ರಿಕ್ಷಾ ನಿಲ್ದಾಣ ಸುವ್ಯವಸ್ಥಿತವಾದರೆ ಪಾರ್ಕಿಂಗ್ ಸಮಸ್ಯೆಗೂ ಪರಿಹಾರ
Team Udayavani, Aug 3, 2017, 7:10 AM IST
ಬಂಟ್ವಾಳ : ಪುರಸಭಾ ವ್ಯಾಪ್ತಿಯ ಬಡ್ಡಕಟ್ಟೆ ರಿಕ್ಷಾ ನಿಲ್ದಾಣ ದುರಸ್ತಿಯಾಗಿ ಅಭಿವೃದ್ಧಿಗೊಂಡರೆ ಇಲ್ಲಿನ ವಾಹನ ಪಾರ್ಕಿಂಗ್ ಸಮಸ್ಯೆಗೂ ಒಂದಷ್ಟು ಪರಿಹಾರ ದೊರೆಯಲಿದೆ. ಆದರೆ ಹಲವು ವರ್ಷಗಳಿಂದ ಯಾವುದೇ ಅಭಿವೃದ್ಧಿ ಇಲ್ಲದೆ ರಿಕ್ಷಾ ನಿಲ್ದಾಣ ನಾದುರಸ್ತಿಯಲ್ಲಿದೆ.
ಇಲ್ಲಿ ಡಾಮರು ಕಾಮಗಾರಿ ನಡೆಯಬೇಕಿದೆ. ಕೆಲವೊಂದು ಮೂಲ ಸೌಕರ್ಯ ಇದೆಯಾದರೂ ಅವುಗಳು ಉಪಯೋಗಕ್ಕೆ ಸಿಗುತ್ತಿಲ್ಲ. ಶೌಚಾಲಯವಿದ್ದರೂ ಅದು ಸುಸ್ಥಿತಿಯಲ್ಲಿಲ್ಲ. ಸುತ್ತಲೂ ಹುಲ್ಲು ಬೆಳೆದು ಶೌಚಾಲಯಕ್ಕೆ ಹೋಗುವವ
ರಿಗೆ ಭಯ ಹುಟ್ಟಿಸುವಂತಿದೆ. ನೀರು ಮತ್ತು ನೈರ್ಮಲ್ಯದ ಕೊರತೆ ಎದ್ದು ಕಾಣುತ್ತಿದೆ. ಇರುವ ಸೌಕರ್ಯಗಳ ಬಳಕೆ ಸಾಧ್ಯವಾಗುತ್ತಿಲ್ಲ.
ಮಹತ್ವದ ಸ್ಥಳ
ಈ ರಿಕ್ಷಾ ನಿಲ್ದಾಣದ ಮುಂಭಾಗದಲ್ಲಿ ಪುರಸಭೆಯ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಿದೆ. ಹಾಗಾಗಿ ಇದು ಪ್ರಮುಖ ನಿಲ್ದಾಣ, ಪಾರ್ಕಿಂಗ್ ಸ್ಥಳವಾಗಿಯೂ ಮಾರ್ಪಟ್ಟಿದೆ. ಬಡ್ಡಕಟ್ಟೆ ಸಂಪರ್ಕ ರಸ್ತೆಯ ಉದ್ದಕ್ಕೆ ತರಕಾರಿಯಿಂದ ಅಂಗಡಿಯಿಂದ ಹಿಡಿದು ಬಟ್ಟೆ, ಕಿರಾಣಿ ಅಂಗಡಿ, ಹೊಟೇಲ್, ಹೋಲ್ಸೇಲ್ ವ್ಯಾಪಾರಗಳು, ಸ್ವರ್ಣಾಭರಣ ಮಳಿಗೆಗಳು ಇವೆ. ಆದರೆ ಈ ಸ್ಥಳವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ರಿಕ್ಷಾ ನಿಲ್ದಾಣದ ಸನಿಹದಲ್ಲಿ ತೋಡಿನ ಬದಿಯೂ ಕುಸಿತಕ್ಕೆ ಒಳಗಾಗಿದೆ.
ಕ್ರಮ ಕೈಗೊಂಡಿಲ್ಲ
ಬಡ್ಡಕಟ್ಟೆ ರಿಕ್ಷಾ ನಿಲ್ದಾಣ ಅಭಿವೃದ್ಧಿ ಪಡಿಸುವಂತೆ ಪುರಸಭೆ, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಲ್ಲಾ ಉಸ್ತುವಾರಿ ಸಚಿವರು, ಸಂಬಂಧಪಟ್ಟ ಎಲ್ಲರಿಗೂ ಮನವಿ ಮಾಡಲಾಗಿದೆ. ಆದರೆ ಯಾವುದೇ ಕ್ರಮ ಆಗಿಲ್ಲ.
– ವಿಶ್ವನಾಥ ಬಂಟ್ವಾಳ
ಸಂಘಟಕರು, ರಿಕ್ಷಾ ಚಾಲಕ ಮಾಲಕರ ಯೂನಿಯನ್, ಬಂಟ್ವಾಳ
10 ಲ.ರೂ. ಪ್ರಸ್ತಾವನೆ
ಪಿಯೂಸ್ ಎಲ್. ರೋಡ್ರಿಗಸ್ “ಬುಡಾ’ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಡ್ಡಕಟ್ಟೆ ಅಟೋ ನಿಲ್ದಾಣದ ಅಭಿವೃದ್ಧಿಗಾಗಿ 10 ಲಕ್ಷ ರೂ.ಯೋಜನೆ ರೂಪಿಸಿದ್ದರು. ಸದ್ರಿ ಅನುದಾನವನ್ನು ಪ್ರಸ್ತುತ ಅಲ್ಲಿ ಬಸ್ ಶೆಲ್ಟರ್ ನಿರ್ಮಾಣಕ್ಕೆ ಮಾತ್ರ ಉಪಯೋಗಿಸಲು ಸಾಧ್ಯ ಎಂದು ಹಾಲಿ ಬುಡಾ ಅಧ್ಯಕ್ಷರಾದ ಸದಾಶಿವ ಬಂಗೇರ ತಿಳಿಸಿದ್ದಾರೆ. ನಿಲ್ದಾಣಕ್ಕೆ ಡಾಮರು ಹಾಕುವುದು ಮತ್ತು ಅಭಿವೃದ್ಧಿಗಾಗಿ 10 ಲಕ್ಷ ರೂ. ಮೊತ್ತದ ಇನ್ನೊಂದು ಪ್ರಸ್ತಾವನೆ ಮಾಡಿ ರಾಜ್ಯ ಸರಕಾರದ ಅನುಮೋದನೆಗೆ ಸಲ್ಲಿಸಲಾಗಿದೆ.
– ಪಿ. ರಾಮಕೃಷ್ಣ ಆಳ್ವ
ಅಧ್ಯಕ್ಷರು, ಬಂಟ್ವಾಳ ಪುರಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