ಇತಿಹಾಸದ ಪುಟ ಸೇರಲಿರುವ ಹಳೆ ಮುನ್ಸಿಪಾಲಿಟಿ ಕಟ್ಟಡ!

ರಸ್ತೆ ಅಭಿವೃದ್ಧಿ ಹಿನ್ನೆಲೆಯಲ್ಲಿ ಕಟ್ಟಡ ತೆರವಿಗೆ ಪಾಲಿಕೆ ತೀರ್ಮಾನ

Team Udayavani, Jan 19, 2022, 7:25 PM IST

ಇತಿಹಾಸದ ಪುಟ ಸೇರಲಿರುವ ಹಳೆ ಮುನ್ಸಿಪಾಲಿಟಿ ಕಟ್ಟಡ!

ಬಂದರು: ಶತಮಾನಗಳ ಇತಿಹಾಸ ಹೊಂದಿರುವ ಹಾಗೂ ಮಂಗಳೂರಿನ ಸ್ಥಳೀಯಾಡಳಿತದಲ್ಲಿ ಮಹತ್ವದ ನಿರ್ಧಾರಗಳಿಗೆ ಸಾಕ್ಷಿಯಾಗಿದ್ದ ಹಳೆ ಬಂದರು ಸ್ಟರಕ್‌ ವೃತ್ತದ ಬಳಿಯ ಮುನ್ಸಿಪಾಲಿಟಿ ಕಚೇರಿ ಕಟ್ಟಡವು(ಹಳೆ ಪಾಲಿಕೆ ಕಟ್ಟಡ)ಇನ್ನು ನೆನಪು ಮಾತ್ರ!

ಜಿಲ್ಲಾಧಿಕಾರಿ ಕಚೇರಿಯಿಂದ ಮೀನು ಗಾರಿಕೆ ಬಂದರಿಗೆ ತೆರಳುವ ರಸ್ತೆಯ ಬಲಬದಿಯಲ್ಲಿರುವ ನಗರ ಆರೋಗ್ಯ ಪ್ರಾಥಮಿಕ ಕೇಂದ್ರದ ಮುಂಭಾಗದಲ್ಲಿನ ಹಿಂದಿನ ಮುನ್ಸಿಪಾಲಿಟಿ ಕಟ್ಟಡವನ್ನು ರಸ್ತೆ ಅಭಿವೃದ್ಧಿ ಹಿನ್ನೆಲೆಯಲ್ಲಿ ತೆರವುಗೊಳಿಸಲುಪಾಲಿಕೆ ತೀರ್ಮಾನಿಸಿದೆ. ಸಂಪೂರ್ಣ ಶಿಥಿಲಾವಸ್ಥೆಯಲ್ಲಿರುವ ಈ ಕಟ್ಟಡವನ್ನು ತೆರವುಗೊಳಿಸಿ ರಸ್ತೆ ಅಭಿವೃದ್ಧಿ ಹಾಗೂ ಪಾಲಿಕೆಯ ಇತರ ಕಾರ್ಯಗಳಿಗೆ ಮೀಸಲಿಡಲು ಉದ್ದೇಶಿಸಲಾಗಿದೆ.

ಸ್ಮಾರ್ಟ್‌ಸಿಟಿಯಿಂದ ಮಂಗಳೂರು ಪಾಲಿಕೆಗೆ ಪತ್ರ
ಪಾಲಿಕೆಯ 45ನೇ ಪೋರ್ಟ್‌ ವಾರ್ಡ್‌ಗೆ ಸಂಬಂಧಿಸಿ ಸ್ಮಾರ್ಟ್‌ಸಿಟಿಯಿಂದ ರಸ್ತೆಗಳ ಅಭಿವೃದ್ಧಿ ಕಾಮಗಾರಿಯು ಪ್ರಗತಿಯಲ್ಲಿದೆ. ಅದರಂತೆ ಬದ್ರಿಯಾ ಶಾಲೆ ರಸ್ತೆ ಜಂಕ್ಷನ್‌ಗೆ ಸಂಪರ್ಕಿಸುವ ಕೆನರಾ ಚೇಂಬರ್‌ ರಸ್ತೆಯ ಕಾಮಗಾರಿ ಪ್ರಗತಿಯಲ್ಲಿದೆ. ಇದರಂತೆ ಪಾಲಿಕೆ ಹಳೇ ಕಚೇರಿ ಕಟ್ಟಡವನ್ನು ನೆಲಸಮಗೊಳಿಸುವಂತೆ ಸ್ಮಾರ್ಟ್‌ಸಿಟಿಯಿಂದ ಮಂಗಳೂರು ಪಾಲಿಕೆಗೆ ಪತ್ರ ಬರೆಯಲಾಗಿತ್ತು.

ಸ್ಮಾರ್ಟ್‌ಸಿಟಿಯವರು ಪಾಲಿಕೆಗೆ ಸಲ್ಲಿಸಿರುವ ನಕ್ಷೆಯ ಅನ್ವಯ ಒಟ್ಟು 35.60 ಚ.ಮೀ. (0.88 ಸೆಂಟ್ಸ್‌)ಜಾಗವು ರಸ್ತೆ ಅಭಿವೃದ್ಧಿಗೆ ಆವಶ್ಯಕವಾಗಿದೆ. ಹೀಗಾಗಿ ಕಟ್ಟಡ ಇರುವ ಒಂದು ಭಾಗವನ್ನು ತೆರವುಗೊಳಿಸಿದರೆ ಉಳಿದ ಭಾಗವು ಅಪಾಯಕ್ಕೆ ಕಾರಣವಾಗಬಹುದು. ಈ ಕಾರಣದಿಂದ ಶಿಥಿಲಾ ವಸ್ಥೆಯಲ್ಲಿರುವ ಹಾಗೂ ಉಪಯೋಗವಿಲ್ಲದ ಕಟ್ಟಡದ ಭಾಗವನ್ನು ತೆರವುಗೊಳಿಸಿ ರಸ್ತೆ ಅಭಿವೃದ್ಧಿಗೆ ನೀಡಲು ತೀರ್ಮಾ ನಿಸಲಾಗಿದೆ.

