ಮನೆ ಛಾವಣಿ ಕುಸಿತ: ಮಹಿಳೆ – ಮಗು ಅಪಾಯದಿಂದ ಪಾರು


Team Udayavani, Jun 17, 2018, 6:00 AM IST

q-18.jpg

ಮಂಗಳೂರು: ನಗರದ ಬೋಳಾರದಲ್ಲಿ ಶನಿವಾರ ಮಧ್ಯಾಹ್ನ ಹಳೆಯ ಮನೆಯೊಂದರ ಛಾವಣಿ ಕುಸಿದು ಬಿದ್ದ ಘಟನೆ ಸಂಭವಿಸಿದ್ದು, ಮಹಿಳೆ ಮತ್ತು ಮಗು ಅಪಾಯದಿಂದ ಪಾರಾಗಿದ್ದಾರೆ. 

ಬೋಳಾರದ ನಾಗಪ್ಪ ಕಂಪೌಂಡ್‌ನ‌ ಬಟ್ರಿ ಗಾರ್ಡನ್‌ನಲ್ಲಿರುವ ಈ ಹಂಚಿನ ಮನೆ ಮಣ್ಣಿನ ಗೋಡೆಯಿಂದ ನಿರ್ಮಾಣಗೊಂಡಿದ್ದು, ಸುಮಾರು ನೂರು ವರ್ಷಗಳಷ್ಟು ಹಳೆಯ ಕಟ್ಟಡ ಎನ್ನಲಾಗಿದೆ. ಇದರಲ್ಲಿ ಕಳೆದ 78 ವರ್ಷಗಳಿಂದ ನಾರಾಯಣ ಶೆಟ್ಟಿ, ಪ್ರಮೀಳಾ ಮತ್ತು ಹರೀಶ್‌ ಎಂಬ 3 ಕುಟುಂಬಗಳು ಬಾಡಿಗೆಗೆ ವಾಸವಾಗಿದ್ದವು.  ದೇವಕಿ ಎಂಬವರು ಈ ಮನೆಯ ಮಾಲಕರು ಎಂಬುದಾಗಿ ಬಾಡಿಗೆ ಮನೆಯಲ್ಲಿದ್ದವರು ಪಾಲಿಕೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. 

ಮನೆಯ ಛಾವಣಿ ಸಂಪೂರ್ಣವಾಗಿ ಕುಸಿದ ಕಾರಣ ಇದರಲ್ಲಿ ವಾಸಿಸುತ್ತಿದ್ದ ಮೂರೂ ಕುಟುಂಬಗಳು ಬೇರೆಡೆಗೆ ಸ್ಥಳಾಂತರಗೊಂಡಿವೆ. ಮನೆಯ ಕಟ್ಟಡ ಹಾಗೂ ಛಾವಣಿ ಶಿಥಿಲಗೊಂಡಿದ್ದು, ಶನಿವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಛಾವಣಿಯ ಒಂದು ಭಾಗದಲ್ಲಿ ಮರದ ರೀಪು ಮುರಿದು ಹಂಚುಗಳು ಕೆಳಗೆ ಬಿದ್ದವು. ಈ ಸಂದರ್ಭದಲ್ಲಿ ನಾರಾಯಣ ಶೆಟ್ಟಿ ಅವರ ಪತ್ನಿ ಮತ್ತು ಮಗು ಚಾವಡಿಯಲ್ಲಿ ಊಟ ಮಾಡುತ್ತಿದ್ದು, ಶಬ್ದ ಕೇಳಿ ಓಡಿ ಹೊರಗೆ ಬಂದಿದ್ದರು. ಹಾಗಾಗಿ ಅಪಾಯದಿಂದ ಪಾರಾದರು. ಎರಡು ಮನೆಗಳ ಭಾಗದಲ್ಲಿರುವ ಛಾವಣಿ ಸಂಪೂರ್ಣ ಉರುಳಿದೆ. 

ಘಟನೆಯ ಸುದ್ದಿ ತಿಳಿದು ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಮೇಯರ್‌ ಭಾಸ್ಕರ್‌ ಕೆ., ಕಾರ್ಪೊರೇಟರ್‌ ಕವಿತಾ ವಾಸು, ಪಾಲಿಕೆ ಕಮಿಷನರ್‌ ಮೊಹಮದ್‌ ನಝೀರ್‌, ಪಾಂಡೇಶ್ವರ ಪೊಲೀಸರು ಹಾಗೂ ಇತರರು ಸ್ಥಳಕ್ಕೆ ಭೇಟಿ ನೀಡಿದರು. 

ಸಂಜೆ ವೇಳೆಗೆ ಮತ್ತೆ ಮೇಯರ್‌, ಕಮಿಷನರ್‌, ಶಾಸಕ ವೇದವ್ಯಾಸ ಕಾಮತ್‌, ಕಾರ್ಪೊರೇಟರ್‌, ತಹಸೀಲ್ದಾರ್‌, ಪಾಲಿಕೆಯ ಎಂಜಿನಿಯರ್‌ಗಳು ಸ್ಥಳಕ್ಕೆ ಭೇಟಿ ನೀಡಿ ಈ ಮನೆಯಲ್ಲಿದ್ದ 3 ಕುಟುಂಬಗಳಿಗೆ ವಾಸ್ತವ್ಯಕ್ಕೆ ಪರ್ಯಾಯ ವ್ಯವಸ್ಥೆಗೆ ನೆರವಾದರು. 

ಮೂರೂ ಕುಟುಂಬಗಳಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ತಲಾ 1 ಲಕ್ಷ ರೂ. ಪರಿಹಾರಕ್ಕೆ ವ್ಯವಸ್ಥೆ ಮಾಡುವುದಾಗಿ ಮೇಯರ್‌ ಭಾಸ್ಕರ್‌ ಕೆ. ಅವರು ಭರವಸೆ ನೀಡಿದರು. ಕುಟುಂಬಗಳ ಪೈಕಿ ಒಬ್ಬರು ತಾತ್ಕಾಲಿಕವಾಗಿ ಸಂಬಂಧಿಕರ ಮನೆಗೆ ತೆರಳಿದ್ದು, ಉಳಿದ  ಕುಟುಂಬಗಳವರು ಬೇರೆ ಕಡೆ ಬಾಡಿಗೆ ಮನೆಗೆ ತೆರಳಿದ್ದಾರೆ. 

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.