ಮನೆ ಕಟ್ಟಲು ಪಡಿಪಾಟಲು


Team Udayavani, Nov 13, 2021, 6:44 AM IST

Untitled-1

ಮಂಗಳೂರು: ಹತ್ತು ವರ್ಷಗಳ ಹಿಂದೆಯೇ ಸರಕಾರದಿಂದ ಮನೆ ಮಂಜೂರಾಗಿದ್ದರೂ ಕಾಮಗಾರಿ ಪೂರ್ಣಗೊಳಿಸಲಾಗದೆ ರಾಜ್ಯಾದ್ಯಂತ ಲಕ್ಷಾಂತರ ಮಂದಿ ಫ‌ಲಾನುಭವಿಗಳು ಪರದಾಡುತ್ತಿದ್ದಾರೆ. ಸರಕಾರದ ಅನುದಾನ ಸಾಲದಿರುವುದು, ಅನ್ಯಮೂಲ ಗಳಿಂದ ಹಣ ಹೊಂದಿಸಲಾಗದೆ ಇರು ವುದು ಕಾರಣ. ಅರ್ಧಕ್ಕೆ ನಿಂತಿ ರುವ ಮನೆ ಕಾಮಗಾರಿ ಪೂರ್ಣ ಗೊಳ್ಳುವಂತೆ ಮಾಡುವುದು ಈಗ ಸರಕಾರಕ್ಕೂ ಸವಾಲಾಗಿದೆ.

ಈ ಹಿಂದೆ ಮಂಜೂರಾಗಿರುವ ಮನೆಗಳನ್ನು ಪೂರ್ಣಗೊಳಿಸದೆ ಹೊಸದಾಗಿ ಮನೆ ಮಂಜೂರು ಮಾಡದಿರಲು ಸರಕಾರ ನಿರ್ಧರಿಸಿದ್ದು, ಇದರಿಂದ ಹೊಸ ಆಕಾಂಕ್ಷಿಗಳಿಗೆ ತೊಡಕಾಗಿದೆ. ನಾಲ್ಕು ವರ್ಷಗಳಿಂದ ಹೊಸ ಮನೆ ಮಂಜೂರಾತಿ ಆಗುತ್ತಿಲ್ಲ. ಸದ್ಯ ಆಯ್ದ ಗ್ರಾ.ಪಂ.ಗಳಲ್ಲಿ ಅಮೃತ ಗ್ರಾಮೀಣ ವಸತಿ ಯೋಜನೆಯಲ್ಲಿ ಮಾತ್ರ ಹೊಸ ಮನೆ ಮಂಜೂರು ಮಾಡಲು ನಿರ್ಧರಿಸಲಾಗಿದೆ.

ಪೂರ್ಣಗೊಳ್ಳಲು ಬಾಕಿ ಇರುವ ಮನೆಗಳನ್ನು, ಮುಖ್ಯವಾಗಿ ಒಂದು ದಶಕದಿಂದ ಪೂರ್ಣಗೊಳ್ಳದಿರುವ ಮನೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳು ಫ‌ಲಾನುಭವಿಗಳಲ್ಲಿ ಮನವಿ ಮಾಡುತ್ತಿದ್ದಾರೆ, ಆದರೆ ಫ‌ಲಾನುಭವಿಗಳು ಮನೆ ಪೂರೈಸಲು ತಮಗೆ ಎದುರಾಗಿರುವ ಆರ್ಥಿಕ ಸಂಕಷ್ಟ ತೋಡಿಕೊಳ್ಳುತ್ತಿದ್ದಾರೆ.

58,0927 ಮನೆ ಬ್ಲಾಕ್‌ :

10 ವರ್ಷಗಳಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಯಡಿ ಮಂಜೂರಾದ 31,59,963 ಮನೆಗಳ ಪೈಕಿ 21,27,256 ಮನೆಗಳು ಪೂರ್ಣಗೊಂಡಿವೆ. ಮನೆ ಗಳನ್ನು ನಿಗದಿತ ಅವಧಿಯಲ್ಲಿ ಆರಂಭಿಸದ ಕಾರಣ 5,80,927 ಮನೆಗಳು ಬ್ಲಾಕ್‌ ಆಗಿವೆ. ಕಳೆದ ವರ್ಷ ಅನ್‌ಬ್ಲಾಕ್‌ಗೆ ಅವಕಾಶ ನೀಡಿದ್ದರೂ ಹೆಚ್ಚಿನ ಮನೆಗಳ ಕಾಮಗಾರಿ ಆರಂಭವಾಗದೆ ಬ್ಲಾಕ್‌ ಆಗಿವೆ.