1909ರ ಮುನ್ಸಿಪಾಲಿಟಿ ಕಚೇರಿ ಆರಂಭ
1866ರಲ್ಲಿ ಮಂಗಳೂರು ಮುನ್ಸಿಪಾಲಿಟಿ ಆರಂಭವಾಯಿತು. 1909ರ ವರೆಗೆ ಮಂಗಳೂರು ಮುನ್ಸಿಪಾಲಿಟಿಯ ಕಾರ್ಯಚಟುವಟಿಕೆಗಳು ಹಾಗೂ ಸಭೆಗಳು ಜಿಲ್ಲಾ ಕಲೆಕ್ಟರ್‌ ಕಚೇರಿ(ಜಿಲ್ಲಾಧಿಕಾರಿ ಕಚೇರಿ)ಯಲ್ಲಿ ನಡೆಯಿತು. ಬಳಿಕ ಮುನ್ಸಿಪಾಲಿಟಿ ಕಚೇರಿಯು ಬಂದರು ರಸ್ತೆಯ ಕಟ್ಟಡಕ್ಕೆ ವರ್ಗಾವಣೆಗೊಂಡಿತು. 1909 ಫೆ. 22ರಿಂದ ಈ ಕಟ್ಟಡದಲ್ಲಿ ಕಾರ್ಯಚಟುವಟಿಕೆಗಳು ನಡೆಯಿತು. ಇದಕ್ಕೂ ಮೊದಲು ಈ ಕಟ್ಟಡವನ್ನು ಈಸ್ಟ್‌ ಇಂಡಿಯಾ ಕಂಪೆನಿಯವರು ಉಗ್ರಾಣವಾಗಿ ಬಳಸುತ್ತಿದ್ದರು ಎಂದು ಹೇಳಲಾಗಿದೆ. 1979ರಲ್ಲಿ ಮುನ್ಸಿಪಾಲಿಟಿಯನ್ನು ರದ್ದುಗೊಳಿಸಲಾಯಿತು. ಬಳಿಕ ಆಡಳಿತಾಧಿಕಾರಿ (ಅಂದಿನ ಜಿಲ್ಲಾಧಿಕಾರಿ)ಅಧಿಕಾರಕ್ಕೆ ಒಳಪಟ್ಟಿತು. ಬಳಿಕ 1980 ಜೂ. 23ರಂದು ಮಂಗಳೂರು ಪಾಲಿಕೆಯಾಗಿ ಪರಿವರ್ತನೆಗೊಂಡಿತು. 1984ರಲ್ಲಿ ಪಾಲಿಕೆಗೆ ಮೊದಲ ಚುನಾವಣೆ ನಡೆಯಿತು. ಅಲ್ಲಿಂದ 1988ರ ವರೆಗೆ ಬಂದರ್‌ನ ಕಟ್ಟಡವೇ ಪಾಲಿಕೆ ಕಚೇರಿ ಆಯಿತು. ಬಳಿಕ ಲಾಲ್‌ಬಾಗ್‌ನಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡಕ್ಕೆ ಆಡಳಿತ ವ್ಯವಸ್ಥೆ ವರ್ಗಾವಣೆಯಾಯಿತು ಎಂದು ಮಂಗಳೂರು ದರ್ಶನ ಪುಸ್ತಕದಲ್ಲಿ ಉಲ್ಲೇಖವಿದೆ.

ಶಿಥಿಲಾವಸ್ಥೆಯ
ಕಟ್ಟಡ ತೆರವು
ಸಂಪೂರ್ಣ ಶಿಥಿಲಾವಸ್ಥೆಯಲ್ಲಿರುವ ಬಂದರ್‌ನ ಹಳೆ ಮಂಗಳೂರು ಪಾಲಿಕೆ ಕಚೇರಿಯನ್ನು ತೆರವುಗೊಳಿ ಸಲು ಈಗಾಗಲೇ ಪಾಲಿಕೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಭಾಗದಲ್ಲಿ ಸ್ಮಾರ್ಟ್‌ಸಿಟಿಯಿಂದ ರಸ್ತೆ ಹಾಗೂ ಇತರ ಅಭಿವೃದ್ಧಿ ಕಾಮಗಾರಿಗಳು ಕೂಡ ನಡೆಯಲಿವೆ. ಸದ್ಯ ಉಪಯೋಗವಿಲ್ಲದ ಕಾರಣದಿಂದ ಹಳೆ ಕಟ್ಟಡವನ್ನು ತೆರವುಗೊಳಿಸಲು ಉದ್ದೇಶಿಸಲಾಗಿದೆ.
-ಪ್ರೇಮಾನಂದ ಶೆಟ್ಟಿ, ಮೇಯರ್‌,
ಮಂಗಳೂರು ಪಾಲಿಕೆ

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.