ವಸತಿ ಯೋಜನೆ ನೋಡಲ್‌ ಅಧಿಕಾರಿಗಳಿಗೆ 2 ವರ್ಷಗಳಿಂದ ಬಂದಿಲ್ಲ ವೇತನ !


Team Udayavani, Jun 3, 2018, 6:00 AM IST

rs.jpg

ಪುತ್ತೂರು: ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ನೋಡಲ್‌ ಅಧಿಕಾರಿಗಳಾಗಿ ವಿವಿಧ ವಸತಿ ಯೋಜನೆ
ಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಿಭಾಯಿಸುತ್ತಿರುವ 206 ಮಂದಿಗೆ 2 ವರ್ಷಗಳಿಂದ ಸಂಬಳವೇ ಸಿಕ್ಕಿಲ್ಲ…!

ರಾಜೀವ್‌ ಗಾಂಧಿ ಗ್ರಾಮೀಣ ವಸತಿ ನಿಗಮದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು 176 ತಾಲೂಕು ಹಾಗೂ 30 ಜಿಲ್ಲೆಗಳಿಗೆ ವಸತಿ ಯೋಜನೆಯ ನೋಡಲ್‌ ಅಧಿಕಾರಿಗಳನ್ನು 2011ರಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲಾಗಿತ್ತು. ಡಾ| ಅಂಬೇಡ್ಕರ್‌ ವಸತಿ ಯೋಜನೆ, ಪ್ರಧಾನಮಂತ್ರಿ ಆವಾಸ್‌ ಯೋಜನೆ, ಬಸವ ವಸತಿ ಸಹಿತ ಎಲ್ಲ ವಸತಿ ಯೋಜನೆಗಳನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಇವರಿಗೆ ನೀಡಲಾಗಿತ್ತು.

ನ್ಯಾಯಾಲಯದಲ್ಲಿ ಪ್ರಕರಣ
2015ರ ತನಕ ಇವರಿಗೆ ಸಮರ್ಪಕವಾಗಿ ಸಂಬಳವನ್ನೂ ನೀಡಲಾಗಿತ್ತು. 2015ರಲ್ಲಿ ಈ ವಸತಿ ಯೋಜನೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ನೋಡಲ್‌ ಅಧಿಕಾರಿಗಳನ್ನು ಗುತ್ತಿಗೆ ಆಧಾರ ವ್ಯವಸ್ಥೆಯಿಂದ ಹೊರಗುತ್ತಿಗೆಗೆ ಬದಲಿಸುವ ಪ್ರಯತ್ನ ಸರಕಾರದ ಮಟ್ಟದಲ್ಲಿ ನಡೆದಿದ್ದು, ಇದರ ವಿರುದ್ಧ ನೋಡಲ್‌ ಅಧಿಕಾರಿಗಳು ರಾಜ್ಯ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಇವರ ಹೋರಾಟ ನ್ಯಾಯಾಲಯದ ಏಕ ಸದಸ್ಯ ಪೀಠದಲ್ಲಿ ವಿಫಲವಾಗಿದ್ದರೂ ಇದೀಗ ಇವರ ದೂರು ದ್ವಿಸದಸ್ಯ ಪೀಠದಲ್ಲಿದೆ. ಯಥಾಸ್ಥಿತಿಯನ್ನು ಕಾಯ್ದು ಕೊಳ್ಳುವಂತೆ ಆದೇಶವನ್ನೂ ನೀಡಲಾಗಿದೆ.

ಎಲ್ಲಿ ಎಡವಟ್ಟಾಯಿತು ?
ಹೊರಗುತ್ತಿಗೆ ಆಧಾರದಡಿ ನೇಮಕಾತಿಯನ್ನು ವಿರೋಧಿಸಿ ನೋಡಲ್‌ ಅಧಿಕಾರಿಗಳು ನ್ಯಾಯಾಲಯದ ಮೆಟ್ಟಲು ಹತ್ತಿದ ಬಳಿಕ ಅವರ ಸಂಬಳವನ್ನು ತಡೆ ಹಿಡಿಯಲಾಯಿತು. ಕಾನೂನಾತ್ಮಕ ಹೋರಾಟ ನಡೆಸುತ್ತಲೇ ಈ 206 ಮಂದಿ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದಾರೆ. ಕಳೆದ 2 ವರ್ಷಗಳಲ್ಲಿ ಸಂಬಳ ಇಲ್ಲದೇ ಕೆಲಸ ಮಾಡುವ ಅನಿವಾರ್ಯ ಸ್ಥಿತಿ ಇವರದ್ದಾಗಿದೆ.

ಈ ಮಧ್ಯೆ ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಕೊಟ್ರೇಶ್‌ ಅವರು ಸಂಬಳ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಿತ್ಯ ವಸತಿ ಯೋಜನೆಗಳ ಅನುಷ್ಠಾನ, ಅನುಮೋದನೆ, ಜಿಪಿಎಸ್‌ ಎಂದು ಓಡಾಡುವ ಇವರಿಗೆ ತಮ್ಮ ಬದುಕಿನ ಜಿಪಿಎಸ್‌ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ.

ಸಮಸ್ಯೆಗೆ ಸ್ಪಂದಿಸಲಿ
ರಾಜ್ಯವನ್ನು ಗುಡಿಸಲು ಮುಕ್ತವಾಗಿಸಲು 2011ರಿಂದ ದುಡಿಯುತ್ತಿದ್ದ ಈ ವರ್ಗದ ಸಮಸ್ಯೆಗೆ ಸರಕಾರ ತತ್‌ಕ್ಷಣ ಸ್ಪಂದಿಸಬೇಕಾಗಿದೆ. ನ್ಯಾಯಯುತ ಹೋರಾಟವನ್ನು ಮಾಡಲು ಮುಂದಾಗಿರುವ ಸಿಬಂದಿಯ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ನಿಲ್ಲಿಸುವ ಮೂಲಕ ಇವರ ಬದುಕಿಗೆ ಮತ್ತೆ ಚೈತನ್ಯ ನೀಡುವ ಪ್ರಕ್ರಿಯೆಗೆ ಮುಂದಾಗಬೇಕಾಗಿದೆ.

ದ. ಕ. ಜಿಲ್ಲೆಯಲ್ಲೂ ರಾಜೀವ್‌ ಗಾಂಧಿ ಗ್ರಾಮೀಣ ವಸತಿ  ನಿಗಮದ ನೋಡಲ್‌ ಅಧಿಕಾರಿಗಳಾಗಿ 6 ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಜಿ.ಪಂ. ಆಡಳಿತ ವ್ಯಾಪ್ತಿಗೆ ಬರುವುದಿಲ್ಲ. ರಾಜ್ಯದಲ್ಲಿ ಇವರಿಗೆ ನಿರ್ಮಿತಿ ಕೇಂದ್ರದ ಮೂಲಕ ವೇತನ ನೀಡಲಾಗುತ್ತಿತ್ತು. ನಿಗಮ ಹಾಗೂ ನೋಡಲ್‌ ಅಧಿಕಾರಿಗಳ ಮಧ್ಯೆ ಗೊಂದಲ ಉಂಟಾಗಿದೆ. ಪ್ರಕರಣ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. 
– ಡಾ| ಎಂ.ಆರ್‌. ರವಿ
ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.