ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭ: ವಿದ್ಯಾರ್ಥಿಗಳ ಸಂಭ್ರಮ
Team Udayavani, Oct 22, 2021, 3:20 AM IST
ಮಹಾನಗರ: ದಸರಾ ರಜೆ ಪೂರ್ಣಗೊಂಡು ಶೈಕ್ಷಣಿಕ ಚಟುವಟಿಕೆ ಗುರುವಾರದಿಂದ ಪುನರಾರಂಭವಾಗಿದೆ. ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಮಧ್ಯಾಹ್ನದ ಬಿಸಿಯೂಟ ಯೋಜನೆ ಮೊದಲ ದಿನ ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾಂಗವಾಗಿ ನಡೆಯಿತು.
ಬಹುದಿನಗಳ ಬಳಿಕ ವಿದ್ಯಾರ್ಥಿಗಳು ಶಾಲೆಗಲ್ಲಿ ಒಟ್ಟಿಗೆ ಕುಳಿತು ಬಿಸಿಯೂಟ ಸವಿದು ಸಂಭ್ರಮಿಸಿದರು.
ಬಹುತೇಕ ಶಾಲೆಗಳಲ್ಲಿ ಮೊದಲ ದಿನ ಅನ್ನ ಸಾಂಬಾರು, ಪಲ್ಯ ಇದ್ದರೆ, ಉಳಿದ ಶಾಲೆಗಳಲ್ಲಿ ಇದರ ಜತೆಗೆ ಪಾಯಸವೂ ಇತ್ತು. ಜತೆಗೆ ಕೆಲವು ಶಾಲೆಯಲ್ಲಿ ಸಿಹಿತಿಂಡಿಯನ್ನೂ ನೀಡಿದ್ದಾರೆ. ಇನ್ನೂ ಕೆಲವು ಶಾಲೆಯಲ್ಲಿ ಮೊದಲ ದಿನ ಮಕ್ಕಳಿಗೆ ದಾನಿಗಳ ಸಹಕಾರದಿಂದ ಐಸ್ಕ್ರೀಮ್ ನೀಡಿದ್ದಾರೆ. ಈ ಮೂಲಕ ದಸರಾ ರಜೆ ಮುಗಿಸಿದ 6ರಿಂದ 10ನೇ ತರಗತಿಯ ಸರಕಾರಿ ಹಾಗೂ ಅನುದಾನಿತ ಶಾಲೆಯ ಮಕ್ಕಳು ಬಿಸಿಯೂಟ ಪಡೆದಿದ್ದಾರೆ.
ಮಂಗಳೂರು ದಕ್ಷಿಣ, ಉತ್ತರ ಹಾಗೂ ಮೂಡುಬಿದಿರೆ ವ್ಯಾಪ್ತಿಯನ್ನು ಒಳಗೊಂಡಂತೆ ಒಟ್ಟು 23,179 ವಿದ್ಯಾರ್ಥಿಗಳು ಬಿಸಿಯೂಟದ ಲಾಭ ಪಡೆದಿದ್ದಾರೆ. ಮಂಗಳೂರು ದಕ್ಷಿಣದ 187 ಹಾಗೂ ಮಂಗಳೂರು ಉತ್ತರದ 172 ಸರಕಾರಿ, ಅನುದಾನಿತ ಶಾಲೆಯಲ್ಲಿ ಬಿಸಿಯೂಟ ಯೋಜನೆ ಆರಂಭವಾಗಿದೆ. ಈ ಪೈಕಿ ಮಂಗಳೂರು ದಕ್ಷಿಣ (44) ಮಂಗಳೂರು ಉತ್ತರ (76) ಹಾಗೂ ಬಂಟ್ವಾಳ (13)ವ್ಯಾಪ್ತಿಯ ಒಟ್ಟು 133 ಶಾಲೆಗಳಲ್ಲಿ ಇಸ್ಕಾನ್ ವತಿಯಿಂದ ಬಿಸಿಯೂಟ ವಿತರಿಸಲಾಗಿದೆ. ಇಸ್ಕಾನ್ ವತಿಯಿಂದಲೇ ಇಲ್ಲಿಗೆ ಊಟೋಪಚಾರ ವ್ಯವಸ್ಥೆ ಮಾಡಲಾಗುತ್ತದೆ. ಇದರ ವೆಚ್ಚವನ್ನು ಸರಕಾರ ಇಸ್ಕಾನ್ಗೆ ನೀಡುತ್ತದೆ.
ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಪ್ರಾರಂಭವಾಗಿದೆ. ಹಲವು ಶಾಲೆಗಳಲ್ಲಿ ಪಾಯಸದೂಟ ಕೂಡ ಇತ್ತು. ಸುದೀರ್ಘ ಸಮಯದ ಬಳಿಕ ಮಕ್ಕಳು ಬಿಸಿಯೂಟ ಪಡೆದು ಸಂತೋಷಪಟ್ಟಿದ್ದಾರೆ. –ಉಷಾ ಎಂ., ಕಾರ್ಯನಿರ್ವಾಹಕ ಅಧಿಕಾರಿ, ಅಕ್ಷರದಾಸೋಹ ಯೋಜನೆ-ದ.ಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