ದಿವ್ಯಾಂಗ ಮಕ್ಕಳ ಹೃದಯ ಮಿಡಿತದ ಸೇವೆಗೆ ಗೌರವ


Team Udayavani, Dec 7, 2017, 12:55 PM IST

7-Dec-9.jpg

ಬಜಪೆ : ದೇಶದಲ್ಲಿ ಮೊದಲ ಬಾರಿ ಸಮನ್ವಯ ಶಿಕ್ಷಣವನ್ನು ದಿವ್ಯಾಂಗ ಮಕ್ಕಳ ಜತೆ ಸಾಮಾನ್ಯ ಮಕ್ಕಳಿಗೂ ಒದಗಿಸುವ ಮೂಲಕ ಯಶಸ್ವಿಯಾದ ವಾಮಂಜೂರಿನ ಎಸ್‌ ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಗೆ ಅತ್ಯುತ್ತಮ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಡಿ. 3ರಂದು ದಿಲ್ಲಿಯಲ್ಲಿ ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ಅಂಗವಿಕಲ ದಿನಾಚರಣೆಯ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಸಂಸ್ಥೆಯ ಕಾರ್ಯದರ್ಶಿ ಪ್ರೊ| ಎ. ರಾಜೇಂದ್ರ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆ 1981ರಿಂದ ಶ್ರವಣದೋಷ, ದೈಹಿಕ ನ್ಯೂನತೆ, ಆಟಿಸಂ, ಕಲಿಕಾ ನ್ಯೂನತೆ, ಬುದ್ಧಿಮಾಂದ್ಯತೆ, ದೃಷಿದೋಷವಿರುವ ದಿವ್ಯಾಂಗ ಮಕ್ಕಳಿಗೆ ಸಮನ್ವಯದಿಂದ ಶಿಕ್ಷಣ ನೀಡುತ್ತಿರುವುದು ಗಮನಾರ್ಹ. ಸಾಮಾನ್ಯ ಮಕ್ಕಳ ಜತೆ ಇವರಿಗೆ ಇಲ್ಲಿ ದೊರಕುವ ಹೃದಯ ಮಿಡಿತದ ಶಿಕ್ಷಣವಿದು. ವಾಮಂಜೂರಿನ ಎಸ್‌ ಡಿಎಂ ಮಂಗಳಜ್ಯೋತಿ ಸಮಗ್ರ ಶಿಕ್ಷಣ ಶಾಲೆ 1000ಕ್ಕಿಂತ ಅಧಿಕ ದಿವ್ಯಾಂಗ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತಂದಿದೆ. ಆಧುನಿಕ ವಾಕ್‌ಶ್ರವಣ ವಿಭಾಗ, ಫಿಸಿಯೋಥೆರಪಿ, ಆಟಿಸಂ ವಿಭಾಗ, ಸಂಪನ್ಮೂಲ ಶಿಕ್ಷಣ ವ್ಯವಸ್ಥೆ, ಉನ್ನತ ಶಿಕ್ಷಣಕ್ಕಾಗಿ ಕೈಗಾರಿಕಾ ತರಬೇತಿ ಕೇಂದ್ರ (ಐಟಿಐ), ವೃತ್ತಿ ತರಬೇತಿ ಕೇಂದ್ರಗಳು ಇಲ್ಲಿ ಸೇವೆ ನೀಡುತ್ತಿವೆ. 2011ರಲ್ಲಿ ಈ ಸಂಸ್ಥೆಯ ಸೇವೆಯನ್ನು ಪರಿಗಣಿಸಿ ಅಂಗವಿಕಲ ದಿನಾಚರಣೆಯ ಸಂದರ್ಭದಲ್ಲಿ ರಾಜ್ಯ ಸರಕಾರ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನೂ ಹಲವಾರು ಪ್ರಶಸ್ತಿಗಳನ್ನು ಈ ಸಂಸ್ಥೆ ಗಳಿಸಿದೆ.

ಶಿಕ್ಷಕ-ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಈ ಸಂಸ್ಥೆಯಲ್ಲಿ ಕೆಲಸ ಮಾಡುವ ಮೂವರಿಗೆ ರಾಜ್ಯ ಪ್ರಶಸ್ತಿ ಸಿಕ್ಕಿದೆ. ಇಬ್ಬರು ದಿವ್ಯಾಂಗ ಶಿಕ್ಷಕಿಯರಾದ ಸಂಗೀತ ಶಿಕ್ಷಕಿ ಕಸ್ತೂರಿ, ಕರಕುಶಲ ತರಬೇತಿ ಶಿಕ್ಷಕಿ ಹರಿಣಾಕ್ಷಿ, ಮುಖ್ಯಶಿಕ್ಷಕ ಅಶೋಕ್‌ ಕುಮಾರ್‌ ಪ್ರಶಸ್ತಿ ಗಳಿಸಿದ್ದಾರೆ. ಡಿ. 6ರಂದು ವಾಮಂಜೂರಿನ ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಾಲೆಯಲ್ಲಿ ಈ ಪ್ರಶಸ್ತಿ ಸಮಾರಂಭವಿದೆ. ಸಂಸ್ಥೆಯ ಅಧ್ಯಕ್ಷ ಡಾ| ವೀರೇಂದ್ರ ಹೆಗ್ಗಡೆಯವರು ಆಗಮಿಸಲಿದ್ದಾರೆ ಎಂದು ಆಡಳಿತಾಧಿಕಾರಿ ಗಣೇಶ್‌ ಭಟ್‌ ವಿ. ತಿಳಿಸಿದ್ದಾರೆ.

