ಚರ್ಮಗಂಟು ರೋಗಕ್ಕೆ ಮನೆಮದ್ದು; ಪಶು ವೈದ್ಯಕೀಯ ಇಲಾಖೆಯ ಪ್ರಕಟನೆ


Team Udayavani, Dec 27, 2022, 6:50 AM IST

ಚರ್ಮಗಂಟು ರೋಗಕ್ಕೆ ಮನೆಮದ್ದು; ಪಶು ವೈದ್ಯಕೀಯ ಇಲಾಖೆಯ ಪ್ರಕಟನೆ

ಉಪ್ಪಿನಂಗಡಿ: ಜಾನುವಾರುಗಳನ್ನು ಬಾಧಿಸುತ್ತಿರುವ ಚರ್ಮಗಂಟು (ಲಂಪಿ ಸ್ಕಿನ್‌) ರೋಗಕ್ಕೆ ಲಸಿಕೆ ಪ್ರಯೋಗ ನಡೆಯುತ್ತಿದ್ದರೂ ರೋಗ ಪಸರಿಸುತ್ತಲೇ ಇದೆ. ಪ್ರಸ್ತುತ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಮನೆಯಲ್ಲಿಯೇ ತಯಾರಿಸಬಹುದಾದ ನಾಟಿ ಔಷಧವನ್ನು ಸೂಚಿಸಿದೆ.

ಔಷಧವನ್ನು ನೀಡಿ ಕನಿಷ್ಠ ಒಂದು ಗಂಟೆಯ ಅಂತರದಲ್ಲಿ ಆಹಾರವನ್ನು ನೀಡಬಹುದಾಗಿದೆ. ಕೇಂದ್ರ ಸರಕಾರದ ಮೀನುಗಾರಿಕೆ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ಅಧೀನದ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿ (ನ್ಯಾಶನಲ್‌ ಡೈರಿ ಡೆವಲಪ್‌ಮೆಂಟ್‌ ಬೋರ್ಡ್‌)ಯು ಈ ಪ್ರಕಟನೆಯನ್ನು ಹೊರಡಿಸಿದೆ.

ಒಂದನೇ ಸೂತ್ರ
ಒಂದನೇ ಸೂತ್ರದಂತೆ ಔಷಧಕ್ಕೆ ಬಳಸುವ ಪದಾರ್ಥ ಹಾಗೂ ಒಂದು ಸಲ ನೀಡಲು ಬೇಕಾದ ಪ್ರಮಾಣವನ್ನು ಈ ರೀತಿ ಪಟ್ಟಿ ಮಾಡಲಾಗಿದೆ. ವೀಳ್ಯದ ಎಲೆ- 10, ಕರಿಮೆಣಸು- 10 ಗ್ರಾಂ, ಉಪ್ಪು – 10 ಗ್ರಾಂ ಮತ್ತು ಬೆಲ್ಲ. ಇವೆಲ್ಲವನ್ನು ಬೆರೆಸಿ ಅಗತ್ಯವಿದ್ದಷ್ಟು ಬೆಲ್ಲ ಹಾಕಿ ಪೇಸ್ಟ್‌ ತಯಾರಿಸಬೇಕು. ಮೊದಲ ದಿನ 3 ಗಂಟೆಗಳಿಗೊಮ್ಮೆ ಸಣ್ಣ ಸಣ್ಣ ಪ್ರಮಾಣದಲ್ಲಿ ತಿನ್ನಿಸಬೇಕು. ಎರಡನೇ ದಿನದಿಂದ ಎರಡು ವಾರಗಳ ವರೆಗೆ ಪ್ರತೀ ದಿನ 3 ಡೋಸ್‌ ನೀಡಬೇಕು. ಪ್ರತೀ ಡೋಸ್‌ ತಿನ್ನಿಸುವ ಮೊದಲು ಔಷಧವನ್ನು ಹೊಸದಾಗಿ ತಯಾರಿಸಬೇಕು

