ನಾನು ಸಿಎಂ ಬೊಮ್ಮಾಯಿಗೆ ನಾಯಿ ಮರಿ ಅಂದಿಲ್ಲ…; ಸಿದ್ದರಾಮಯ್ಯ ಸ್ಪಷ್ಟನೆ
ಯಡಿಯೂರಪ್ಪ ಏನು ಹುಲಿನಾ?...ನಾಯಿ ನಿಯತ್ತಿನ ಪ್ರಾಣಿ... ಅದು ಅಸಂಸದೀಯ ಪದ ಅಲ್ಲ
Team Udayavani, Jan 5, 2023, 3:05 PM IST
ಮಂಗಳೂರು: ”ನಾನು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಾಯಿ ಮರಿ ಎಂದು ಕರೆದಿಲ್ಲ. ನಾಯಿ ಮರಿ ತರ ಇರಬಾರದು ಅಂದಿದ್ದೆ, ಅದು ಅಸಂಸದೀಯ ಪದವಲ್ಲ” ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಸ್ಪಷ್ಟನೆ ನೀಡಿದ್ದಾರೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು ನಾಯಿ ಮರಿ ಅಂತ ನಾನು ಹೇಳಿಲ್ಲ.ಧೈರ್ಯ ಇರಬೇಕು.ರಾಜ್ಯದ ಹಿತ ಬಹಳ ಮುಖ್ಯ. ಕೇಂದ್ರ ಸರ್ಕಾರದಿಂದ ಅನುದಾನ ತರುವಲ್ಲಿ ಅವರು ಧೈರ್ಯ ತೋರಬೇಕು.ನಾಯಿ ಮರಿ ತರ ಇರಬಾರದು ಅಂತ ಹೇಳಿದ್ದೆ ಅಷ್ಟೇ. ಅದು ಅಸಂಸದೀಯ ಪದ ಅಲ್ಲ. ನನಗೆ ಟಗರು, ಹುಲಿಯ ಅಂತ ಕರೆಯುತ್ತಾರೆ. ಯಡಿಯೂರಪ್ಪ ಅವರಿಗೆ ರಾಜಾ ಹುಲಿ ಅಂತ ಅವರ ಪಕ್ಷದವರೇ ಕರೆಯುತ್ತಾರೆ. ಹಾಗಾದರೆ ಯಡಿಯೂರಪ್ಪ ಅವರು ಹುಲಿನಾ” ಎಂದು ಪ್ರಶ್ನಿಸಿದರು.
”15 ನೇ ಹಣಕಾಸು ಆಯೋಗ ದಲ್ಲಿ ರಾಜ್ಯಕ್ಕೆ 5,495 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಶಿಫಾರಸು ಮಾಡಲಾಗಿತ್ತು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ತರುವಲ್ಲಿ ಸಿಎಂ ಧೈರ್ಯ ತೋರಲಿಲ್ಲ, ಧೈರ್ಯ ತೋರಬೇಕು ಎಂದು ಹೇಳಿದ್ದೆ. ನಾಯಿ ಅಂದರೆ ನಂಬಿಕೆ ಇರುವಂತಹ ಪ್ರಾಣಿ” ಎಂದರು.
ನಾನೇನು ಅಲೆಮಾರಿ ರಾಜಕಾರಣಿಯೇ?
”ಉಳ್ಳಾಲದಿಂದ ಸ್ಪರ್ಧಿಸುತ್ತೀರಾ” ಎಂದು ಪ್ರಶ್ನಿಸಿದಾಗ,”ನಾನೇನು ಅಲೆಮಾರಿ ರಾಜಕಾರಣಿಯೇ? ಕ್ಷೇತ್ರದಲ್ಲಿ ಅಭಿಮಾನಿಗಳು ಕರೆಯುತ್ತಿದ್ದಾರೆ ನಿಜ. ವರುಣಾದಲ್ಲಿ ನನ್ನ ಮಗ ಮತ್ತು ಕಾರ್ಯಕರ್ತರು ಸ್ಪರ್ಧಿಸಲು ಹೇಳಿದ್ದಾರೆ. ಬಾದಾಮಿಯಲ್ಲೇ ಸ್ಪರ್ಧಿಸಲು ಜನ ಒತ್ತಾಯಿಸುತ್ತಿದ್ದಾರೆ” ಎಂದರು.
”ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಾಲಿಷ ಹೇಳಿಕೆ ನೀಡುವ ವಿದೂಷಕ. ಅವರ ಟೀಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ನನ್ನನ್ನು ಜೈಲಿಗೆ ಹಾಕುತ್ತಾರೆ ಅಂದಿದ್ದಾರೆ. ಅವರು ಜೈಲಿಗೆ ಹಾಕುವುದಲ್ಲ. ಕೋರ್ಟ್ ಗಳು ಜೈಲಿಗೆ ಕಳುಹಿಸುವುದು. ವಿಚಾರಣೆ ಮಾಡಿ ತಪ್ಪಿತಸ್ಥ ಅಂದಾದರೆ ಜೈಲಿಗೆ ಕಳುಹಿಸುತ್ತಾರೆ. ನಳಿನ್ ಕುಮಾರ್ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ.ಕಾನೂನು ಗೊತ್ತಿಲ್ಲ ಏನೂ ಗೊತ್ತಿಲ್ಲ” ಎಂದರು.
”ನಾನು ಈ ಹಿಂದೆ ಮೂರು ನಾಲ್ಕು ಸರಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದೆ” ಎಂದು ಈ ವೇಳೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