ಮಕ್ಕಳ ಆಧಾರ್‌ ಕಾರ್ಡ್‌ನಲ್ಲಿ ಬರೀ ಇಂಗ್ಲಿಷ್‌ ಇದ್ದರೆ ತಿರಸ್ಕೃತ


Team Udayavani, Jun 25, 2019, 5:08 AM IST

adhar-card

ಬೆಳ್ತಂಗಡಿ: ಆಧಾರ್‌ ಕಾರ್ಡ್‌ ನಲ್ಲಿ ಇಂಗ್ಲಿಷ್‌ ಜತೆಗೆ ಕನ್ನಡದಲ್ಲೂ ನಿಮ್ಮ ಹೆಸರಿಲ್ಲದಿದ್ದರೆ ಕೂಡಲೇ ತಿದ್ದುಪಡಿ ಮಾಡಿಸುವುದು ಸೂಕ್ತ. ಯಾಕೆಂದರೆ ಅಂಥ ಕಾರ್ಡ್‌ಗಳನ್ನು ಪಡಿತರ ಚೀಟಿಯ ಆನ್‌ಲೈನ್‌ ವ್ಯವಸ್ಥೆ ಮಾನ್ಯ ಮಾಡುವುದಿಲ್ಲ.

ಕಾರ್ಡ್‌ನಲ್ಲಿ ಹೆಸರು ಇಂಗ್ಲಿಷ್‌ ಜತೆಗೆ ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಯಲ್ಲಿ ಮುದ್ರಿತವಾಗಬೇಕು. ಅದರಂತೆ ರಾಜ್ಯದಲ್ಲಿ ಕನ್ನಡದಲ್ಲಿ ಹೆಸರು ಮುದ್ರಿತವಾಗುತ್ತದೆ. ಆದರೆ ತಾಂತ್ರಿಕ ದೋಷದಿಂದ ಏನಾದರೂ ಪ್ರಾದೇಶಿಕ ಭಾಷೆ ಬಿಟ್ಟುಹೋಯಿತೆಂದರೆ ತಿದ್ದುಪಡಿಯಾಗಲೇಬೇಕು.

ಪ್ರಾದೇಶಿಕ ಭಾಷೆ ಅಗತ್ಯ

ಪಡಿತರ ಚೀಟಿ(ರೇಷನ್‌ ಕಾರ್ಡ್‌)ಗೆ ಹೆಸರು ಸೇರಿಸುವಾಗ ಪ್ರಾದೇಶಿಕ ಭಾಷೆ ಗಳಲ್ಲಿ ಹೆಸರಿರಲೇಬೇಕು. ರಾಜ್ಯದಲ್ಲಿ ಪಡಿತರ ಚೀಟಿಗೆ ಆನ್‌ಲೈನ್‌ ಮೂಲಕ ಇಂಗ್ಲಿಷ್‌ನಲ್ಲಿ ಹೆಸರು ಟೈಪ್‌ ಮಾಡುವಾಗ ಕನ್ನಡವೂ ಬರುತ್ತದೆ. ಒಂದು ವೇಳೆ ಇಂಗ್ಲಿಷ್‌ ಮಾತ್ರ ಇದ್ದರೆ ಪಡಿತರ ಚೀಟಿಯ ಆನ್‌ಲೈನ್‌ ವ್ಯವಸ್ಥೆ ಸ್ವೀಕರಿಸುವುದಿಲ್ಲ. ಅಂತಹ ಆಧಾರ್‌ ಕಾರ್ಡ್‌ಗಳನ್ನು ತಿದ್ದುಪಡಿ ಮಾಡಿದರೆ ಪರಿಗಣಿಸಬಹುದು ಎನ್ನುತ್ತಾರೆ ಅಧಿಕಾರಿಗಳು.

ಪ್ರಮುಖವಾಗಿ ಪಡಿತರ ಚೀಟಿಯಲ್ಲಿ ಮಕ್ಕಳ ಹೆಸರು ಸೇರಿಸಲು ತೊಂದರೆಯಾಗು ತ್ತಿದೆ. ಇಂಗ್ಲಿಷ್‌ನಲ್ಲಷ್ಟೇ ಇದ್ದರೆ ಪಡಿತರ ಚೀಟಿಯ ಆನ್‌ಲೈನ್‌ ವ್ಯವಸ್ಥೆ ಅಂತಹ ಆಧಾರ್‌ ಕಾರ್ಡನ್ನು ಸ್ವೀಕರಿಸುವುದಿಲ್ಲ.

