“ಮೋದಿ ರೈತ ಪರವಾಗಿದ್ದರೆ ಸಾಲ ಮನ್ನಾ ಮಾಡಲಿ’


Team Udayavani, Jul 7, 2017, 3:45 AM IST

sala-manna.jpg

ಮೂಲ್ಕಿ:  ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರೈತರಿಗೆ ಪೊಳ್ಳು ಭರವಸೆಗಳನ್ನು ನೀಡುತ್ತಾ ಮೂರು ವರ್ಷಗಳಿಂದ ವಂಚಿಸುತ್ತಿದ್ದಾರೆ. ಅಭಿವೃದ್ಧಿಯ ನೆಪದಲ್ಲಿ ಪ್ರಪಂಚ ಸುತ್ತುತ್ತಿರುವ ಅವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಮೊದಲು ರಾಷ್ಟ್ರೀಕೃತ ಬ್ಯಾಂಕಿನಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಲಿ ಎಂದು  ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಹೇಳಿದರು.

ಅವರು ಮೂಲ್ಕಿ -ಮೂಡಬಿದಿರೆ ಕ್ಷೇತ್ರದ ಯುವ ಕಾಂಗ್ರೆಸ್‌ ವತಿಯಿಂದ ಗುರುವಾರ ಮೂಲ್ಕಿಯ ಕಾರ್ನಾಡು ಸ್ಟೇಟ್‌ ಬ್ಯಾಂಕಿನ ಎದುರಿ ನಲ್ಲಿ ರೈತರ ಸಾಲ ಮನ್ನಾ ಆಗ್ರಹಿಸಿ ನಡೆಸಿದ ಪ್ರತಿ ಭಟನೆಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಮಟ್ಟದಲ್ಲಿ 23 ಲಕ್ಷ ಕುಟುಂಬದ 50 ಸಾವಿರ ರೂ.ವರೆಗಿನ  ಮೊತ್ತದ ಸಾಲ ಹೊಂದಿರುವ ರೈತರನ್ನು ಸಂಕಷ್ಟದಿಂದ ರಕ್ಷಿಸಿದ್ದಾರೆ ಎಂದರು.

ಮೂಡಬಿದಿರೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಲೇರಿಯನ್‌ ಸಿಕ್ವೇರ ಮಾತನಾಡಿ, ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು ಇತ್ತೀಚೆಗೆ ನಮ್ಮ ಬದುಕಿನ ಜೀವನಾಡಿ, ಅನ್ನದಾತನಾಗಿರುವ ರೈತನ ಬಗ್ಗೆ ಬಹಳ ಹಗುರವಾಗಿ ಮಾತನಾಡಿದ್ದಾರೆ ಅಲ್ಲ ದೆ, ಸಾಲ ಮನ್ನಾ  ಅಸಾಧ್ಯ ಎಂದಿದ್ದಾರೆ. ಇಂಥ ವರಿಗೆ ರೈತರ ಬಗ್ಗೆ ಕಾಳಜಿ ಇರಲು ಸಾಧ್ಯವೇ ಇಲ್ಲ ಎಂದರು.
ಮೂಲ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಧನಂಜಯ ಕೋಟ್ಯಾನ್‌ ಮಟ್ಟು ಮಾತನಾಡಿ, ರಾಜ್ಯ ಸರಕಾರ ದಿಂದ ಪ್ರತಿಯೊಬ್ಬ ಪ್ರಜೆಯ ಸಮಸ್ಯೆ ಮತ್ತು ಬವಣೆಗೆ ತಕ್ಕ ಪರಿಹಾರ ಕೊಡುವ ಹಲವಾರು ಯೋಜನೆಗಳು ಯಶಸ್ವಿಯಾಗಿ ಮುನ್ನಡೆಯುತ್ತಿವೆ ಎಂದು ಹೇಳಿದರು.

ಮೋದಿ ಅವರು “ಅಚ್ಛೇ ದಿನ್‌ ಆಯೇಗಾ’ ಎಂದು ಹೇಳುತ್ತಾ ಹಲವಾರು ಕಠಿನವಾದ ಕಾನೂನಿನ ಮೂಲಕ ಬಡವರಿಗೆ ಕಷ್ಟ  ಕೊಡುವ ಕೆಲಸ ಮಾಡುತ್ತಿದ್ದಾರೆ. ಅವೆಷ್ಟೋ ಬಡವರು ಸಂಕ ಷ್ಟಕ್ಕೆ  ಸಿಲು ಕಿ ದ್ದರೂ ಆ ಬಗ್ಗೆ ಚಿಂತಿಸದೆ  ಶ್ರೀಮಂತ ವರ್ಗದವರ ಜತೆಗೆ ಕೈಜೋ ಡಿಸಿ ಸರಕಾರವನ್ನು ನಡೆಸುತ್ತಿದ್ದಾರೆ ಎಂದು ಮಹಾನಗರ ಪಾಲಿಕೆಯ ಆರ್ಥಿಕ ಮತ್ತು ಸಾಮಾಜಿಕ ನ್ಯಾಯ  ಸಮಿತಿ ಅಧ್ಯಕ್ಷೆ ಪ್ರತಿಭಾ ಕುಳಾಯಿ ಹೇಳಿದರು.

ಮೂಡಬಿದಿರೆ ಯುವ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಹಾಸ ಸನಿಲ್‌ ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಎಚ್‌. ವಸಂತ್‌ ಬೆರ್ನಾಡ್‌, ಮೂಡಬಿದಿರೆ ಪುರಸಭಾ ಸದಸ್ಯ ಸುರೇಶ್‌ ಕೋಟ್ಯಾನ್‌, ಸಂತೋಷ್‌ ಶೆಟ್ಟಿ, ನಗರ ಪಂಚಾಯತ್‌ ಸದಸ್ಯ ಯೋಗೀಶ ಕೋಟ್ಯಾನ್‌, ಬಶೀರ್‌ ಕುಳಾಯಿ, ಅಶೋಕ್‌ ಪೂಜಾರ್‌, ಸಂದೀಪ್‌ ಚಿತ್ರಾಪು, ಕಾಂಗ್ರೆಸ್‌  ಸೇವಾದಳದ ಅಧ್ಯಕ್ಷ  ಭೀಮಾಶಂಕರ್‌, ಕಾರ್ಯದರ್ಶಿ ಪಲ್ಲವಿ, ಮೂಲ್ಕಿ ಯುವ ಕಾಂಗ್ರೆಸ್‌ ಅಧ್ಯಕ್ಷ  ಹಕೀಂ ಮೂಲ್ಕಿ, ಉಪಾಧ್ಯಕ್ಷ ಸಫìರಾಜ್‌, ಮಾಜಿ ಅಧ್ಯಕ್ಷ ಲೋಕೇಶ್‌ ಕೋಟ್ಯಾನ್‌, ಮುಖಂಡರಾದ ಮಂಜುನಾಥ ಕಂಬಾರ, ಸಾಹುಲ್‌ ಹಮೀದ್‌, ಮಯ್ಯದ್ದಿ  ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.