ವಿಶೇಷ ವರ್ಗದವರಿಗೆ ಮನೆ: 10 ಜಿಲ್ಲೆಗಳಿಗೆ ಮಾತ್ರ ಮಣೆ!

ದ.ಕ., ಉಡುಪಿ ಜಿಲ್ಲೆಗಳೂ ಅವಕಾಶ ವಂಚಿತ ; ಸಮೀಕ್ಷೆಗೆ ಬೇಡಿಕೆ

Team Udayavani, Dec 14, 2021, 7:40 AM IST

ವಿಶೇಷ ವರ್ಗದವರಿಗೆ ಮನೆ: 10 ಜಿಲ್ಲೆಗಳಿಗೆ ಮಾತ್ರ ಮಣೆ!

ಸಾಂದರ್ಭಿಕ ಚಿತ್ರ

ಮಂಗಳೂರು: ವಿಶೇಷ ವರ್ಗದವರ ವಸತಿ ಯೋಜನೆಯಡಿ ಮನೆಗಳನ್ನು ಪಡೆಯಲು ಈ ಬಾರಿ ರಾಜ್ಯದ 10 ಜಿಲ್ಲೆಗಳು ಮಾತ್ರ ಅರ್ಹವಾಗಿವೆ.

ಅಂಗವಿಕಲರು, 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ವಿಧವೆಯರು, ಕುಶಲಕರ್ಮಿಗಳು, ಬೀಡಿಕಾರ್ಮಿಕರು, ಅಲೆಮಾರಿ / ಅರೆ ಅಲೆಮಾರಿ ಸಮುದಾಯದವರು ಸೇರಿದಂತೆ 14 ವರ್ಗದವರಿಗೆ ವಿಶೇಷ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಲಾಗುವ ಈ ಯೋಜನೆಯಡಿ ಈ ಸಾಲಿನಲ್ಲಿ ದ.ಕ. ಮತ್ತು ಉಡುಪಿ ಸೇರಿದಂತೆ 21 ಜಿಲ್ಲೆಗಳು ಅವಕಾಶ ವಂಚಿತವಾಗಿವೆ.

ರಾಜ್ಯದಲ್ಲಿ 2020-21ನೇ ಸಾಲಿಗೆ ದೇವರಾಜ ಅರಸು ವಸತಿ ಯೋಜನೆಯಡಿ ವಿಶೇಷ ವರ್ಗದ ಒಟ್ಟು 43,342 ಫ‌ಲಾನುಭವಿಗಳ ಆಯ್ಕೆಗೆ ಗುರಿ ನಿಗದಿಯಾಗಿದ್ದು ಇದುವರೆಗೆ 21,890 ಮಂದಿಯನ್ನು ಆಯ್ಕೆ ಮಾಡಲಾಗಿದೆ. ತುಮಕೂರು ಜಿಲ್ಲೆಗೆ ಗರಿಷ್ಠ 15,788 ಹಾಗೂ ಚಿತ್ರದುರ್ಗ ಜಿಲ್ಲೆಗೆ 14,913 ವಸತಿಗಳ ಗುರಿ ನಿಗದಿಪಡಿಸಿದ್ದು ಫ‌ಲಾನುಭವಿಗಳ ಆಯ್ಕೆ ಪ್ರಗತಿಯಲ್ಲಿದೆ.

ಪ್ರಸ್ತಾವನೆ ವಿಳಂಬ ಕಾರಣ?
ಈ ಹಿಂದೆ ಕಳುಹಿಸಲಾದ ಪ್ರಸ್ತಾವನೆಗಳ ಆಧಾರದಲ್ಲಿ ಬೆಳಗಾವಿ, ಬೀದರ್‌, ಚಿತ್ರದುರ್ಗ, ದಾವಣಗೆರೆ, ಹಾಸನ, ಬಳ್ಳಾರಿ, ಮೈಸೂರು, ರಾಯಚೂರು, ತುಮಕೂರು, ವಿಜಯನಗರ ಈ 10 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ.
ಉಳಿದ ಜಿಲ್ಲೆಗಳಿಂದ ಪ್ರಸ್ತಾವನೆ ಸಕಾಲಕ್ಕೆ ಬಾರದಿರುವ ಕಾರಣ ಗುರಿ ನಿಗದಿ ಮಾಡಿಲ್ಲ.

ವಿಶೇಷ ವರ್ಗದ ಫ‌ಲಾನುಭವಿ ಗಳನ್ನು ಗುರುತಿಸಲು ಅಂಗವಿಕಲರ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾರ್ಮಿಕ ಇಲಾಖೆಗಳಿಗೆ ಜವಾಬ್ದಾರಿ ನೀಡಲಾಗಿತ್ತು ಎಂದು ವಸತಿ ನಿಗಮದ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಅರಣ್ಯ ಪ್ರದೇಶದಲ್ಲಿ ಸಾಗುವಳಿ ಸಕ್ರಮ ಮಾಡಲು ಅವಕಾಶವಿಲ್ಲ: ಆರ್‌.ಅಶೋಕ್‌

ಈ ಯೋಜನೆಯಡಿ ವಸತಿ ಮಂಜೂರು ಮಾಡುವುದು ಮಾತ್ರವಲ್ಲದೆ ಫ‌ಲಾನುಭವಿಗಳು ವಸತಿಗೆ ಬೇಕಾದ ನಿವೇಶನ ಹೊಂದಿಲ್ಲ ದಿದ್ದರೆ ಜಮೀನು ಖರೀದಿಸಿ ನೀಡುವುದಕ್ಕೂ ಅವಕಾಶವಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿಶೇಷ ವರ್ಗದ ಯೋಜನೆಯಡಿ ಮನೆ ಪಡೆಯಲು ಅರ್ಹರಾಗಿರುವವರ ಸಮಗ್ರ ಮಾಹಿತಿ ಇಲಾಖೆಗಳ ಬಳಿ ಇಲ್ಲ. ಈ ಬಗ್ಗೆ ಇಲಾಖೆಗಳು, ಜನಪ್ರತಿನಿಧಿಗಳು ವಿಶೇಷ ಮುತುವರ್ಜಿ ವಹಿಸಿದರೆ ನೂರಾರು ಮಂದಿ ವಸತಿ ಆಕಾಂಕ್ಷಿ ಗಳಿಗೆ ಅನುಕೂಲವಾಗಲಿದೆ.

ಸಮೀಕ್ಷೆಗೆ ನಿರ್ದೇಶ
ವಿಶೇಷ ವರ್ಗದವರು ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿರುವುದರಿಂದ ಅಲ್ಲಿಗೆ ಗುರಿ ನಿಗದಿಯಾಗಿರಬಹುದು. ನಮಗೆ ಗುರಿ ನಿಗದಿಯಾಗಿಲ್ಲ. ಆದಾಗ್ಯೂ ನಮ್ಮ ಜಿಲ್ಲೆಯಲ್ಲಿರುವ ವಿಶೇಷ ವರ್ಗದವರ ಸಮೀಕ್ಷೆ ನಡೆಸಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲು ಸಂಬಂಧಿಸಿದ ಎಲ್ಲ ಇಲಾಖೆಗಳಿಗೂ ನಿರ್ದೇಶ ನೀಡಲಾಗುವುದು.
– ಡಾ| ಕುಮಾರ್‌, ಸಿಇಒ, ದ.ಕ ಜಿ.ಪಂ.

ಗುರಿ ನಿಗದಿಪಡಿಸಿಲ್ಲ
ನಿಗಮದವರು ಗುರಿ ನಿಗದಿಗೊಳಿಸಿದರೆ ಜಿಲ್ಲೆಯ ವಿಶೇಷ ವರ್ಗದವರ ಆಯ್ಕೆ ಮಾಡಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸದ್ಯ ಗುರಿ ನಿಗದಿಯಾಗಿಲ್ಲ.
-ಡಾ| ನವೀನ್‌ ಭಟ್‌,
ಸಿಇಒ, ಉಡುಪಿ ಜಿ.ಪಂ.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.