ವಸತಿ ನಿವೇಶನವಿದ್ದರೂ ಬಡವರಿಗೆ ದೂರ


Team Udayavani, Aug 17, 2021, 3:20 AM IST

ವಸತಿ ನಿವೇಶನವಿದ್ದರೂ ಬಡವರಿಗೆ ದೂರ

ಮದ್ಯ ಗ್ರಾಮವು ಮೂಲಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದು, ಅಭಿವೃದ್ಧಿಯಾಗಬೇಕಿದೆ. ಅಲ್ಲದೆ ಅಭಿವೃದ್ಧಿಕಾರ್ಯಗಳ ನಿರ್ವಹಣೆಗೆ ಕೂಡ ಮುಂದಾಗಬೇಕಿದೆ. ಗ್ರಾಮದಲ್ಲಿ ನರ್ಮ್ ಬಸ್‌ಗೆ ಬೇಡಿಕೆ, ನಂದಿನಿ ನದಿಗೆ ತಡೆಗೋಡೆ ನಿರ್ಮಿಸುವ ಅಗತ್ಯವಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆಯುವುದು ಉದಯವಾಣಿ ಸುದಿನದ “ಒಂದು ಊರು-ಹಲವು ದೂರು’ ಅಭಿಯಾನದ ಉದ್ದೇಶ. 

ಸುರತ್ಕಲ್‌: ಮದ್ಯ ಗ್ರಾಮವು ಚೇಳ್ಯಾರು ಗ್ರಾ.ಪಂ. ಆಡಳಿತದಡಿ ಬರುವ ಪುಟ್ಟ ಹಳ್ಳಿ. ಇತ್ತ ಮಹಾನಗರ ಪಾಲಿಕೆ ಅತ್ತ ಕಿನ್ನಿಗೋಳಿ ಸಂಪರ್ಕಿಸುವ ನಡುವಿನ ಗ್ರಾಮವಿದು. ಇಲ್ಲಿ ಮನೆ ನಿವೇಶನಕ್ಕೆ ಒಟ್ಟು 14 ಎಕರೆ ಭೂಮಿ ಗುರುತಿಸಿ ಹಲವಾರು ವರ್ಷಗಳಾದರೂ ಮನೆಯಿಲ್ಲದವರ ಕನಸು ಇದುವರೆಗೂ ನನಸಾಗಿಲ್ಲ.

ಸುಮಾರು 200ಕ್ಕೂ ಅಧಿಕ ಕುಟುಂಬಗಳಿಗೆ ನಿವೇಶನ ಹಂಚಲು ಇಲ್ಲಿ ಸಾಧ್ಯವಿದ್ದು, ಭೂಮಿ ಅಳತೆಗೆ ಸರ್ವೇಯರ್‌ ಇಲ್ಲದ ಸ್ಥಿತಿಯಿದೆ. ಗ್ರಾ.ಪಂ.ನ ಗ್ರಾಮಸಭೆಯಲ್ಲಿ ಈ ಬಗ್ಗೆ ಸಾರ್ವಜನಿಕರು ಅಧಿಕಾರಿಗಳ ಗಮನಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಇದೀಗ ಗುರುತಿಸಲ್ಪಟ್ಟ ಭೂಮಿ ಊಟಕ್ಕಿಲ್ಲದ ಉಪ್ಪಿನ ಕಾಯಿಯಂತಾಗಿದೆ.

ಕಿರಿದಾದ ಸೇತುವೆ :

ಮದ್ಯ ಗ್ರಾಮವನ್ನು ಪಕ್ಕದ ಪಂಜ, ಪಕ್ಷಿಕೆರೆ ಸಂಪರ್ಕಿಸುವ ಸೇತುವೆಯೊಂದನ್ನು ನಿರ್ಮಿಸ ಲಾಗಿದ್ದು, ಬಸ್‌ ಸಂಚಾರಕ್ಕೆ ಯೋಗ್ಯವಾಗಿಲ್ಲ. ಕಾರು, ಬೈಕ್‌ ಮತ್ತಿತರ ಲಘು ವಾಹನ ಓಡಾಟ ನಡೆಸುವಷ್ಟು ಸಣ್ಣ ಸೇತುವೆ ನಿರ್ಮಿಸಲಾಗಿದೆ. ಭವಿಷ್ಯದಲ್ಲಿ ಬಸ್‌ ಸಂಚಾರಕ್ಕೆ ಮತ್ತೆ ಪ್ರತ್ಯೇಕ ಸೇತುವೆ ನಿರ್ಮಿಸುವ ಅನಿವಾರ್ಯವಿದೆ. ಈ ಭಾಗದ ಜನತೆಗೆ ಕಿನ್ನಿಗೋಳಿ, ಮೂಲ್ಕಿ, ತಾಲೂಕು ಕಚೇರಿ ಮೂಡುಬಿದಿರೆಗೆ ಹೋಗಲು ಹತ್ತಿರದ ರಸ್ತೆಯಾಗಿದೆ.

ಇತರ ಸಮಸ್ಯೆಗಳೇನು? : 

  • ಇಲ್ಲಿಗೆ ಖಾಸಗಿ ಬಸ್‌ಗಳು ಓಡಾಟ ನಡೆಸುತ್ತಿದ್ದರೂ ಜನರ ಅನುಕೂಲಕ್ಕಾಗಿ ನರ್ಮ್ ಬಸ್‌ಗೆ ಬೇಡಿಕೆ ಇರಿಸಲಾಗಿದೆ.
  • ನಂದಿನಿ ನದಿ ಸಮೀಪದಲ್ಲೇ ಹರಿಯುವುದರಿಂದ ಮಳೆಗಾಲದಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಉಪ್ಪು ನೀರು ಕೃಷಿ ಭೂಮಿಗೆ ನುಗ್ಗುವ ಸಮಸ್ಯೆಯಿದೆ. ತಡೆಗೋಡೆ ರಚನೆಯ ಬೇಡಿಕೆಯಿದ್ದು ಇದುವರೆಗೂ ಪೂರ್ಣವಾಗಿಲ್ಲ.
  • ಒಳ ರಸ್ತೆಗಳು ಡಾಮರು ಕಾಮಗಾರಿ, ಮಳೆ ನೀರು ಹರಿಯಲು ವ್ಯವಸ್ಥೆಯಾಗಬೇಕಿದೆ.
  • ಈ ಭಾಗದಲ್ಲಿ ಮುಡಾ ವತಿಯಿಂದ ಅಭಿವೃದ್ಧಿಗೊಳ್ಳಬೇಕಾದ ಬಡಾವಣೆ ಇನ್ನೂ ಮೂಲಸ್ಥಿತಿಯಲ್ಲಿಯೇ ಇದೆ.
  • ತ್ಯಾಜ್ಯ ವಿಲೇವಾರಿ ಸಂಗ್ರಹ ಘಟಕ ಇದುವರೆಗೂ ಆರಂಭವಾಗಿಲ್ಲ. ಈ ಯೋಜನೆ ಆರಂಭಿಸುವ ಅಗತ್ಯವಿದೆ.

 

-ಲಕ್ಷ್ಮೀನಾರಾಯಣ ರಾವ್‌

 

ಟಾಪ್ ನ್ಯೂಸ್

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.