47 ಸಂಸ್ಥೆಗಳಿಗೆ ಪ್ರಶಸ್ತಿ
ದಿಲ್ಲಿಯಲ್ಲಿ ನಡೆದ ಅಂಗವಿಕಲ ದಿನಾಚರಣೆ ಸಮಾರಂಭದಲ್ಲಿ ಅಂಗವಿಕಲರ ಅಭ್ಯುದಯಕ್ಕೆ ಶ್ರಮಿಸಿದ ದೇಶದ 47 ವ್ಯಕ್ತಿಗಳಿಗೆ ಹಾಗೂ 5 ಸಂಸ್ಥೆಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ರಾಜ್ಯದಲ್ಲಿ ಮಂಗಳೂರು ವಾಮಂಜೂರಿನ ಎಸ್‌ಡಿಎಂ ಮಂಗಳಜ್ಯೋತಿ ಸಮಗ್ರ ಶಿಕ್ಷಣ ಶಾಲೆ ಹಾಗೂ ಬೆಂಗಳೂರಿನ ಸಮರ್ಥನಮ್‌ ಟ್ರಸ್ಟ್‌ ಗೆ ಈ ಪ್ರಶಸ್ತಿ ದೊರಕಿದೆ. ನವಿ ಮುಂಬಯಿಯ ಇಟಿಸಿ ಎಜುಕೇಶನ್‌ ಟ್ರೆçನಿಂಗ್‌ ಸೆಂಟರ್‌, ಸಿಕ್ಕಿಂನ ವಿಕಲಾಂಗ್‌ ಸಹಾಯಕ್‌ ಸಮಿತಿ, ಹಿಮಾಚಲ ಪ್ರದೇಶದ ಚಿನ್ಮಯ ರೂರಲ್‌ ಡೆಮಲಪ್‌ಮಂಟ್‌ ಸಂಸ್ಥೆಗೂ ಈ ಪ್ರಶಸ್ತಿ ನೀಡಲಾಗಿದೆ. ಬಾಯಿಯಿಂದಲೇ ಚಿತ್ರಕಲೆ ಬಿಡಿಸುವ ಮಹಿಳೆ, ಅಂತಾರಾಷ್ಟ್ರೀಯ ಸಂಸ್ಥೆಯ ಅರ್ಥಿಕ ಸಲಹೆಗಾರರು ಇದ್ದರು. ದೃಷ್ಟಿ ದೋಷವಿದ್ದ ಕೇರಳದ ಟಿಫಾನಿ ಮಾರಿಯಾಬ್ರಾರ್‌ ಆವರು ದೃಷ್ಟಿ ದೋಷದ ಉಪಕರಣ ತಯಾರಿ, ಏಶ್ಯಾ ಕಪ್‌ ಅಂಧರ ಕ್ರಿಕೆಟ್‌ನಲ್ಲಿ 2ಬಾರಿ ಪ್ರಶಸ್ತಿ ಗೆದ್ದುಕೊಟ್ಟ ಕರ್ನಾಟಕದ ಶೇಖರ್‌ ನಾಯಕ್‌ ಅವರು ಪ್ರಶಸ್ತಿ ಪಡೆದವರಲ್ಲಿದ್ದರು.

ಸೇವೆಗೆ ಸಂದ ಗೌರವ
ಇದು ಸೇವೆಗೆ ಸಂದ ಗೌರವ. ಇಲ್ಲಿನ ಶಿಕ್ಷಕ -ಶಿಕ್ಷಕೇತರ ಸಿಬಂದಿಗೆ ಇನ್ನೂ ಹೆಚ್ಚು ಸೇವೆ ಮಾಡಲು ಹುಮ್ಮಸ್ಸು ನೀಡಿದೆ. ಸಂಸ್ಥೆಯ ಅಧ್ಯಕ್ಷ ಪದ್ಮವಿಭೂಷಣ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಇದಕ್ಕೆ ಸ್ಫೂರ್ತಿ. ಅವರ 50ನೇ ಪಟ್ಟಾಭಿಷೇಕ ಸಂದರ್ಭದಲ್ಲಿ ಈ ಪ್ರಶಸ್ತಿ ಬಂದಿದ್ದು ಹೆಚ್ಚು ಮಹತ್ವ ಪಡೆದಿದೆ ಎಂದು ಆಡಳಿತಾಧಿಕಾರಿ ಗಣೇಶ್‌ ಭಟ್‌ ವಿ. ಹೇಳಿದ್ದಾರೆ.

ಸುಬ್ರಾಯ ನಾಯಕ್‌ ಎಕ್ಕಾರು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.