ಬಂಟ್ವಾಳ: ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್.! ವೇಷ ಹಾಕಿ ಮನೆ ಮನೆಗೆ ತೆರಳಿ ಹಣ ಸಂಗ್ರಹ


Team Udayavani, Oct 2, 2022, 1:03 PM IST

ಬಂಟ್ವಾಳ: ಅಶಕ್ತರ ನೆರವಿಗಾಗಿ ಪ್ರೇತವಾದ ದೇವದಾಸ್.! ವೇಷ ಹಾಕಿ ಮನೆ ಮನೆಗೆ ತೆರಳಿ ಹಣ ಸಂಗ್ರಹ

ಬಂಟ್ವಾಳ: ಅನಾರೋಗ್ಯ ಪೀಡಿತ ಮಕ್ಕಳಿಗೆ ನೆರವಾಗಬೇಕು, ಬಡ ಯುವತಿಯ ಮದುವೆಗೆ ಕೈಲಾದ ಸಹಾಯ ನೀಡಬೇಕು ಎನ್ನುವ ಉದ್ದೇಶದಿಂದ ಯುವಕನೋರ್ವ ವೇಷ ಹಾಕಿ ಹಣ ಸಂಗ್ರಹಕ್ಕೆ ಮುಂದಾಗಿದ್ದು, ನವರಾತ್ರಿಯ ಈ ಸಂದರ್ಭದಲ್ಲಿ ಪ್ರೇತದ ವೇಷದ ಮೂಲಕ ಮನೆ ಮನೆಗೆ ಭೇಟಿ ನೀಡಲಿದ್ದಾರೆ.

ಸರಪಾಡಿ ಗ್ರಾಮದ ನೀರೊಲ್ಬೆ ನಿವಾಸಿ ದೇವದಾಸ್ ನಾಯ್ಕ್ ಅವರೇ ಈ ರೀತಿ ನೆರವಾಗಲು ಹೊರಟಿದ್ದು, ಇವರ ಹೃದಯ ವೈಶಾಲ್ಯತೆಗೆ ವ್ಯಾಪಕ ಪ್ರಶಂಸೆಯೂ ಲಭಿಸಿದೆ. ವೇಷ ಹಾಕಿ ಮನೆ ಮನೆ ಸುತ್ತಾಟದ ವೇಳೆ ಉತ್ತಮ ಪ್ರೋತ್ಸಾಹ ನೀಡುತ್ತಿದ್ದಾರೆ.

ದೇವದಾಸ್ ಅವರು ಈ ಹಿಂದೆಯೂ 2 ಬಾರಿ ವೇಷ ಹಾಕಿ ಸಂಗ್ರಹಗೊಂಡ ಹಣದಿಂದ ಅಶಕ್ತರಿಗೆ ನೆರವಾಗಿದ್ದು, ಆದರೆ ಕೊರೊನಾ ಕಾರಣಕ್ಕೆ ಎರಡು ವರ್ಷಗಳ ಕಾಲ ವೇಷ ಹಾಕುವುದಕ್ಕೆ ಸಾಧ್ಯವಾಗಿರಲಿಲ್ಲ. ಈ ಹಿಂದೆ ಒಂದೆರಡು ದಿನ ಕಾಲ ಮಾತ್ರ ವೇಷ ಹಾಕಿದ್ದ ಅವರು ಈ ಬಾರಿ ಹೆಚ್ಚಿನ ಹಣ ಸಂಗ್ರಹದ ಉದ್ದೇಶದಿಂದ ಬರೋಬ್ಬರಿ ಏಳು ದಿನಗಳ ಕಾಲ ವೇಷ ಹಾಕಿ ಸುತ್ತಾಟ ನಡೆಸಲಿದ್ದಾರೆ.

ಸೆ. 29ರಂದು ವೇಷ ಹಾಕಿ ಸುತ್ತಾಟ ಆರಂಭಿಸಿರುವ ಅವರು ಅ. 5ರ ವರೆಗೆ ವೇಷ ಧರಿಸುತ್ತಾರೆ. ಒಟ್ಟು ಸುಮಾರು 20 ಸಾವಿರ ರೂಪಾಯಿ ಸಂಗ್ರಹದ ಗುರಿ ಹೊಂದಿರುವ ಅವರು ಎರಡು ಅದನ್ನು ಸಮಾನವಾಗಿ ವಿಂಗಡಿಸಿ ಎರಡು ಕುಟುಂಬಕ್ಕೆ ನೆರವು ನೀಡುವ ಗುರಿ ಹೊಂದಿದ್ದಾರೆ. ತಮ್ಮ ಮನೆಯ ಪಕ್ಕದಲ್ಲಿರುವ ಬಡ ಕುಟುಂಬದ ಒಂದೇ ಮನೆಯ ಇಬ್ಬರು ಮಕ್ಕಳ ಕಿಡ್ನಿ ಸಂಬಂಧಿ ಖಾಯಿಲೆಯ ಚಿಕಿತ್ಸೆಗೆ ನೆರವಿನ ಜತೆಗೆ ಪಕ್ಕದ ಗ್ರಾಮದ ಬಡ ಕುಟುಂಬದ ಯುವತಿಯ ಮದುವೆಯ ಸಹಾಯ ನೀಡುವ ಯೋಜನೆ ಹಾಕಿ ಕೊಂಡಿದ್ದಾರೆ.

ಪ್ರೇತದ ವೇಷ ಹಾಕಿ ಸುತ್ತಾಟ ನಡೆಸುವ ಅವರು ತಮ್ಮ ಓಡಾಟಕ್ಕೆ ಪ್ರೇತಕ್ಕೆ ಒಪ್ಪುವ ರೀತಿಯಲ್ಲಿ ವಿಕಾರಗೊಳಿಸಿದ್ದಾರೆ. ಊರಿನಲ್ಲಿ ಸುತ್ತಾಟದ ಸಂದರ್ಭದಲ್ಲಿ ನಾಗರಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಸಾಮಾಜಿಕ ಜಾಲತಾಣದಲ್ಲೂ ವೈರಲ್ ಮಾಡಿ ಹೆಚ್ಚಿನ ಹಣ ಸಂಗ್ರಹಕ್ಕೆ ಸಹಕರಿಸಿದ್ದಾರೆ ಎಂದು ದೇವದಾಸ್ ನೀರೊಲ್ಬೆ ವಿವರಿಸುತ್ತಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.