ಸೀಟು ಹಂಚಿಕೆಯಲ್ಲಿ ನನ್ನ ಪಾತ್ರವಿಲ್ಲ : ನಳಿನ್
Team Udayavani, Apr 22, 2018, 10:51 AM IST
ಮಂಗಳೂರು: ಬಿಜೆಪಿ ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೇ ಮಾಡಿದ್ದು, ನನ್ನ ಪಾತ್ರ ಇಲ್ಲ. ನಾನು ಯಾರ ಪರವಾಗಿಯೂ ಶಿಫಾರಸು ಮಾಡಿಲ್ಲ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಕೃಷ್ಣ ಪಾಲೆಮಾರ್ ಅವರು ತನಗೆ ಟಿಕೆಟ್ ದೊರೆಯದಿರಲು ನಳಿನ್ ಅವರೇ ಕಾರಣ ಎಂದು ಆರೋಪಿಸಿ ರುವ ಬಗ್ಗೆ ಶನಿವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿರುವ ಅವರು, ಕೃಷ್ಣ ಪಾಲೆಮಾರ್ ಹಿರಿಯ ನಾಯಕರು. ಶಾಸಕರಾಗಿ, ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಟಿಕೆಟ್ ಸಿಗದಿರುವ ನೋವಿನಿಂದ ನನ್ನ ಹೆಸರು ಉಲ್ಲೇಖ ಮಾಡಿರಬಹುದು. ನಾನು ಯಾರ ಪರವಾಗಿ ಬ್ಯಾಟಿಂಗ್ ಮಾಡಿಲ್ಲ, ಯಾರಿಗೂ ಸೀಟು ಕೇಳಿಲ್ಲ ಎಂದರು.
ಸತ್ಯಜಿತ್ ಸುರತ್ಕಲ್ ಕೂಡ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸತ್ಯಜಿತ್ ಟಿಕೆಟ್ ಸಿಗದಿರುವ ಹಿನ್ನೆಲೆಯಲ್ಲಿ ತಮ್ಮ ನೋವು ವ್ಯಕ್ತಪಡಿಸಿದ್ದಾರೆ. ಪಕ್ಷಕ್ಕಾಗಿ ಕೆಲಸ ಮಾಡಿರುವ ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕಿದೆ ಎಂದರು.
ಪಾಲೆಮಾರ್ ಹಾಗೂ ಸತ್ಯಜಿತ್ ಸುರತ್ಕಲ್ ನೋವನ್ನು ಹಿರಿಯ ನಾಯಕರ ಗಮನಕ್ಕೆ ತರ ಲಾಗುವುದು. ಇಬ್ಬರೂ ಪಕ್ಷದಲ್ಲಿ ನನಗಿಂತ ಹೆಚ್ಚಿನ ಸ್ಥಾನ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ಅವಕಾಶ ನೀಡುವ ಕುರಿತು ಹಿರಿಯರ ಜತೆ ನಾನು ಕೂಡ ಮಾತುಕತೆ ನಡೆಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು