ಪತಿ ನಿಧನ, ಮನೆ ಕುಸಿತ: ಮಕ್ಕಳೊಂದಿಗೆ ಸಂಕಷ್ಟದಲ್ಲಿ ಮಹಿಳೆ


Team Udayavani, Sep 20, 2018, 11:27 AM IST

20-sepctember-5.jpg

ಉಪ್ಪಿನಂಗಡಿ : ಪತಿ ಅಕಾಲಿಕ ನಿಧನದ ನೋವಿನ ನಡುವೆಯೇ ಮಳೆಗಾಲದಲ್ಲಿ ಮನೆಯನ್ನೂ ಕಳೆದುಕೊಂಡ ಮಹಿಳೆಯೊಬ್ಬರು ಇಬ್ಬರು ಪುಟ್ಟ ಮಕ್ಕಳೊಂದಿಗೆ ಬೀದಿಗೆ ಬಿದ್ದ ಘಟನೆ 34ನೇ ನೆಕ್ಕಿಲಾಡಿಯ ಬೀತಲಪ್ಪು ಎಂಬಲ್ಲಿ ಬೆಳಕಿಗೆ ಬಂದಿದೆ. ಮನೆಯ ಮೇಲ್ಛಾವಣಿ ಕುಸಿದ ಕಾರಣ ಸುಶೀಲಾ ಎಂಬವರು ತನ್ನಿಬ್ಬರು ಮಕ್ಕಳಾದ ಎರಡೂವರೆ ವರ್ಷದ ಧನುಷ್‌ ಹಾಗೂ ಏಳು ತಿಂಗಳ ದಿವ್ಯಶ್ರೀಯೊಂದಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಟ್ಟಡದಲ್ಲಿ ಆಸರೆ ಪಡೆದಿದ್ದಾರೆ.

ಸುಶೀಲಾ ಅವರು ಪತಿ ರುಕ್ಮಯ ಅವರೊಂದಿಗೆ ಬೀತಲಪ್ಪುವಿನಲ್ಲಿ ರುಕ್ಮಯ ಅವರ ತಂದೆಯ ಜಾಗದಲ್ಲಿದ್ದ ಮನೆಯಲ್ಲಿ ವಾಸಿಸುತ್ತಿದ್ದರು. ರುಕ್ಮಯ ಕೂಲಿ ಕೆಲಸ ಮಾಡುತ್ತಿದ್ದರೆ, ಸುಶೀಲಾ ಬೀಡಿ ಕಟ್ಟುತ್ತಿದ್ದರು. ಕುಟುಂಬಕ್ಕೆ ಆಧಾರವಾಗಿದ್ದ ರುಕ್ಮಯ ಎ. 23ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಈ ಆಘಾತದಿಂದ ನೋವುಂಡರೂ ಸುಶೀಲಾ ಧೃತಿಗೆಡದೆ ತನ್ನಿಬ್ಬರು ಮಕ್ಕಳೊಂದಿಗೆ ಅದೇ ಮನೆಯಲ್ಲಿದ್ದು, ಬೀಡಿ ಕಟ್ಟುತ್ತ ಬದುಕನ್ನೂ ಕಟ್ಟಿಕೊಳ್ಳಲು ಆರಂಭಿಸಿದ್ದರು. ಆದರೆ, ವಿಧಿಯ ಅಟ್ಟಹಾಸ ಮುಂದುವರಿದಿದ್ದು, ಈ ಮಳೆಗಾಲದಲ್ಲಿ ಮನೆಯ ಛಾವಣಿ ಕುಸಿದು, ವಾಸಕ್ಕೆ ಯೋಗ್ಯವಿಲ್ಲದಂತಾಗಿದೆ. ಇಬ್ಬರು ಮಕ್ಕಳೊಂದಿಗೆ ಈ ಮಹಿಳೆಯ ಬದುಕು ಬೀದಿಗೆ ಬಂತು.

