ಅಪಘಾತದಿಂದ ಗಾಯಾಳದ ಯುವತಿಯನ್ನು ಆಸ್ಪತ್ರೆ ಸಾಗಿಸಲು ನೆರವಾದ ನಳಿನ್ ಕುಮಾರ್ ಕಟೀಲ್
Team Udayavani, Jan 14, 2021, 10:13 PM IST
ಮಂಗಳೂರು: ನಗರದ ಹೊರವಲಯದ ಗುರುಪುರ ಸೇತುವೆ ಬಳಿ ದ್ವಿಚಕ್ರ ಸ್ಕಿಡ್ ಆಗಿ ಗಾಯಗೊಂಡ ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾನವೀಯತೆ ಮೆರೆದಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಸಂಜೆ ವೇಳೆ ಗುರುಪುರ ಮೂಲಕ ಕಂದಾವರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭ ಅವರ ಕಾರು ಗುರುಪುರದ ನೂತನ ಸೇತುವೆ ಸಮೀಪಿಸುತ್ತಿದ್ದಂತೆ ದ್ವಿಚಕ್ರ ವಾಹನ ಸ್ಕಿಡ್ ಆಗಿ ಯುವತಿಯೊಬ್ಬಳು ಗಾಯಗೊಂಡು ಬಿದ್ದಿದ್ದಾರೆ. ತಕ್ಷಣ ನಳಿನ್ ಕುಮಾರ್ ಕಟೀಲ್ ಅವರು ಕಾರು ನಿಲ್ಲಿಸಿ ಯುವತಿ ಇರುವಲ್ಲಿಗೆ ಧಾವಿಸಿ ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಗಾಯಾಳು ಯುವತಿಯ ತಲೆ ಮತ್ತು ಹಣೆಗೆ ಏಟಾಗಿತ್ತು. ಕೂಡಲೇ ಆಟೋರಿಕ್ಷಾವೊಂದರಲ್ಲಿ ಆಕೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟರು. ನಳಿನ್ ಕುಮಾರ್ ಕಟೀಲ್ ಅವರು ಯುವತಿಗೆ ಸಕಾಲಕ್ಕೆ ಮಾಡಿದ ಮಾನವೀಯ ಕಾರ್ಯದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