ಗುಡ್ಡೆಯಂಗಡಿ: ಎಚ್‌ಪಿಸಿಎಲ್‌ ಸಿಬಂದಿ ಪ್ರತಿಭಟನೆ


Team Udayavani, May 4, 2019, 6:00 AM IST

10

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಕಂಪೆನಿ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.

ಬಂಟ್ವಾಳ : ಎಚ್‌ಪಿಸಿಎಲ್‌ ಕಂಪೆನಿ 11 ಮಂದಿ ಭದ್ರತಾ ಸಿಬಂದಿಯನ್ನು ಯಾವುದೇ ಪೂರ್ವ ಸೂಚನೆ ನೀಡದೆ ಕರ್ತವ್ಯದಿಂದ ತೆರವು ಮಾಡಿದ ಕ್ರಮದ ವಿರುದ್ಧ ಬಡಗ ಬೆಳ್ಳೂರು ಗುಡ್ಡೆಯಂಗಡಿ ಘಟಕದಲ್ಲಿ ಸಿಬಂದಿ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅಧಿಕಾರಿ ಗಳ ಜತೆ ಮಾತುಕತೆ ನಡೆಸಿ ಸೇವೆಯಲ್ಲಿ ಮುಂದುವರಿಸಲು ಕ್ರಮ ಕೈಗೊಂಡಿದ್ದಾರೆ.

ಕಂಪೆನಿಯ ಗುಡ್ಡೆಯಂಗಡಿ, ಮಳಲಿ, ಕೈಕಂಬ, ಕಂದಾವರ ಘಟಕದ ಸ್ಥಳೀಯ 11 ಮಂದಿ ನೌಕರರನ್ನು ಸಂಸ್ಥೆ ಕೆಲಸದಿಂದ ತೆಗೆದು ಹಾಕಿತ್ತು. ಕಳೆದ 6 ವರ್ಷಗಳಿಂದ ಅವರು ಪಾಳಿಯಲ್ಲಿ ಕಾವಲುಗಾರ ಸೇವೆ ನಿರ್ವಹಿಸುತ್ತಿದ್ದರು. ಕೆಲಸ ಕಳೆದುಕೊಂಡ ಸಿಬಂದಿ ಮೇ 3ರಂದು ಬೆಳಗ್ಗೆ ಗುಡ್ಡೆಯಂಗಡಿ ಕಂಪೆನಿ ಗೇಟಿನ ಮುಂದೆ ಪ್ರತಿಭಟನೆ ನಡೆಸಿದರು.

ಶಾಸಕರಿಂದ ಮನವರಿಕೆ
ಮಾಹಿತಿ ತಿಳಿದ ಶಾಸಕರು ಸ್ಥಳಕ್ಕೆ ಬಂದಾಗ ಕೆಲಸ ಕಳೆದು ಕೊಂಡ ಭದ್ರತಾ ಸಿಬಂದಿ ತಮ್ಮ ಅಳಲನ್ನು ತೋಡಿ ಕೊಂಡರು. ಇದಕ್ಕೆ ಸ್ಪಂದಿಸಿದ ಶಾಸಕರು, ಸಂಸ್ಥೆಯ ಆಡಳಿತ ವರ್ಗವನ್ನು ಪ್ರತಿ ಭಟನ ಸ್ಥಳಕ್ಕೆ ಕರೆಯಿಸಿ ಕಷ್ಟದ ಕಾಲ ದಲ್ಲಿ ಸ್ಥಳೀಯ ಕಾರ್ಮಿಕರು ಕೆಲಸ ನಿರ್ವಹಣೆ ಮಾಡಿದ್ದಾರೆ. ಆದರೆ ಕಂಪೆನಿ ಸಮರ್ಥವಾಗಿ ಕಾರ್ಯ ನಡೆಸಿ ಕೊಂಡು ಹೋಗುವ ಈ ಸಂದರ್ಭ ಕಾರ್ಮಿಕರ ಮೇಲೆ ಯಾವುದೇ ದೂರುಗಳಿಲ್ಲದೆ, ಪೂರ್ವ ಮಾಹಿತಿ ನೀಡದೆ ಏಕಾಏಕಿ ಕೆಲಸದಿಂದ ವಜಾಗೊಳಿಸುವುದು ಸರಿಯಲ್ಲ. ಆರಂಭದಿಂದ ಕಂಪೆನಿಯ ಏಳಿಗೆಗೆ ದುಡಿದ ಸ್ಥಳೀಯ ಸಿಬಂದಿಗೆ ಅನ್ಯಾಯ ಮಾಡಬೇಡಿ ಎಂದರು.

