ಎರಡು ವಾಹನಗಳು ಎದುರು ಬದುರಾದರೆ ಇಲ್ಲಿ ನಡೆದಾಡಲು ಸ್ವಲ್ಪವೂ ಜಾಗವಿಲ್ಲ


Team Udayavani, Aug 3, 2017, 7:55 AM IST

0208gns3b.jpg

ನಗರ : ಜ್ಞಾನಪೀಠ ಡಾ| ಕೆ. ಶಿವರಾಮ ಕಾರಂತರು ನಡೆದಾಡಿದ ನೆನಪಲ್ಲಿ ಅವರ ಹೆಸರನ್ನು ಪುತ್ತೂರಿನ ಸರಕಾರಿ ಶಾಲೆಗೆ ಇಡಲಾಯಿತು. ಈ ಶಾಲೆಯ ವಿದ್ಯಾರ್ಥಿಗಳು ಇಂದು ಅಪಾಯದಲ್ಲೇ ದಿನ ಕಳೆಯುತ್ತಿದ್ದಾರೆ.

ವಾಸ್ತವವಾಗಿ ಇದು ರಸ್ತೆಯ ಸಮಸ್ಯೆ. ಬಸ್‌ ನಿಲ್ದಾಣ ಸನಿಹದಲ್ಲೇ ಇರುವುದರಿಂದ ಬಸ್‌ ಸಹಿತ ವಾಹನ ಓಡಾಟ ಹೆಚ್ಚು. ಹಾಗೆಂದು ಅಪಾಯ ಸಂಭವಿಸಿದರೆ ನೆಲ್ಲಿಕಟ್ಟೆ ಡಾ| ಕೆ. ಶಿವರಾಮ ಕಾರಂತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇದರ ನೇರ ಪರಿಣಾಮ ತಟ್ಟುತ್ತದೆ. ಆದ್ದರಿಂದಲೇ ರಸ್ತೆಯನ್ನು ವಿಸ್ತರಿಸಲು ಸೂಕ್ತ ಕ್ರಮ ಕೈಗೊಳ್ಳಿ ಎಂಬ ಕೂಗು ಹಲವು ಸಮಯಗಳಿಂದ ಕೇಳಿ ಬರುತ್ತಲೇ ಇದೆ.

ಸೂಕ್ತ ಕ್ರಮ ಕೈಗೊಳ್ಳಿ
ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಒತ್ತಿಕೊಂಡಂತಿದೆ ಈ ಪ್ರೌಢಶಾಲೆ. 1997ರ ಮೊದಲು ಪ್ರಾಥಮಿಕ ಶಾಲೆಯೂ ಇದರಲ್ಲೇ ಕಾರ್ಯಾಚರಿಸುತ್ತಿತ್ತು. ಬಳಿಕ ಸ್ಥಳಾವಕಾಶದ ಕೊರತೆಯನ್ನು ಮನಗಂಡು, ಪ್ರತ್ಯೇಕ ಜಾಗ ಕೊಡಲಾಯಿತು. ಶಿವರಾಮ ಕಾರಂತ ಪ್ರೌಢಶಾಲೆ ಮಾತ್ರವಲ್ಲ ಕೊಂಬೆಟ್ಟು ಜೂನಿಯರ್‌ ಕಾಲೇಜು, ರಾಮಕೃಷ್ಣ ಪ್ರೌಢಶಾಲೆ ಸಹಿತ ಹಲವು ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳು ಇದೇ ರಸ್ತೆಯಿಂದ ನಡೆದು ಸಾಗುತ್ತಾರೆ. ಬೆಳಗ್ಗೆ ಹಾಗೂ ಸಂಜೆ ವಿದ್ಯಾರ್ಥಿಗಳೇ ತುಂಬಿರುತ್ತಾರೆ. ಇಂತಹ ಸಂದರ್ಭ ಘನ ವಾಹನ ಎದುರು- ಬದುರಾದರೆ ನಡೆದಾಡಲು ಜಾಗವಿಲ್ಲ. ಅಂತಹ ಸಂದರ್ಭ ಅಪಾಯಗಳು ಸಂಭವಿಸಿದರೆ ಯಾರು ಜವಾಬ್ದಾರರು. ಇದು ಸಾರ್ವಜನಿಕರ ಪ್ರಶ್ನೆ.