ತಳಪಾಯದಲ್ಲೇ ಬಾಕಿ :

ದ.ಕ. ಜಿಲ್ಲೆಯಲ್ಲಿ 2010-11ರಲ್ಲಿ ಮಂಜೂರಾದ ಮನೆಗಳ ಪೈಕಿ 266 ಮನೆಗಳು ಇನ್ನೂ ತಳಪಾಯದ ಹಂತ ದಲ್ಲಿವೆ. 140 ಮನೆಗಳು ಗೋಡೆ ಹಂತ ದಲ್ಲಿವೆ. ಉಡುಪಿ ಜಿಲ್ಲೆಯಲ್ಲಿ 2010-11ರಲ್ಲಿ ಮಂಜೂರಾದ ಮನೆಗಳ ಪೈಕಿ 230 ಮನೆಗಳು ತಳಪಾಯದಲ್ಲೇ ಬಾಕಿಯಾಗಿವೆ.

ಪಿಡಿಒಗಳಿಗೆ ಹೊಣೆ:

ಮನೆ ಕಾಮಗಾರಿ ಪೂರ್ಣಗೊಳಿಸುವ ಹೊಣೆಯನ್ನು ಪಿಡಿಒಗಳಿಗೆ ವಹಿಸಲಾಗಿದೆ. ಮನೆ ಕಾಮಗಾರಿ ಬಾಕಿ ಇರಿಸಿ ಕೊಂಡಿರುವ ಫ‌ಲಾನುಭವಿಗಳ ಪೈಕಿ ಹೆಚ್ಚಿನ ಮಂದಿ ಹಣಕಾಸಿನ ಕಾರಣ ಮುಂದಿಡುತ್ತಿದ್ದಾರೆ. ಮಳೆ, ಕೊರೊನಾ ಕಾರಣ ಇನ್ನು ಕೆಲವರದು.  2010ರಲ್ಲಿ ಮನೆ ಕಾಮಗಾರಿ ಆರಂಭಿಸಿ ಈಗ ಪೂರ್ಣ ಗೊಳಿಸಿದರೆ ಅನುದಾನ ಬಿಡುಗಡೆಯಾಗುತ್ತದೆ ಎನ್ನುತ್ತಾರೆ ಪಿಡಿಒಗಳು.

ಈಗ ಮನೆಗಳು ಪೂರ್ಣಗೊಳ್ಳದಿರಲು ಆರ್ಥಿಕ ತೊಡಕು ಪ್ರಮುಖ ಕಾರಣ. ಕೆಲವು ಮಂದಿ ನಿಯಮವನ್ನು ಉಲ್ಲಂ ಸಿ ಮನೆ ನಿರ್ಮಿಸಿದ್ದಾರೆ. ಅವುಗಳನ್ನು “ನಾಟ್‌ ಒಕೆ’ ಎಂದು ಪರಿಗಣಿಸಲಾಗಿದೆ. ಹಂತ ಹಂತವಾಗಿ ಫೋಟೋ ತೆಗೆಯದಿರುವುದು, ವಸತಿಯೇತರ ಉದ್ದೇಶಕ್ಕೆ ನಿರ್ಮಾಣ, ನಿಗದಿತ ಮೊತ್ತ, ನಿಗದಿತ ವಿಸ್ತೀರ್ಣ ಮೀರಿ ನಿರ್ಮಾಣ ಮಾಡದಿರುವುದು ಮೊದಲಾದವು “ನಾಟ್‌ ಓಕೆ’ ಪಟ್ಟಿಯಲ್ಲಿ ಸೇರುತ್ತವೆ. ಇಂತಹ “ನಾಟ್‌ಒಕೆ’ ಮನೆಗಳ ಬಗ್ಗೆ ಮತ್ತೂಮ್ಮೆ ಪರಿಶೀಲಿಸಿ “ಓಕೆ’ ಸಾಧ್ಯ

ತೆಯ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ನಿಗಮವು ಸೂಚಿಸಿದೆ. ಆದರೆ ಇಂತಹ “ನಾಟ್‌ಒಕೆ’ ಮನೆಗಳು “ಒಕೆ’ ಆಗುವ ಸಾಧ್ಯತೆಗಳು ಕಡಿಮೆ. ಇದರ ಜತೆಗೆ ಆಧಾರ್‌, ಮೊಬೈಲ್‌ ಸಂಖ್ಯೆ ಮೊದಲಾದ ತಾಂತ್ರಿಕ ದೋಷಗಳಿಂದ ಅನುದಾನ ವಿಳಂಬವಾಗಿರುತ್ತದೆ. ಆದರೆ “ತಾಂತ್ರಿಕ ಕಾರಣ’ದ ಪ್ರಕರಣಗಳು ತೀರಾ ಕಡಿಮೆ, ಇದನ್ನು ಸರಿಪಡಿಸಬಹುದು ಎನ್ನುತ್ತಾರೆ ಅಧಿಕಾರಿಗಳು.

-ಸಂತೋಷ್‌ ಬೊಳ್ಳೆಟ್ಟು

 

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.