ಎರಡನೇ ಸೂತ್ರ
ಪದಾರ್ಥಗಳು ಹಾಗೂ ಎರಡು ಸಲದ ಔಷಧಕ್ಕೆ ಬೇಕಾದ ಪ್ರಮಾಣ ಇಂತಿದೆ: ಬೆಳ್ಳುಳ್ಳಿ 2 ಎಸಳು, ಕೊತ್ತಂಬರಿ 10 ಗ್ರಾಂ, ಜೀರಿಗೆ 10 ಗ್ರಾಂ, ತುಳಸಿ ಒಂದು ಕೈಹಿಡಿ, ದಾಲಿcನಿ ಎಲೆಗಳು 10 ಗ್ರಾಂ., ಕರಿಮೆಣಸು 10 ಗ್ರಾಂ, 5 ವೀಳ್ಯದ ಎಲೆ, 1 ಸಣ್ಣ ಈರುಳ್ಳಿ, ಅರಶಿನ ಪುಡಿ 10 ಗ್ರಾಂ, ಕಿರಾತ (ನೆಲಬೇವು) ಎಲೆಯ ಪುಡಿ 30 ಗ್ರಾಂ, ಕಾಮಕಸ್ತೂರಿ ಒಂದು ಕೈಹಿಡಿ, ಬೇವಿನ ಎಲೆಗಳು ಒಂದು ಕೈಹಿಡಿ, ಬಿಲ್ವಪತ್ರೆ ಒಂದು ಕೈಹಿಡಿ. ಈ ಎಲ್ಲ ಪದಾರ್ಥಗಳನ್ನು ಬೆರೆಸಿ, ಅಗತ್ಯವಿದ್ದಷ್ಟು ಬೆಲ್ಲ ಹಾಕಿ ಪೇಸ್ಟ್‌ ತಯಾರಿಸಿ, ಸಣ್ಣ ಪ್ರಮಾಣದಲ್ಲಿ ತಿನ್ನಿಸಬೇಕು. ಮೊದಲ ದಿನ ಪ್ರತೀ ಮೂರು ಗಂಟೆಗೊಮ್ಮೆ ಒಂದು ಡೋಸ್‌ ನೀಡಬೇಕು. ಎರಡನೇ ದಿನದಿಂದ ಪರಿಸ್ಥಿತಿ ಸುಧಾರಣೆಯಾಗುವ ವರೆಗೆ ಪ್ರತೀ ದಿನ ಬೆಳಗ್ಗೆ ಒಂದು ಹಾಗೂ ಸಂಜೆ ಒಂದು ಡೋಸ್‌ ನೀಡಬೇಕು. ಇಲ್ಲಿ ಕೂಡ ಔಷಧವನ್ನು ಹೊಸದಾಗಿಯೇ ತಯಾರಿಸಬೇಕು.

ಗಾಯಕ್ಕೆ ಲೇಪ
ಗಾಯವಿದ್ದಲ್ಲಿ ಲೇಪ ಮಾಡಲು ಬೇಕಾದ ಔಷಧ ತಯಾರಿಗೆ ಬೇಕಾದ ಪದಾರ್ಥಗಳು ಇಂತಿವೆ: ಕುಪ್ಪಿ ಗಿಡದ ಎಲೆ ಒಂದು ಕೈಹಿಡಿ, ಬೆಳ್ಳುಳ್ಳಿ 10 ಎಸಳು, ಬೇವಿನ ಎಲೆ ಒಂದು ಕೈಹಿಡಿ, ತೆಂಗಿನ ಎಣ್ಣೆ ಅಥವಾ ಎಳ್ಳೆಣ್ಣೆ 500 ಮಿ.ಲೀ., ಅರಶಿನ ಪುಡಿ 20 ಗ್ರಾಂ, ಮೆಹಂದಿ (ಗೋರಂಟಿ) ಎಲೆಗಳು ಒಂದು ಕೈಹಿಡಿ, ತುಳಸಿ ಒಂದು ಕೈಹಿಡಿ. ಇವೆಲ್ಲವನ್ನೂ ಮಿಶ್ರ ಮಾಡಿ ತೆಂಗಿನ ಎಣ್ಣೆ ಅಥವಾ ಎಳ್ಳೆಣ್ಣೆಯೊಂದಿಗೆ ಕುದಿಸಿ ತಣ್ಣಗಾಗಿಸಿಕೊಳ್ಳಬೇಕು. ಜಾನುವಾರುಗಳ ದೇಹದ ಮೇಲಿನ ಗಾಯಗಳನ್ನು ಸ್ವತ್ಛಗೊಳಿಸಿ ಈ ಔಷಧ ಲೇಪಿಸಬೇಕು. ಒಂದು ವೇಳೆ ಗಾಯದೊಳಗೆ ಮರಿಹುಳು (ನೊಣದ ಹುಳು)ಗಳಿದ್ದಲ್ಲಿ ಉಪಚಾರದ ಮೊದಲ ದಿನ ಮಾತ್ರ ಸೀತಾಫ‌ಲದ ಎಲೆಗಳಿಂದ ಮಾಡಿದ ಫೇಸ್ಟ್‌ ಅಥವಾ ಕರ್ಪೂರ ಬೆರೆಸಿದ ತೆಂಗಿನ ಎಣ್ಣೆಯನ್ನು ಲೇಪಿಸಬೇಕು.

ಚಿಕಿತ್ಸೆಯ ಬಳಿಕ ಶೇ. 50ರಷ್ಟು ಕಾಯಿಲೆ ಗುಣವಾದರೂ ಉಪ್ಪಿನಂಗಡಿಯಲ್ಲಿರುವ ಈ ಜಾನುವಾರಿನ ಕಾಲು ಹಾಗೂ ಕುತ್ತಿಗೆಯ ಕೆಳಭಾಗ ಬಾವು ಬಂದಿರುವುದು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.