ಮಾನವೀಯ ಗುಣ ಬೆಳೆಸುವ ಶಿಕ್ಷಣ ಅಗತ್ಯ: ಬೈಕಾಡಿ 


Team Udayavani, Nov 17, 2017, 12:58 PM IST

17-Nov-7.jpg

ಕೊಡಿಯಾಲ್‌ಬೈಲ್‌: ಮಕ್ಕಳಿಗೆ ಪುಸ್ತಕ ಜ್ಞಾನದ ಜತೆಗೆ ಒಳ್ಳೆಯ ಸಂಸ್ಕಾರ-ಸಂಸ್ಕೃತಿ ಆಧಾರಿತ ಜೀವನ ಶಿಕ್ಷಣ ದೊರಕಬೇಕು ಎಂದು ಹಾಸನದ ಚನ್ನರಾಯಪಟ್ಟಣದ ಮಲಾ°ಡ್‌ ಅಕಾಡೆಮಿ ಪಿ.ಯು. ಕಾಲೇಜಿನ ನಿವೃತ್ತ ಪ್ರಾಚಾರ್ಯ ಬೈಕಾಡಿ ಜನಾರ್ದನ ಆಚಾರ್ಯ ಹೇಳಿದರು.

ಶಾರದಾ ವಿದ್ಯಾ ಸಂಸ್ಥೆಗಳ ಆಶ್ರಯದಲ್ಲಿ ಜರಗಿದ ಹಬ್ಬಗಳ ಸಂಗಮ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರ ಮಾತಿನಂತೆ ನಮ್ಮಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಪ್ರಕಾಶಕ್ಕೆ ತರುವ, ಗುಣ, ನಡತೆಗಳ ವಿಕಾಸಕ್ಕೆ ನೆರವಾಗುವ ಶಿಕ್ಷಣವೇ ನಿಜವಾದ ಶಿಕ್ಷಣ. ಇಂದಿನ ಮಕ್ಕಳಿಗೆ ಕಲೆ, ಕ್ರೀಡೆ, ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆಗಳು, ಸಮಾಜ ಸೇವೆ ಸೇರಿದಂತೆ ನಾನಾ ರಂಗಗಳಲ್ಲಿ ವಿಪುಲವಾದ ಅವಕಾಶಗಳಿದ್ದರೂ ಅದನ್ನು ಅವರು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದರು.

ಶಾರದಾ ಸಂಸ್ಥೆಗಳ ಅಧ್ಯಕ್ಷ ಪ್ರೊ| ಎಂ.ಬಿ.ಪುರಾಣಿಕ್‌ ಮಾತನಾಡಿ, ಹಬ್ಬಗಳ ಸಂಗಮ ಎಂಬ ವೈವಿಧ್ಯಪೂರ್ಣ ಕಾರ್ಯಕ್ರಮದಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ, ಗೋಪೂಜೆ, ದೀಪಾವಳಿ, ಭಾರತಮಾತಾ ಪೂಜನ ಕಾರ್ಯಕ್ರಮಗಳ ಹಿನ್ನೆಲೆ, ಉದ್ದೇಶ ಹಾಗೂ ಮಹತ್ವವನ್ನು ವಿವರಿಸಿದರು.

ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎಸ್‌.ಕಲ್ಲೂರಾಯ, ವಿಶ್ವಸ್ತರಾದ ಪ್ರದೀಪ ಕುಮಾರ ಕಲ್ಕೂರ, ಎಚ್‌. ಸೀತಾರಾಮ್‌ ಆಚಾರ್ಯ, ಶಾರದಾ ವಿದ್ಯಾಲಯದ ಪ್ರಾಂಶುಪಾಲೆ ಸುನೀತಾ ವಿ. ಮಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಹಾಬಲೇಶ್ವರ ಭಟ್‌, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ಕೆ. ಬಾಲಕೃಷ್ಣ ಭಾರದ್ವಾಜ್‌ ವೇದಿಕೆಯಲ್ಲಿದ್ದರು.

ಪ್ರದೀಪ ಕುಮಾರ ಕಲ್ಕೂರರು ಸ್ವಾಗತಿಸಿ, ಶಿಕ್ಷಕಿ ಮಂಗಳಾ ವಂದಿಸಿದರು. ಶಿಕ್ಷಕ ಬಾಲಕೃಷ್ಣ ಶೆಟ್ಟಿ ಹಾಗೂ ಶಿಕ್ಷಕಿಯರಾದ ನಂದಿತಾರಾಣಿ, ರಮ್ಯಾ ರೈ, ಶ್ರುತಿ ನಿರೂಪಿಸಿದರು. ಶಾರದಾ ವಿದ್ಯಾಲಯ ಮತ್ತು ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ, ದೇಶಭಕ್ತಿಗೀತೆ, ಪರಿಸರಗೀತೆ, ದೀಪಾವಳಿ, ಮಕ್ಕಳಹಬ್ಬಕ್ಕೆ ಸಂಬಂಧಪಟ್ಟ ಗೀತೆಗಳ ಜತೆಗೆ ವೈವಿಧ್ಯಮಯ ನೃತ್ಯ ಪ್ರದರ್ಶನ ನೀಡಿದರು.

ವೇದಿಕೆಯ ಬಲಭಾಗದಲ್ಲಿ ನಿರ್ಮಿಸಿದ ಗೋಶಾಲೆಯಲ್ಲಿ ಗೋವುಗಳಿಗೆ ತಿಲಕವಿಟ್ಟು ಗೋಗ್ರಾಸ ನೀಡಿ, ಆರತಿ ಬೆಳಗಿ, ಅತಿಥಿಗಳು ಹಾಗೂ ಗಣ್ಯರು ಗೋಪೂಜೆ ನೆರವೇರಿಸಿದರು. ಶಿಕ್ಷಕರಾದ ಶ್ರೀಪತಿ ಭಟ್‌ ಮತ್ತು ನಾಗರಾಜ್‌ ಪೂಜೆಯ ನೇತೃತ್ವ ವಹಿಸಿದರು. ವಿದ್ಯಾಸಂಸ್ಥೆಯ ಕಟ್ಟಡಗಳು, ಆಕರ್ಷಕ ವಿನ್ಯಾಸದ ಬಣ್ಣದ ಗೂಡುದೀಪ ಮತ್ತು ಹಣತೆ ದೀಪಗಳಿಂದ ಭವ್ಯವಾಗಿ ಕಂಗೊಳಿಸಿತು. ಮೈದಾನದಲ್ಲಿ ಕಮಲಕೊಳ ಮತ್ತು ಎತ್ತರದಿಂದ ಜಿಗಿಯುವ ಜಲಪಾತ ಎಲ್ಲರ ಗಮನ ಸೆಳೆಯಿತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.