ಅಜಿಲಕೆರೆಗೆ ಹೊಸರೂಪ ನೀಡಲು ಮುಂದಾದ ಐಸಿವೈಎಂ


Team Udayavani, May 27, 2019, 9:54 AM IST

vnr-2

ವೇಣೂರು: ಹೂಳು ತುಂಬಿ ನಿಷ್ಪ್ರಯೋಜಕವಾದಂತಿದ್ದ ಐತಿಹಾಸಿಕ ಹಿನ್ನೆಲೆಯ ವೇಣೂರು ಅಜಿಲಕೆರೆಯನ್ನು ಅಭಿವೃದ್ಧಿಪಡಿಸಿ ಹೊಸರೂಪ ನೀಡಲು ವೇಣೂರು ಗ್ರಾ.ಪಂ.ನ ಸಹಕಾರದೊಂದಿಗೆ ಭಾರತೀಯ ಕೆಥೋಲಿಕ್‌ ಯುವ ಸಂಚಲನ (ಐಸಿವೈಎಂ) ಮುಂದಾಗಿದೆ.

ಸರಕಾರದ ಅನುದಾನ ಹಣವನ್ನು ವ್ಯಯ ಮಾಡಿದ್ದರೂ ವೇಣೂರು ಅಜಿಲಕೆರೆ ಹಾಗೂ ಎರಡಾಲು ಕೆರೆಗಳು ಹೂಳು ತುಂಬಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದಿರುವ ಬಗ್ಗೆ ಉದಯವಾಣಿ ಸುದಿನ ಮೇ 18ರಂದು ವರದಿ ಮಾಡಿ ಗಮನ ಸೆಳೆದಿತ್ತು. ಈ ಬಗ್ಗೆ ಅಭಿವೃದ್ಧಿಗೆ ಚಿಂತನೆ ನಡೆಸಿದ ವೇಣೂರು ಐಸಿವೈಎಂ ಮಂಗಳೂರು ಧರ್ಮಪ್ರಾಂತದ ಗಮನಕ್ಕೆ ತಂದಿದೆ. ವೇಣೂರು ಗ್ರಾ.ಪಂ. ಅನ್ನು ಸಂಪರ್ಕಿಸಿದ ಮಂಗಳೂರು ಧರ್ಮಪ್ರಾಂತದ ಐಸಿವೈಎಂ ನಿರ್ದೇಶಕರು ಭೇಟಿ ನೀಡಿ ಕೆರೆಗಳ ಪರಿಶೀಲನೆ ನಡೆಸಿದರು.