ತಾತ್ಕಾಲಿಕ ಆಸರೆ
ಮಹಿಳೆಯ ಸ್ಥಿತಿ ಗಮನಿಸಿದ 34ನೇ ನೆಕ್ಕಿಲಾಡಿ ಗ್ರಾ.ಪಂ. ಸದಸ್ಯೆ ಸತ್ಯವತಿ ಹಾಗೂ ಸ್ಥಳೀಯರು ಸುಶೀಲಾ ಹಾಗೂ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಟ್ಟಡದಲ್ಲಿ ಆಸರೆ ಕಲ್ಪಿಸಿದರು. ಕಟ್ಟಡ ಭದ್ರವಾಗಿದ್ದರೂ ವಿದ್ಯುತ್‌ ವ್ಯವಸ್ಥೆ ಇಲ್ಲ. ಇದು ತಾತ್ಕಾಲಿಕ ಆಶ್ರಯ. ಮನೆ ರಿಪೇರಿ ಮಾಡಿಸೋಣ ಎಂದರೂ ಸುಶೀಲಾ ಅವರಲ್ಲಿ ಹಣವಿಲ್ಲ. ವಸತಿ ಯೋಜನೆಯಲ್ಲಿ ಸೌಲಭ್ಯ ಪಡೆಯೋಣ ಎಂದರೆ ಜಮೀನಿನ ಖಾತೆ ರುಕ್ಮಯ ಅವರ ತಂದೆ ಹೆಸರಿನಲ್ಲಿದೆ. ಮಕ್ಕಳ ಹೆಸರಿಗೆ ಬದಲಾವಣೆ ಆಗಿಲ್ಲ. ಇರುವುದು ಸ್ವಲ್ಪ ಭೂಮಿ. ಕಂದಾಯ ಇಲಾಖೆಗೆ ಅಲೆದಾಡಿ ದಾಖಲೆ ಸರಿ ಮಾಡಿಸಿಕೊಳ್ಳಲು ಶಕ್ತಿಯಿಲ್ಲ. ರುಕ್ಮಯ ಅವರಿಗೆ ಸಹೋದರ, ಸಹೋದರಿಯರಿದ್ದು, ಜಾಗ ಅಥವಾ ಪಾಲು ಸುಲಭವಾಗಿ ಸುಶೀಲಾ ಅವರ ಕೈಗೆ ಬರುವುದೂ ಸಾಧ್ಯವಿಲ್ಲ. ಹೀಗಾಗಿ, ಅವರಿಗೆ ದಿಕ್ಕೇ ತೋಚದಂತಾಗಿದೆ.

ನೆರವಿನ ನಿರೀಕ್ಷೆ
ಮನೆ ಛಾವಣಿ ಭಾಗಶಃ ಕುಸಿದಿದ್ದರಿಂದ ಪ್ರಕೃತಿವಿಕೋಪ ಪರಿಹಾರ ನಿಧಿಯಿಂದ 3,000 ರೂ. ಪರಿಹಾರ ಸಿಕ್ಕಿದೆ. ಮತ್ತೂಮ್ಮೆ ಮನೆಗೆ ಹಾನಿಯಾಗಿದೆ. ಪತಿ ತೀರಿದ ಬಳಿಕ ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸಿದ್ದರೂ ಮಂಜೂರಾಗಿಲ್ಲ. ಪರಿಶಿಷ್ಠ ಪಂಗಡದ ಸುಶೀಲಾಗೆ ಸರಕಾರದ ಸೌಲಭ್ಯ ಸಿಗಬೇಕಿದೆ. ಮನೆ, ಬದುಕು ಕಟ್ಟಿಕೊಳ್ಳಲು ಅವರು ನೆರವಿನ ನಿರೀಕ್ಷೆಯಲ್ಲಿದ್ದಾರೆ. ದಾನಿಗಳು ಸುಶೀಲಾ ಅವರ ಬ್ಯಾಂಕ್‌ ಖಾತೆ ಸಂಖ್ಯೆ: 01402200203140, ಐಎಫ್ಎಸ್‌ಕೋಡ್‌: ಎಸ್‌ವೈಎನ್‌ಬಿ: 0000140 ಇದಕ್ಕೆ ನೆರವು ನೀಡಬಹುದು.

ವಿಶೇಷ ವರದಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.