಿಂದೂ ಧರ್ಮಕ್ಕೆ ಎದುರಾಗುವ ಎಲ್ಲ ರೀತಿಯ ಸವಾಲುಗಳನ್ನು ದಿಟ್ಟವಾಗಿ ಎದುರಿಸುವ ಶಕ್ತಿ ಸಮಾಜಕ್ಕಿದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರು ದೇವಾನಂದ ಸ್ವಾಮೀಜಿ ಹೇಳಿದರು.

ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿಯವ ರಿಗೆ ಮಂಗಳೂರಿನ ಶ್ರೀ ಷಷ್ಟಬ್ದ ಸಮಿತಿ ವತಿಯಿಂದ ನಗರದ ಶಾರದಾ ವಿದ್ಯಾಲಯದಲ್ಲಿ ರವಿವಾರ ನಡೆದ ಶ್ರೀ ಗುರುವಂದನ ಪೌರ ಸಮ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ತನ್ನನ್ನು ತಾನು ಅರಿತುಕೊಳ್ಳದಿದ್ದರೆ ಆವಾಂತರಕ್ಕೆ ಕಾರಣವಾಗುತ್ತದೆ. ಸ್ವಧರ್ಮದಿಂದ ಬದುಕಿದರೆ ಶ್ರೇಯಸ್ಸು. ಸಂಸ್ಕಾರ, ಸಂಸ್ಕೃತಿಯಿಂದ ಹಿಂದೂ ಧರ್ಮ ಸಮೃದ್ಧಿ ಎಂದರು.

ಸಂಸ್ಕೃತಿ, ಸಂಸ್ಕಾರಕ್ಕೆ ಶ್ರೀಗಳ ಕೊಡುಗೆ
ಮೂಡಬಿದಿರೆ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮಿ ಗಳು ಮಾತನಾಡಿ, ತುಳು ನಾಡಿನಲ್ಲಿ ಸಂಸ್ಕೃತಿ, ಸಂಸ್ಕಾರ ಮುನ್ನಡೆ ಸುವ ಕಾರ್ಯವನ್ನು ಒಡಿಯೂರು ಶ್ರೀಗಳು ಅತ್ಯಂತ ಶ್ರೇಷ್ಠವಾಗಿ ನಡೆಸಿಕೊಟ್ಟಿದ್ದಾರೆ ಎಂದು ಹೇಳಿದರು.

ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹಾಗೂ ಶ್ರೀ ಕ್ಷೇತ್ರ ಒಡಿಯೂರಿನ ಸಾದ್ವಿ ಶ್ರೀ ಮಾತಾನಂದಮಯಿ ಆಶೀರ್ವಚನವಿತ್ತರು. ಒಡಿಯೂರು ಶ್ರೀಗಳ ಷಷ್ಟ éಬ್ದ ಕಾರ್ಯಕ್ರಮದ ಮಂಗಳೂರು ಸಮಿತಿ ಅಧ್ಯಕ್ಷ ಪುಷ್ಪ ರಾಜ್‌ ಜೈನ್‌ ಅಧ್ಯಕ್ಷತೆ ವಹಿಸಿದ್ದರು.
ಸಂಸದ ನಳಿನ್‌ ಕುಮಾರ್‌ ಕಟೀಲು, ಮೇಯರ್‌ ಪ್ರೇಮಾನಂದ ಶೆಟ್ಟಿ, ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ್‌ ಕಲ್ಕೂರ, ಒಡಿಯೂರು ಶ್ರೀಗಳ ಷಷ್ಟಬ್ದ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಮಂಗಳೂರು ಸಮಿತಿ ಪ್ರಧಾನ ಕಾರ್ಯದರ್ಶಿ ತಾರಾನಾಥ ಶೆಟ್ಟಿ ಬೋಳಾರ, ಕೋಶಾಧಿಕಾರಿ ಎಂ.ಪಿ. ದಿನೇಶ್‌, ಸಂಚಾಲಕ ನಾಗರಾಜ ಆಚಾರ್ಯ, ಸಂಯೋಜಕ ಪ್ರದೀಪ್‌ ಆಳ್ವ ಕದ್ರಿ, ಸುರೇಶ್‌ ರೈ ಉಪಸ್ಥಿತರಿದ್ದರು.

ಇದನ್ನೂ ಓದಿ:ಭಾರತದಲ್ಲಿ ಬೂಸ್ಟರ್‌ ಡೋಸ್‌ ಲಸಿಕೆಯ ಅವಶ್ಯಕತೆಯಿಲ್ಲ : ಐಸಿಎಂಆರ್‌

ಸಮಿತಿಯ ಕಾರ್ಯಾಧ್ಯಕ್ಷ ಜಿತೇಂದ್ರ ಕೊಟ್ಟಾರಿ ಸ್ವಾಗತಿಸಿದರು. ಭಾಸ್ಕರ ರೈ ಕುಕ್ಕುವಳ್ಳಿ ನಿರೂಪಿಸಿದರು. ಬೆಳಗ್ಗೆ 9 ರಿಂದ ಆಯ್ದ 60 ಭಜನಾ ತಂಡಗಳಿಂದ ಶ್ರೀ ಆಂಜನೇಯ, ಶ್ರೀ ದತ್ತಾತ್ರೇಯ, ಶ್ರೀ ಗುರು ಹಾಗೂ ಹನುಮಾನ್‌ ಚಾಲೀಸ ಸಾಹಿತ್ಯ ಗಳನ್ನೊಳಗೊಂಡ ಭಜನೆ/ಸಂಕೀರ್ತನೆ ಸ್ಪರ್ಧೆ ನಡೆಯಿತು.

ಸಾಧಕರಿಗೆ ಸಮ್ಮಾನ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವಾಸುದೇವ್‌ ಆರ್‌. ಕೊಟ್ಟಾರಿ (ಧಾರ್ಮಿಕ), ಡಾ| ಜಗದೀಶ್‌ ಶೆಟ್ಟಿ ಬಿಜೈ (ಯೋಗ ಪ್ರಸಾರ), ಸುಧಾಕರ ರಾವ್‌ ಪೇಜಾವರ (ಸಂಘಟನೆ), ಸಿಎ ರಾಮ ಮೋಹನ ರೈ (ಶಿಕ್ಷಣ), ಗಣೇಶ್‌ ಕುಲಾಲ್‌ ಉರ್ವ (ಸಮಾಜ ಸೇವೆ) ಮತ್ತು ಸುಮತಿ ಶೆಣೈ (ಸಮಾಜ ಸೇವೆ) ಅವರಿಗೆ ಶ್ರೀ ಗುರುದೇವಾನಂದಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.