ಐಸಿಯು, ವೆಂಟಿಲೇಟರ್‌ ಚಿಕಿತ್ಸೆಗೆ ಮಾತ್ರ ಆಯುಷ್ಮಾನ್‌ ಅನ್ವಯ!


Team Udayavani, May 2, 2021, 4:00 AM IST

ICU, Ayushmann applicable only for ventilator treatment!

ಮಹಾನಗರ: ಕಳೆದ ಬಾರಿಯ ಕೊರೊನಾ ಸಂದರ್ಭ ಖಾಸಗಿ ಆಸ್ಪತ್ರೆಯ ಸಾಮಾನ್ಯ ಬೆಡ್‌ನ‌ಲ್ಲಿ ರೋಗ ಲಕ್ಷಣ ಇದ್ದರೂ/ಇಲ್ಲದಿದ್ದರೂ ಚಿಕಿತ್ಸೆ ಪಡೆಯುತ್ತಿದ್ದ ಎಪಿಎಲ್‌-ಬಿಪಿಎಲ್‌ ರೋಗಿಗಳಿಗೂ ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ ಚಿಕಿತ್ಸೆ ದೊರೆಯುತ್ತಿತ್ತು. ಆದರೆ ಈ ವರ್ಷ ಈ ನಿಯಮ ಬದಲಾಗಿದೆ. ಅಂದರೆ, ಐಸಿಯು ಅಥವಾ ವೆಂಟಿಲೇಟರ್‌ನಲ್ಲಿರುವ ಚಿಕಿತ್ಸೆ ಪಡೆಯುವ ಕೊರೊನಾ ಸೋಂಕಿತರಿಗೆ ಮಾತ್ರವೇ ಆಯುಷ್ಮಾನ್‌ ಭಾರತ್‌- ಯೋಜನೆಯಡಿ ಚಿಕಿತ್ಸೆ ದೊರೆಯಲಿದೆ!

ಹೀಗಾಗಿ, “ಕೊರೊನಾ ಚಿಕಿತ್ಸೆ ಎಲ್ಲರಿಗೂ ಉಚಿತ’ ಎಂಬ ನಿಯಮ ಈ ಬಾರಿ ಅನ್ವಯವಾಗುವುದಿಲ್ಲ. ಕೊರೊನಾ ಪಾಸಿಟಿವ್‌ ಬಂದು ರೋಗ ಲಕ್ಷಣ ಇರುವ/ಇಲ್ಲದಿರುವವರು ಖಾಸಗಿ ಆಸ್ಪತ್ರೆಯ ಸಾಮಾನ್ಯ ಬೆಡ್‌ನ‌ಲ್ಲಿ ದಾಖಲಾಗುವ ಬಿಪಿಎಲ್‌-ಎಪಿಎಲ್‌ ಕಾರ್ಡ್‌ದಾರರಿಗೆ ಉಚಿತ ಚಿಕಿತ್ಸೆ ನಿಯಮ ಈ ಬಾರಿ ಇರುವುದಿಲ್ಲ.

ಪ್ರಸಕ್ತ ಐಸಿಯು, ವೆಂಟಿಲೇಟರ್‌ನಲ್ಲಿರುವ ಕೋವಿಡ್‌ ರೋಗಿಗಳಿಗೆ 20 ಪ್ರಮುಖ ಆಸ್ಪತ್ರೆಗಳನ್ನು ಒಳಗೊಂಡು ಜಿಲ್ಲೆಯ ಒಟ್ಟು 80 ಖಾಸಗಿ ಆಸ್ಪತ್ರೆಗಳಲ್ಲಿ (ಒಳರೋಗಿಗಳಾಗಿ ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಆಸ್ಪತ್ರೆಗಳು) ಐಸಿಯು, ವೆಂಟಿಲೇಟರ್‌ ಅಗತ್ಯವಿರುವ ಕೋವಿಡ್‌ ರೋಗಿಗಳಿಗೆ ಮಾತ್ರ ಆಯುಷ್ಮಾನ್‌ ಅಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

60 ಆಸ್ಪತ್ರೆ ಸೇರ್ಪಡೆ
ಆಯುಷ್ಮಾನ್‌ ಭಾರತ್‌ ಯೋಜನೆಯಡಿ ನಗರದ 20 ಪ್ರಮುಖ ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್‌ನವರಿಗೆ ಕೋವಿಡೇತರ ವಿಶೇಷ ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ಅಲ್ಲಿ ಈ ಯೋಜನೆಯಡಿ ಕಳೆದ ವರ್ಷ ಕೊರೊನಾ ಚಿಕಿತ್ಸೆಯನ್ನು ಆರಂಭಿಸಲಾಗಿತ್ತು. ಇದೀಗ “ಆಟೋ ಎಂಪಾನೆಲ್ಡ್‌’ ವ್ಯವಸ್ಥೆಯಡಿ ಜಿಲ್ಲೆಯ ಇತರ 60 ಖಾಸಗಿ ಆಸ್ಪತ್ರೆಗಳನ್ನೂ ಕೋವಿಡ್‌ ಚಿಕಿತ್ಸೆಗೆ ಈ ಯೋಜನೆಯಡಿ ಒಳಪಡಿಸಲಾಗಿದೆ ಎಂದು ಆಯುಷ್ಮಾನ್‌ ಇಲಾಖೆ ಮೂಲಗಳು ತಿಳಿಸಿವೆ.