ಬೆಳ್ತಂಗಡಿಯ ಮಗುವಿನ ಪೋಷಕ ರೊಬ್ಬರು ಎರಡೆರಡು ಬಾರಿ ತಿದ್ದುಪಡಿ ಮಾಡಿದಾಗಲೂ ಬಾಲ ಆಧಾರ್‌ನಲ್ಲಿ ಮಗುವಿನ ಹೆಸರು ಇಂಗ್ಲಿಷ್‌ನಲ್ಲಿ ಮಾತ್ರ ಮುದ್ರಿತ ವಾಗಿದೆ. ದ.ಕ. ಜಿಲ್ಲೆಯಲ್ಲಿ ಈ ಹಿಂದೆ 5 ವರ್ಷಕ್ಕಿಂತ ಕೆಳಗಿನ 200ಕ್ಕೂ ಹೆಚ್ಚು ಮಕ್ಕಳಿಗೆ ಟ್ಯಾಬ್‌ ಮೂಲಕ ಕನ್ನಡವಿಲ್ಲದ ಆಧಾರ್‌ ಕಾರ್ಡ್‌ ನೀಡಲಾಗಿತ್ತು. ಆದರೆ 5 ವರ್ಷಗಳ ಬಳಿಕ ಬಯೋ ಮೆಟ್ರಿಕ್‌ ಮೂಲಕ ಕಾರ್ಡ್‌ ಬದಲಿಸುವಾಗ ಕನ್ನಡ ಸೇರ್ಪಡೆಯಾಗುತ್ತದೆ. ಆದರೂ ಸಂಬಂಧಿತರ ಗಮನಕ್ಕೆ ತರಲಾಗು ವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರು ಕಚೇರಿಯಲ್ಲಿ ವಿಚಾರಿಸಿದಾಗ ಸಾಫ್ಟ್‌ವೇರ್‌ ತೊಂದರೆ ಯಿಂದ ಈ ರೀತಿ ಆಗಿದೆ. ಸರ್ವರ್‌ನಲ್ಲಿ ಭಾಷೆಯ ಬದಲಾವಣೆ ಆಗುತ್ತಿಲ್ಲ ಎಂದು ಮಾಹಿತಿ ನೀಡಿದ್ದರು. ಆದರೆ ಪ್ರಸ್ತುತ ಅಂತಹ ತೊಂದರೆ ಇರುವ ಕುರಿತು ನಮ್ಮ ಗಮನಕ್ಕೆ ಬಂದಿಲ್ಲ ಎನ್ನುತ್ತಾರೆ ಆಧಾರ್‌ಗೆ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳು.

ಪಡಿತರ ಚೀಟಿಗೆ ಹೆಸರು ಸೇರ್ಪಡೆ ಸಂದರ್ಭ ಇಂಗ್ಲಿಷ್‌ನಲ್ಲಷ್ಟೇ ಇದ್ದರೂ ಪರಿಗಣಿಸುವಂತೆ ಆನ್‌ಲೈನ್‌ ವ್ಯವಸ್ಥೆಯ ಸಿಬಂದಿಗೆ ಸೂಚಿಸಿದರೆ ಸಮಸ್ಯೆ ಬಗೆ ಹರಿಯಲಿದೆ. ಈ ಕುರಿತು ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.

ಲಿಂಕ್‌ ಆಗುವುದಿಲ್ಲ

ಆಧಾರ್‌ ಕಾರ್ಡ್‌ನಲ್ಲಿ ಕೇವಲ ಇಂಗ್ಲಿಷ್‌ ಇದ್ದರೆ ರೇಷನ್‌ ಕಾರ್ಡ್‌ಗೆ ಲಿಂಕ್‌ ಆಗುವುದಿಲ್ಲ. ಕನ್ನಡ ಕಡ್ಡಾಯ. ಇಂಗ್ಲಿಷ್‌ ಮಾತ್ರ ಇದ್ದರೆ ಅಂತಹ ಆಧಾರ್‌ ಕಾರ್ಡ್‌ಗಳನ್ನು ತಿದ್ದುಪಡಿ ಮಾಡಬೇಕು. -ಸುನಂದಾ ವ್ಯವಸ್ಥಾಪಕಿ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ದ.ಕ. ಜಿಲ್ಲೆ

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.