ಹನಿಟ್ರ್ಯಾಪ್‌ ಪ್ರಕರಣ: ಭಾರೀ ಜಾಲ ಸಕ್ರಿಯ ಶಂಕೆ


Team Udayavani, Jan 19, 2021, 2:10 AM IST

ಹನಿಟ್ರ್ಯಾಪ್‌ ಪ್ರಕರಣ: ಭಾರೀ ಜಾಲ ಸಕ್ರಿಯ ಶಂಕೆ

ಮಂಗಳೂರು: ಸುರತ್ಕಲ್‌ ಕೃಷ್ಣಾಪುರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ಜ.14ರಂದು ನಡೆದಿರುವ ಹನಿಟ್ರ್ಯಾಪ್‌(ಮಹಿಳೆಯರಿಂದ ಬ್ಲ್ಯಾಕ್‌ವೆುàಲ್‌) ಪ್ರಕರಣದ ಆರೋಪಿಗಳಾದ ರೇಶ್ಮಾ ಅಲಿಯಾಸ್‌ ನೀಮಾ (32), ಇಕ್ಬಾಲ್‌ ಮಹಮ್ಮದ್‌ ಅಲಿಯಾಸ್‌ ಇಕ್ಬಾಲ್‌(35), ಜೀನತ್‌ ಅಲಿಯಾಸ್‌ ಜೀನತ್‌ ಮುಬೀನ್‌ (28) ಹಾಗೂ ನಾಸಿಫ್ ಅಲಿಯಾಸ್‌ ಅಬ್ದುಲ್‌ ಖಾದರ್‌ ನಾಜೀಪ್‌ನನ್ನು ಬಂಧಿಸಲಾಗಿದ್ದು ಈ ಜಾಲದಲ್ಲಿ ಇನ್ನೂ 4-5 ಮಂದಿ ಸಕ್ರಿಯರಾಗಿರುವ ಅನುಮಾನವಿದೆ. ಅಲ್ಲದೆ ಇದೇ ತಂಡ 6 ಮಂದಿಯನ್ನು ಇದೇ ರೀತಿ ಹನಿಟ್ರ್ಯಾಪ್‌ ಬಲೆಗೆ ಸಿಲುಕಿಸಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ತಿಳಿಸಿದ್ದಾರೆ.

ಇವರು ಮೂಲತಃ ಕೇರಳದವರಾಗಿದ್ದು ಸ್ಥಳೀಯ ಭಾಷೆಯಲ್ಲಿಯೇ ಹೆಚ್ಚಾಗಿ ವ್ಯವಹಾರ ನಡೆಸುತ್ತಿದ್ದರು. ಜ.14ರಂದು ಹನಿಟ್ರ್ಯಾಪ್‌ಗೆ ಒಳಗಾಗಿ ದೂರು ನೀಡಿದವರು ಕಾಸರಗೋಡು ನಿವಾಸಿಯಾಗಿದ್ದಾರೆ. ಇವರು ಮಾತ್ರವಲ್ಲದೆ ಇತರ ಸುಮಾರು 6 ಮಂದಿ ಇದೇ ರೀತಿ ಹನಿಟ್ರ್ಯಾಪ್‌ಗೆ ಒಳಗಾಗಿರುವುದು ಗೊತ್ತಾಗಿದ್ದು ಅವರನ್ನು ಸಂಪರ್ಕಿಸುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹಲವಾರು ತಂಡಗಳು :

ಮಂಗಳೂರು ಭಾಗದಲ್ಲಿ ಹಲವು ಹನಿಟ್ರ್ಯಾಪ್‌ ತಂಡಗಳು ಸಕ್ರಿಯರಾಗಿರುವ ಶಂಕೆ ಇದೆ. ಈಗ ಪತ್ತೆಯಾಗಿರುವ ಒಂದು ತಂಡವೇ 6 ಮಂದಿಯನ್ನು ಹನಿಟ್ರ್ಯಾಪ್‌ಗೆ ಒಳಪಡಿಸಿರುವುದು ಗೊತ್ತಾಗಿದ್ದು ಹಲವಾರು ಮಂದಿ ಹನಿಟ್ರ್ಯಾಪ್‌ಗೆ ಒಳಗಾಗಿರುವ ಸಾಧ್ಯತೆ ಇದೆ ಎಂದು ಆಯುಕ್ತರು ತಿಳಿಸಿದರು.

ಐಶಾರಾಮಿ ಜೀವನ  :

ರೇಶ್ಮಾ ಬೀಡಿ ಕಟ್ಟುವ ಕೆಲಸ ಮಾಡುತ್ತಾಳೆ. ಜೀನತ್‌ ಇನ್ಸೂರೆನ್ಸ್‌ ಏಜೆಂಟ್‌. ಉಳಿದವರಿಬ್ಬರು ಚಾಲಕ ವೃತ್ತಿ ಮಾಡುವವರು. ಆದರೆ ಐಷಾರಾಮಿ ಜೀವನ ನಡೆಸುತ್ತಿದ್ದರು. ಇವರಿಂದ ಒಂದು ಎಕ್ಸ್‌ಯುವಿ 500 ಕಾರು, 5 ಕ್ರೆಡಿಟ್‌ ಕಾರ್ಡ್‌, ನಾಲ್ಕು ಮೊಬೈಲ್‌ಗ‌ಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ದೂರು ನೀಡಲು ಭಯ ಬೇಡ :

ಹನಿಟ್ರ್ಯಾಪ್‌ಗೆ ಒಳಗಾದವರು ಅಂಜಿಕೆಯಿಲ್ಲದೇ ದೂರು ನೀಡಿದರೆ ಅವರ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಎಂದು ಆಯುಕ್ತರು ಹೇಳಿದರು.

ದನ ಸಾಗಾಟಕ್ಕೂ ವಾಹನ ಬಳಕೆ :

ಎಕ್ಸ್‌ಯುವಿ ವಾಹನವನ್ನು ದನ ಸಾಗಾಟಕ್ಕೂ ಬಳಕೆ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ವಾಹನದ ಸೀಟುಗಳನ್ನು ತೆಗೆದು ಅದರಲ್ಲಿ ದನಗಳನ್ನು ಸಾಗಾಟ ಮಾಡಲು ಅನುಕೂಲವಾಗುವಂತೆ ಮಾರ್ಪಡಿಸಲಾಗಿತ್ತು ಎಂದು ಆಯುಕ್ತರು ತಿಳಿಸಿದ್ದಾರೆ.

ಉಪ ಪೊಲೀಸ್‌ ಆಯುಕ್ತರಾದ ಹರಿರಾಮ್‌ ಶಂಕರ್‌ ಮತ್ತು ವಿನಯ್‌ ಗಾಂವ್ಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.