ಮೇ 29ರಂದು ಕೆರೆ ಅಭಿವೃದ್ಧಿ
ಐಸಿವೈಎಂ ನಿರ್ದೇಶಕ ವಂ| ರೊನಾಲ್ಡ್‌ ಡಿ’ಸೋಜಾ ಅವರು ಧರ್ಮಪ್ರಾಂತದ ಘಟಕಗಳನ್ನು ಜತೆಗೂಡಿಸಿ ವೇಣೂರು ಗ್ರಾ.ಪಂ.ನ ಸಹಕಾರದಲ್ಲಿ ಮೇ 29ರಂದು ನಮ್ಮ ಕೆರೆ ಸ್ವತ್ಛ ಕೆರೆ ಆಂದೋಲನದಡಿ ಅಭಿವೃದ್ಧಿಗೆ ಮುಂದಾಗಿದೆ. ಸುಮಾರು 100ಕ್ಕೂ ಅಧಿಕ ಐಸಿವೈಎಂ ಸದಸ್ಯರು ಈ ಸ್ವತ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬೆಳಿಗ್ಗೆ 6 ಗಂಟೆಯಿಂದ ಸಂಜೆಯ ತನಕ ಅಭಿವೃದ್ಧಿ ಕಾರ್ಯ ಮಾಡಲಿದ್ದಾರೆ. ಮೇ 28ರಂದು ಸಂಜೆ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸುವ ಐಸಿವೈಎಂ ಸದಸ್ಯರು ರಾತ್ರಿ ವೇಣೂರಿನಲ್ಲಿ ವಾಸ್ತವ್ಯ ಹೂಡಿ ಮರುದಿನ ಬೆಳಗ್ಗಿನಿಂದಲೇ ಶ್ರಮದಾನದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 10.30ಕ್ಕೆ ಸಭಾ ಕಾರ್ಯಕ್ರಮ ಜರಗಲಿದ್ದು, ಬೆಳ್ತಂಗಡಿ ತಹಶೀಲ್ದಾರ್‌ಗಣಪತಿ ಶಾಸ್ತ್ರಿ, ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ, ಮಂಗಳೂರು ಧರ್ಮಪ್ರಾಂತದ ಐಸಿವೈಎಂ ನಿರ್ದೇಶಕ ವಂ| ರೊನಾಲ್ಡ್‌ ಡಿ’ಸೋಜಾ, ವೇಣೂರು ಚಚ್‌ನ ಧರ್ಮಗುರು ವಂ| ಪೀಟರ್‌ ಅರನ್ಹಾ, ವಂ| ಬೇಸಿಲ್‌ವಾಸ್‌, ವಂ| ಅಶ್ವಿ‌ನ್‌ ಕರ್ಡೊಜಾ, ಐಸಿವೈಎಂ ಮಂಗಳೂರು ಧರ್ಮಪ್ರಾಂತದ ಅಧ್ಯಕ್ಷ ಜೈಸನ್‌ ಪಿರೇರಾ, ವೇಣೂರು ಚರ್ಚ್‌ ಪಾಲನ ಪರಿಷತ್‌ ಉಪಾಧ್ಯಕ್ಷ ರೊನಾಲ್ಡ್‌ ಡಿ’ಸೋಜಾ ಸಹಿತ ಹಲವು ಅತಿಥಿ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಜಲ ಸಂರಕ್ಷಣೆಗೆ ಐಸಿವೈಎಂ ಒತ್ತು
ಮಂಗಳೂರು ಐಸಿವೈಎಂ ಈ ಬಾರಿ ಯುವಜನರ ವರ್ಷದ ಪ್ರಯುಕ್ತ ಪರಿಸರ ಸ್ನೇಹಿ ನಮ್ಮ ಧರ್ಮಾಧ್ಯಕ್ಷರ ಮಾರ್ಗದರ್ಶನದಲ್ಲಿ ಜಲ ಸಂರಕ್ಷಣೆಗೆ ಒತ್ತು ನೀಡಿದ್ದೇವೆ. ಆ ಪ್ರಯುಕ್ತ ವೇಣೂರಿನ ಪ್ರಸಿದ್ಧ ಕೆರೆಯನ್ನು ಅಭಿವೃದ್ಧಿಗೆ ಮುಂದಾಗಿದ್ದೇವೆ. ಮೇ 29ರಂದು ಐಸಿವೈಎಂ ಸದಸ್ಯರು ವೇಣೂರಿಗೆ ಆಗಮಿಸಿ ಜಲ ಉಳಿಸುವ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ.
  ವಂ| ರೊನಾಲ್ಡ್‌ ಡಿ’ಸೋಜಾ ಯುವ ನಿರ್ದೇಶಕರು, ಐಸಿವೈಎಂ, ಮಂಗಳೂರು

ಶ್ಲಾಘನೀಯ ಕಾರ್ಯ
ವೇಣೂರು ಅಜಿಲಕೆರೆ ಇತಿಹಾಸ ಪ್ರಸಿದ್ಧವಾದದ್ದು. ಇದರ ಅಭಿವೃದ್ಧಿಗೆ ಸರಕಾರದಿಂದ ಅನುದಾನ ದೊರೆತಿತ್ತು. ಕೆರೆ ಪಾಳು ಬೀಳಬಾರದೆಂಬ ಉದ್ಧೇಶದಿಂದ ಗ್ರಾ.ಪಂ.ನ ನರೇಗಾ ಯೋಜನೆಯಿಂದಲೂ ಅನುದಾನ ಬಳಸಿ ಅಭಿವೃದ್ಧಿಪಡಿಸಲಾಗಿದೆ. ಇದೀಗ ಐಸಿವೈಎಂ ಸ್ವಯಂಪ್ರೇರಿತವಾಗಿ ಈ ಕೆರೆಯ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯವಾಗಿದ್ದು, ಈ ಕಾರ್ಯದಲ್ಲಿ ಗ್ರಾ.ಪಂ. ಪೂರ್ಣ ಪ್ರಮಾಣದಲ್ಲಿ ಕೈ ಜೋಡಿಸಲಿದೆ.
ಅರುಣ್‌ ಕ್ರಾಸ್ತ, ಉಪಾಧ್ಯಕ್ಷರು, ವೇಣೂರು ಗ್ರಾಮ ಪಂಚಾಯತ್‌

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.