ಯಾರಾದರೂ ಕೊರೊನಾ ಸೋಂಕಿತರಾಗಿದ್ದು, ಅವರಿಗೆ ಐಸಿಯು ಅಥವಾ ವೆಂಟಿಲೇಟರ್‌ ಅಗತ್ಯವಿದ್ದಲ್ಲಿ ವ್ಯಕ್ತಿ ದಾಖಲಾಗಿರುವ ಆಸ್ಪತ್ರೆಯವರು ಜಿಲ್ಲಾ ಆಯುಷ್ಮಾನ್‌ ನೋಡಲ್‌ ಅಧಿ ಕಾರಿಗೆ ರೆಫರಲ್‌ ನೀಡುವಂತೆ ನಿವೇದನಾ ಪತ್ರವನ್ನು ಕಳುಹಿಸುತ್ತಾರೆ. ಅದನ್ನು ಪರಿಶೀಲಿಸಿ ರೆಫರಲ್‌ ಪತ್ರವನ್ನು ನೀಡಲಾಗುತ್ತದೆ. ಬಳಿಕ ಅವರಿಗೆ ಅಗತ್ಯವಿರುವಷ್ಟು ದಿನ ವೆಂಟಿಲೇಟರ್‌ ಅಥವಾ ಐಸಿಯುನಲ್ಲಿ ಈ ಯೋಜನೆಯಡಿ ಚಿಕಿತ್ಸೆ ಒದಗಿಸಲಾಗುತ್ತದೆ. ಈ ಯೋಜನೆಯಡಿ ರೋಗಿ ಚಿಕಿತ್ಸೆಗೆ ದಾಖಲಾಗಿ ನೋಡಲ್‌ ಅಧಿ ಕಾರಿಯಿಂದ ಆಸ್ಪತ್ರೆಗೆ ರೆಫರಲ್‌ ಪತ್ರ ಬರುವವರೆಗಿನ ಚಿಕಿತ್ಸಾ ವೆಚ್ಚವನ್ನು ರೋಗಿ ಅಥವಾ ಆತನ ಮನೆಯವರೇ ಭರಿಸಬೇಕಾಗುತ್ತದೆ. ಚಿಕಿತ್ಸೆಗೆ ಕರ್ನಾಟಕದವರೇ ಆಗಿದ್ದು, ಆಧಾರ್‌ ಕಾರ್ಡ್‌ ಇದ್ದರೆ ಸಾಕಾಗುತ್ತದೆ.

ಐಸಿಯು ವೆಂಟಿಲೇಟರ್‌ನಲ್ಲಿರುವವರಿಗೆ ಯೋಜನೆ

ದ.ಕ. ಜಿಲ್ಲೆಯ 80 ಆಸ್ಪತ್ರೆಗಳಲ್ಲಿ ಬಿಪಿಎಲ್‌-ಎಪಿಎಲ್‌ ಸಂಬಂಧಿತ ಕೊರೊನಾ ರೋಗಿಯು ಐಸಿಯು ಅಥವಾ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಾತ್ರ ಅವರಿಗೆ ಆಯುಷ್ಮಾನ್‌ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ. ಕೊರೊನಾ ಪಾಸಿಟಿವ್‌ ಆದರೂ ರೋಗ ಲಕ್ಷಣವಿಲ್ಲದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ಕಳೆದ ಬಾರಿ ಮಾತ್ರ ಎಲ್ಲರಿಗೂ ಉಚಿತ ಚಿಕಿತ್ಸೆ ಯೋಜನೆಯಿತ್ತು. ಖಾಸಗಿ ಆಸ್ಪತ್ರೆಗಳಲ್ಲಿರುವ ಆರೋಗ್ಯ ಮಿತ್ರರಿಂದ ಆಯುಷ್ಮಾನ್‌ ಭಾರತ್‌ ಯೋಜನೆಗೆ ಸಂಬಂ ಧಿಸಿ ಮಾಹಿತಿಯನ್ನು ಪಡೆಯಬಹುದು.

-ಡಾ| ರತ್ನಾಕರ್‌, ನೋಡಲ್‌ ಅಧಿಕಾರಿ, ಆಯುಷ್ಮಾನ್‌ ಭಾರತ-ಆರೋಗ್ಯ ಕರ್ನಾಟಕ ಯೋಜನೆ, ದ.ಕ.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.