ಹೊಸಮಠ ಸೇತುವೆ: ಈ ಮಳೆಗಾಲಕ್ಕೂ ಅನುಮಾನ 


Team Udayavani, May 23, 2018, 4:00 PM IST

23-may-19.jpg

ಕಡಬ: ತಾ| ಕೇಂದ್ರ ವಾಗಿರುವ ಕಡಬವನ್ನು ಮಳೆಗಾಲದಲ್ಲಿ ಸಂಪರ್ಕಿಸಲು ಪ್ರಮುಖ ತೊಡಕಾ ಗಿರುವುದು ಹೊಸಮಠದ ಮುಳುಗು ಸೇತುವೆ. ಹೊಸಮಠ ಮುಳುಗು ಸೇತುವೆ ಯ ಪಕ್ಕ ಹೊಸ ಸೇತುವೆ ನಿರ್ಮಾಣ ಕಾಮ ಗಾರಿ ಕಳೆದ ವರ್ಷವೇ ಮುಗಿದಿತ್ತು. ಆದರೆ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದೆ.

ಎಲ್ಲವೂ ಅಂದುಕೊಂಡಂತೆಯೇ ನಡೆದಿದ್ದರೆ ಸೇತುವೆಯ ಇಕ್ಕೆಲಗಳ ಸಂಪರ್ಕ ರಸ್ತೆಯ ಕಾಮಗಾರಿಯೂ ಪೂರ್ತಿಯಾಗಿ ಎರಡು ವರ್ಷಗಳ ಹಿಂದೆಯೇ ಮಳೆಗಾಲದಲ್ಲಿ ಮುಳುಗಡೆಯ ಭೀತಿ ಇಲ್ಲದೆ ಹೊಸ ಸೇತುವೆಯ ಮೇಲೆ ವಾಹನಗಳು ಸಂಚರಿಸಬಹುದಾಗಿತ್ತು. ಆದರೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ, ಜನರ ಅಸಹಕಾರ ಪ್ರವೃತ್ತಿಯ ಕಾರಣದಿಂದಾಗಿ ಸೇತುವೆಯ ಉಪಯೋಗಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ.

ಜಾಗದ ಸಮಸ್ಯೆ
ಈ ಮಳೆಗಾಲದಲ್ಲಿಯೂ ಹೊಸಮಠ ಮುಳುಗು ಸೇತುವೆಯ ಭೀತಿ ತಪ್ಪಿಲ್ಲ. ಸಂಪರ್ಕ ರಸ್ತೆಗೆ ಸಂಬಂಧಿಸಿದ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ತೊಡಕುಂಟಾದ ಕಾರಣದಿಂದಾಗಿ ಕಾಮಗಾರಿ ವಿಳಂಬವಾಗಿದೆ. ಸೇತುವೆಯ ಎರಡೂ ಕಡೆಗಳಲ್ಲಿ ಸಂಪರ್ಕ ರಸ್ತೆ ನಿರ್ಮಾಣಕ್ಕಾಗಿ ಒಟ್ಟು 45 ಸೆಂಟ್ಸ್‌ ಖಾಸಗಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಈ ಹಿಂದೆ ಗುರುತಿಸಲಾಗಿತ್ತು. ಇದೀಗ ಅದನ್ನು ಕಡಿತಗೊಳಿಸಿ ಕಡಬ ದಿಕ್ಕಿನಲ್ಲಿ ಸುಕೇಶ್‌ ಹೆಬ್ಟಾರ್‌ (2 ಸೆಂಟ್ಸ್‌) ಹಾಗೂ ಗಿರಿಯಪ್ಪ ಗೌಡ (16 ಸೆಂಟ್ಸ್‌ ) ಅವರಿಗೆ ಸೇರಿದ ಒಟ್ಟು 18 ಸೆಂಟ್ಸ್‌ ಭೂಮಿಯನ್ನು ಮಾತ್ರ ಸ್ವಾಧೀನಪಡಿಸಿಕೊಂಡು ಕಾಮಗಾರಿ ನಡೆಸಲಾಗುತ್ತಿದೆ. ಉಪ್ಪಿನಂಗಡಿ ಭಾಗದಲ್ಲಿ ಸಂಪರ್ಕ ರಸ್ತೆಯ ಕಾಮಗಾರಿಗೆ ತೊಡಕಾಗಿರುವ ಎಚ್‌ಟಿ ಲೈನ್‌ನ ವಿದ್ಯುತ್‌ ಕಂಬವನ್ನು ಮೆಸ್ಕಾಂನವರು ತೆರವುಗೊಳಿಸಿಕೊಡಬೇಕಿದೆ. ಕಡಬ ಭಾಗದಲ್ಲಿ ಸಂಪರ್ಕ ರಸ್ತೆ ನಿರ್ಮಿಸಬೇಕಾದ ಜಾಗದ ಪಕ್ಕದಲ್ಲಿರುವ ನೀರು ಹರಿಯುವ ತೋಡಿಗೆ ತಡೆಗೋಡೆ ನಿರ್ಮಿಸುವ ಕೆಲಸ ನಡೆಯುತ್ತಿದೆ.

7.50 ಕೋಟಿ ರೂ. ಅನುದಾನ 
ಹೊಸಮಠದಲ್ಲಿ ನೂತನ ಸೇತುವೆ ನಿರ್ಮಾಣಕ್ಕಾಗಿ 7.50 ಕೋಟಿ ರೂ. ಬಿಡುಗಡೆಯಾಗಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌) ಅಡಿಯಲ್ಲಿ ಅನುದಾನ ಮಂಜೂರಾಗಿದ್ದು, ಕಾಮಗಾರಿ ನಡೆಯುತ್ತಿದೆ. ಈಗ ಇರುವ ಸೇತುವೆಗಿಂತ ಎತ್ತರದಲ್ಲಿ ಹೊಸ ಸೇತುವೆ ನಿರ್ಮಾಣವಾಗಿದೆ. 125 ಮೀ. ಉದ್ದ ಹಾಗೂ 12 ಮೀ. ಅಗಲದಲ್ಲಿ ತಡೆಬೇಲಿಯನ್ನು ಒಳಗೊಂಡ 6 ಪಿಲ್ಲರ್‌ಗಳ ಸುಂದರ ಸೇತುವೆ ನಿರ್ಮಾಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ತೆರೆದುಕೊಳ್ಳಲಿದೆ. ಪ್ರಸ್ತುತ ಇರುವ ಸೇತುವೆಯನ್ನು ಹಾಗೆಯೇ ಉಳಿಸಿಕೊಂಡು ಸಂಚಾರಕ್ಕೆ ತೊಂದರೆಯಾಗದ ರೀತಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಸಲಾಗಿದೆ.

ಮಳೆಗಾಲಕ್ಕೆ ಮೊದಲು ಪೂರ್ಣ
ಸಂಪರ್ಕ ರಸ್ತೆಗೆ ಬೇಕಾದ ಭೂಮಿಯ ಸ್ವಾಧೀನ ಪ್ರಕ್ರಿಯೆ ತಡವಾದುದರಿಂದ ಕಾಮಗಾರಿಗೆ ತಡೆಯುಂಟಾಗಿತ್ತು. ಇದೀಗ ಸಮಸ್ಯೆ ಬಗೆಹರಿದಿದೆ. ಸರಕಾರವು ಸದ್ರಿ ಭೂಮಿಯನ್ನು ಭೂ ಮಾಲಕರಿಗೆ ಭೂಮಿಯ ಮೌಲ್ಯ ನೀಡಿ ಖರೀದಿ ಮಾಡಿದೆ. ಮಳೆಗಾಲ ಆರಂಭವಾಗುವ ಮೊದಲು ಸಂಪರ್ಕ ರಸ್ತೆಯ ಕಾಮಗಾರಿ ಪೂರ್ತಿಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡುವ ಪ್ರಯತ್ನದಲ್ಲಿದ್ದೇವೆ.
– ಪುಟ್ಟಸ್ವಾಮಿ ಎಇಇ, ಕೆಆರ್‌ಡಿಸಿಎಲ್‌, ಹಾಸನ

 ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.