ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಿದರೆ ಬಿಜೆಪಿಗೆ ಠೇವಣಿ ನಷ್ಟ
Team Udayavani, Oct 25, 2017, 11:16 AM IST
ಸುರತ್ಕಲ್:ಮುಂದಿನ ಚುನಾವಣೆಯಲ್ಲೂ ನಮ್ಮ ಶಾಸಕ ಮೊಯಿದಿನ್ ಬಾವಾ ಅವರನ್ನು ಗೆಲ್ಲಿಸಲು ನಾವೆಲ್ಲ ಒಗ್ಗೂಡಿ ಕೆಲಸ ಮಾಡಬೇಕಾಗಿದೆ ಎಂದು ಕಾರ್ಪೊರೇಟರ್ ಹಾಗೂ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಹೇಳಿದರು.
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಹೊಸಬೆಟ್ಟು ಕುಳಾಯಿ ವಾರ್ಡ್ಗಳಲ್ಲಿ ಆಯೋಜಿಸಲಾದ ಕಾರ್ಯಕರ್ತರ ಸಭೆ ಹಾಗೂ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
2018ರ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಶಾಸಕ ಸ್ಥಾನದಿಂದ ಹಿಡಿದು ಪಾಲಿಕೆವರೆಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಕಾರ್ಯಕರ್ತರ ಶ್ರಮವೇ ನಿರ್ಣಾಯಕ. ಮನೆ ಮನೆಗೆ ಕಾಂಗ್ರೆಸ್ ಸಾಧನೆ ಪರಿಣಾಮಕಾರಿಯಾಗಿ ಮುಟ್ಟಿದಲ್ಲಿ ರಾಜ್ಯದಲ್ಲಿ ಬಿಜೆಪಿ ಠೇವಣಿ ಕಳೆದುಕೊಳ್ಳುವುದು ಖಚಿತ ಎಂದರು.
ಬೂತ್ ಬಲಗೊಳಿಸಲು ಕ್ರಮ: ಕೇಶವ ಸನಿಲ್
ಮಹಾನಗರ ಪಾಲಿಕೆ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟ 23 ಪಾಲಿಕೆ ಸ್ಥಾನಗಳಲ್ಲಿ 140 ಬೂತ್ಗಳಿದ್ದು, ಇವುಗಳ ಪದಾಧಿಕಾರಿಗಳಾಗಿ ಯುವಕರನ್ನು ನೇಮಿಸಿ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಲಾಗಿದೆ. ಎಲ್ಲ ಸಮು ದಾಯಕ್ಕೂ ಆದ್ಯತೆ ನೀಡಲಾಗಿದ್ದು, ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಯೋಜನೆ ರೂಪಿಸಿ ಮುಂದುವರಿಯುತ್ತಿದ್ದೇವೆ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೇಶವ ಸನಿಲ್ ಹೇಳಿದರು.
ಪಕ್ಷ ಬಲವರ್ಧನೆಗೆ ಬೂತ್ ಮಟ್ಟದಲ್ಲಿ ವಾಸ್ತವ್ಯ ಯೋಜನೆಯನ್ನು ಶಾಸಕ ಬಾವಾ ನೇತೃತ್ವದಲ್ಲಿ ರೂಪಿಸಲಾಗಿದೆ. ಪ್ರತಿ ಬೂತ್ ನಲ್ಲಿ ಸಭೆ ನಡೆಸಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಲಾಗುವುದು. ಈಗಾಗಲೇ ಬೂತ್ಗಳಿಗೆ ಹೋಗಿ ಕಾರ್ಯಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ, ಸ್ಥಳೀಯ ನಾಯಕತ್ವವನ್ನು ಗುರುತಿಸುವ ಕೆಲಸ ನಡೆಸಲಾಗುತ್ತಿದೆ ಎಂದರು.
ಕಾರ್ಪೊರೇಟರ್ ಬಶೀರ್ ಅಹ್ಮದ್, ಅಶೋಕ್ ಶೆಟ್ಟಿ, ಮಾಜಿ ಮೇಯರ್ ಗುಲ್ಜಾರ್ ಬಾನು, ಹುಸೈನ್ ಕಾಟಿಪಳ್ಳ, ರೋಹಿತಾಕ್ಷ ರೈ, ಮೋನಪ್ಪ ಕುಳಾಯಿ, ಕೆ. ಸದಾಶಿವ ಶೆಟ್ಟಿ, ಗಿರೀಶ್ ಆಳ್ವ, ರಾಜೇಶ್ ಕುಳಾಯಿ, ವೈ.ರಮಾನಂದ ರಾವ್, ಆನಂದ ಅಮೀನ್, ವೈ.ರಾಘವೇಂದ್ರ ರಾವ್, ಹರೀಶ್ ಬಂಗೇರ, ಲಕ್ಷ್ಮಣ ಸುವರ್ಣ, ಜಲೀಲ್, ಶ್ಯಾಮ್ ರಾಯ್ ಸುವರ್ಣ, ಗೋವರ್ಧನ ಶೆಟ್ಟಿಗಾರ್, ಜೈಸನ್, ಹೇಮಂತ್, ಮಲ್ಲಿಕಾರ್ಜುನ್, ಬಶೀರ್ ಬೈಕಂಪಾಡಿ, ಹರೀಶ್ ದೇವಾಡಿಗ, ಗಿರೀಶ್ ಭಂಡಾರಿ, ದೇವಕಿ ದೇವಾಡಿಗ, ಸುನೀತಾ ಡಿ’ಸೋಜಾ, ಭಾರತೀ ದಿನೇಶ್, ನವೀನ್ ಶೆಟ್ಟಿ , ಹಂಝ, ಹಮೀದ್ ಕಟ್ಲ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