“ಮನೆ’ ಭಾಷೆಯ ಗುಡಿ: ಕಾಸರಗೋಡು ಚಿನ್ನಾ

142ನೇ "ಘರ್‌ ಘರ್‌ ಕೊಂಕಣಿ'

Team Udayavani, Oct 12, 2019, 5:49 AM IST

11KSDE6

ಕಾಸರಗೋಡು: ಮನೆ ಅನ್ನೋದು ಭಾಷೆಯ ಗುಡಿ. ಅಲ್ಲಿ ಪೂಜಿಸಲ್ಪಡಬೇಕಾದದ್ದು ಭಾಷೆ ಮತ್ತು ಸಂಸ್ಕೃತಿ. ಗುಡಿಯೊಳಗೆ ಇವೆರಡೂ ಇಲ್ಲದೆ ಹೋದರೆ ಅದು ಕೇವಲ ಮಣ್ಣಿನ ಗೂಡಾಗುತ್ತದೆ ಎಂದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರೂ ಖ್ಯಾತ ರಂಗಕರ್ಮಿಗಳೂ ಆದ ಕಾಸರಗೋಡು ಚಿನ್ನಾ ಹೇಳಿದರು.
ಅವರು ಖ್ಯಾತ ರಂಗನಟ, ವಿಠೊಬ ಭಂಡಾರ್ಕರ್‌ ಅವರ ಹೇಟ್‌ಹಿಲ್‌ನಲ್ಲಿರುವ ನಿವಾಸದಲ್ಲಿ 142ನೇ “ಘರ್‌ ಘರ್‌ ಕೊಂಕಣಿ’ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಭಾಷೆ ಅನ್ನೋದು ಪ್ರತಿಯೊಬ್ಬರಿಗೂ ಸಂಸ್ಕೃತಿ ಕಲಿಸುತ್ತದೆ. “ಸಂಸ್ಕೃತಿ ಕಲಿತಾಗ’ ಸಂಸ್ಕಾರ ಬೆಳೆಯುತ್ತದೆ. ಅದುವೇ ನಮಗೆ ಉತ್ತಮ ಜೀವನವನ್ನು ಕಲಿಸುತ್ತದೆ. ಮುಂದಿನ ಜನಾಂಗಕ್ಕೆ ಇದನ್ನು ಮನವರಿಕೆ ಮಾಡಿಕೊಡಬೇಕಾದ ಅನಿವಾರ್ಯತೆ ಇದೆ ಎಂದರು. ಗುರು ಹಿರಿಯರಿಗೆ ಗೌರವ ಕೊಡುವ ಸಂಸ್ಕಾರವೂ ಕಡಿಮೆ ಆದರ್ಶಪ್ರಾಯರಾಗಿ ಬದುಕುವವರಿಗೆ ದಾರಿ ದೀಪವಾಗಬೇಕು. ಕೊಂಕಣಿ ಭಾಷೆಗೆ ಸಂಸ್ಕಾರವನ್ನು ಕಲಿಸುವ ಗುಣವಿದೆ. ಅದನ್ನು ಕಲಿಸಿ ಎಂದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಕೊಡಿಯಾಲ್‌ ಖಬರ್‌ ಪತ್ರಿಕೆಯ ಸಂಪಾದಕ ಮಾವಿನಕುರ್ವೆ ವೆಂಕಟೇಶ ಬಾಳಿಗಾ ಅವರು ಕೊಂಕಣಿ ಭಾಷೆಯನ್ನು ಕಲಿಯಲು ಯುವಕರು ಮುಂದೆ ಬರಬೇಕೆಂದರು. ಮನೆಗಳಲ್ಲಿ ಇಂಥ‌ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುಖಾಂತರ ಭಾಷೆಯ ಬಗ್ಗೆ ಅಭಿಮಾನ ಹುಟ್ಟುವುದಲ್ಲದೆ, ಸಾಹಿತ್ಯ ಕಲಿಯಲು ಪ್ರೇರಣೆಯೂ ಆಗಬಲ್ಲದು. ಈ ನಿಟ್ಟಿನಲ್ಲಿ ಕಾಸರ ಗೋಡು ಅಭಿಯಾನ ಶ್ಲಾಘನೀಯ ಎಂದರು.

ಖ್ಯಾತ ರಂಗಕರ್ಮಿಗಳಾದ ಮುರಳೀಧರ ಕಾಮತ್‌, ಪ್ರಕಾಶ್‌ ನಾಯಕ್‌, ಉದ್ಯಮಿ ನರಸಿಂಹ ಭಂಡಾರ್ಕರ್‌ ಅವರು ಕೊಂಕಣಿ ಭಾವಗೀತೆಗಳನ್ನು ಹಾಡಿದರು. ವೆಂಕಟೇಶ ಬಾಳಿಗಾ ಅವರು ಕೊಂಕಣಿ ಪ್ರಶ್ನೋತ್ತರ ಹಾಗೂ ವರ್ಷಾ ಎಸ್‌.ಕಾಮತ್‌ ಅವರಿಂದ ಕೊಂಕಣಿ ಆಟಗಳು ನಡೆದವು.

ವೇದ್ಯಾ ಸಂತೋಷ್‌ ಕಾಮತ್‌ ಪ್ರಾರ್ಥನೆ ಹಾಡಿದರು. ಮನೆ ಯಜಮಾನ, ಚಲನಚಿತ್ರ ನಟ ಭಂಡಾರ್ಕರ್‌ ಅವರು ಸ್ವಾಗತಿಸಿದರು. ವಿಶಾಲ ಭಂಡಾರ್ಕರ್‌ ವಂದಿಸಿದರು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.