ಈ ಕಂಪೆನಿ ನಿರ್ಮಿಸಲು ತಾವು ನೀಡಿದ ಜಮೀನಿಗೆ ಯಾವುದೇ ದರವನ್ನು ಪಡೆಯದೆ ಅವರು ಕಂಪೆನಿಯಲ್ಲಿ ಕೆಲಸ ಪಡೆದು ದುಡಿಯುತ್ತಿದ್ದು, ಮಾನವೀಯತೆ ನೆಲೆ ಯಲ್ಲಿ ಅವರನ್ನು ಕರ್ತವ್ಯದಲ್ಲಿ ಉಳಿಸಿ ಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ಮಾತುಕತೆ ಸಂದರ್ಭ ಕಂಪೆನಿಯ ಡಿ.ಜಿ.ಎಂ. ಬಿಶ್ವಾಸ್‌ ಕುಮಾರ್‌ ಶರ್ಮ, ಮ್ಯಾನೇಜರ್‌ ಕಿರಣ್‌ ಕುಮಾರ್‌, ಪ್ರಮುಖರಾದ ದೇವಪ್ಪ ಪೂಜಾರಿ, ಚಂದ್ರಹಾಶ ಶೆಟ್ಟಿ ನಾರ್ಲ, ಭುಜಂಗ ಕುಲಾಲ್‌, ಉಮೇಶ್‌ ಅರಳ, ಉಮೇಶ್‌ ಶೆಟ್ಟಿ, ನಂದರಾಮ್‌ ರೈ, ವಸಂತ ಕುಮಾರ್‌ ಅಣ್ಣಳಿಕೆ, ಗಂಜಿಮಠ ಗ್ರಾ.ಪಂ. ಸದಸ್ಯ ದುರ್ಗಾದಾಸ ಶೆಟ್ಟಿ, ಸಂದೀಪ್‌ ಶೆಟ್ಟಿ ಮೊಗರು, ಪವನ್‌ ಕುಮಾರ್‌ ಶೆಟ್ಟಿ, ಮಂಜುನಾಥ್‌ ಶೆಟ್ಟಿಗಾರ್‌, ಪುರುಷೋತ್ತಮ ಶೆಟ್ಟಿ ವಾಮದಪದವು, ಬಾಸ್ಕರ್‌ ಕುಲಾಲ್‌ ಮೊಗರು, ರಮೇಶ್‌ ಭಟ್ಟಾಜೆ, ರಂಜನ್‌ ಶೆಟ್ಟಿ, ವೇದಾನಂದ ಕಾರಂತ, ಅರಳ ಗ್ರಾ.ಪಂ. ಸದಸ್ಯ ಅಶ್ರಫ್ ಮತ್ತಿತರರರಿದ್ದರು. ಬಂಟ್ವಾಳ ಗ್ರಾ. ಠಾಣಾ ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಮಾಡಿದ್ದರು.

ಮೇಲಧಿಕಾರಿ ಸೂಚನೆವರೆಗೆ ಕೆಲಸದಲ್ಲಿ ಮುಂದುವರಿಕೆ
ಸ್ಥಳಕ್ಕೆ ಅಗಮಿಸಿದ ಕಂಪೆನಿಯ ಜನರಲ್‌ ಮ್ಯಾನೇಜರ್‌ ರಾಜಶೇಖರನ್‌ ಮಾತನಾಡಿ, ಪ್ರಸ್ತುತ ಎಲ್ಲ ಕಂಪೆನಿಗಳಲ್ಲೂ ಮಾಜಿ ಸೈನಿಕರನ್ನು ಪಹರೆ ಕೆಲಸಕ್ಕೆ ನೇಮಿಸುವಂತೆ ಸರಕಾರದ ಆದೇಶವಿದೆ. ಆ ನಿಟ್ಟಿನಲ್ಲಿ ಕ್ರಮ ತೆಗೆದುಕೊಂಡಿದ್ದೇವೆ. ಕಂಪೆನಿಯ ಮೇಲಧಿಕಾರಿಗಳಿಗೆ ವಿಷಯ ತಿಳಿಸಿ ಮುಂದಿನ ಕ್ರಮಗಳ ಬಗ್ಗೆ ತಿಳಿಸುತ್ತೇವೆ. ಅಲ್ಲಿಯವರೆಗೆ ಕಾರ್ಮಿಕರು ಕೆಲಸಕ್ಕೆ ಹಾಜರಾಗಲು ಅನುಮತಿ ನೀಡುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.