ಶಿವರಾಮ ಕಾರಂತ ಪ್ರೌಢಶಾಲೆಯ ಆಟದ ಮೈದಾನ ಈ ರಸ್ತೆ ಪಕ್ಕದಲ್ಲೇ ಇದೆ. ಒಂದೆಡೆ ಶಾಲಾ ಕಟ್ಟಡ ಇನ್ನೊಂದೆಡೆ ಆವರಣಗೋಡೆ ಇದೆ ಎನ್ನುವುದನ್ನು ಬಿಟ್ಟರೆ ಭದ್ರತೆಯ ಜಾಗವಲ್ಲ. 

ಮುಖ್ಯ ರಸ್ತೆಯಿಂದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಪ್ರವೇಶಿಸುವ ಈ ಹಾದಿಯ ಮೊದಲಿಗೆ ಅಂಚೆ ಕಚೇರಿಗೆ ಸಂಬಂಧಪಟ್ಟ ಜಾಗವಿದೆ. ಬಳಿಕ ಖಾಸಗಿ ಜಾಗ. ಇದರ ಜತೆಗೆ ಶಿವರಾಮ ಕಾರಂತ ಪ್ರೌಢಶಾಲೆಯ ಜಾಗ. ಜತೆಗೆ ಅರಣ್ಯ ಇಲಾಖೆಯ ಜಾಗವೂ ಇದೆ. ಶಾಸಕರು ಮುಂದಾಳತ್ವ ವಹಿಸಿದರೆ ಎದುರಾದ ಸಮಸ್ಯೆಯನ್ನು ಪರಿಹರಿಸಬಹುದು.
ಮಂಗಳೂರು, ಕಾಸರಗೋಡು ಕಡೆಯಿಂದ ಆಗಮಿಸುವ ಖಾಸಗಿ, ಸರಕಾರಿ ಬಸ್‌ಗಳು ಇದೇ ರಸ್ತೆಯಾಗಿ ನಿಲ್ದಾಣವನ್ನು ಪ್ರವೇಶಿಸುತ್ತವೆ. ಆದರೆ ಇವುಗಳು ಬಸ್‌ ನಿಲ್ದಾಣದಿಂದ ಪರ್ಯಾಯ ರಸ್ತೆಯ ಮೂಲಕ ಹೊರ ಹೋಗುತ್ತವೆ. 

ಹಾಗೆಂದು ಇತರ ಘನ ವಾಹನ, ಚತುಶ್ಚಕ್ರ, ದ್ವಿಚಕ್ರ ವಾಹನಗಳಿಗೆ ಈ ನಿರ್ಬಂಧವಿಲ್ಲ. ಇವುಗಳು ಇದೇ ರಸ್ತೆಯನ್ನು ದ್ವಿಮುಖ ರಸ್ತೆಯಾಗಿ ಬಳಸಿಕೊಳ್ಳುತ್ತವೆ. ಇದು ಮುಖ್ಯ ರಸ್ತೆಗೆ ಪ್ರಮುಖ ಸಂಪರ್ಕ ರಸ್ತೆ ಆಗಿರುವುದರಿಂದ ಎಲ್ಲ ಹೊತ್ತಿನಲ್ಲೂ ಜನನಿಬಿಡ. ಆದ್ದರಿಂದ ರಸ್ತೆ ವಿಸ್ತರಿಸುವುದು ಅನಿವಾರ್ಯ.ವಿದ್ಯಾರ್ಥಿ, ಸಾರ್ವಜನಿಕರ ಹಿತದೃಷ್ಟಿಯಿಂದ ಆದಷ್ಟು ಶೀಘ್ರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಪೂರಕ ವಾತಾವರಣ ಅಗತ್ಯ
ನೆಲ್ಲಿಕಟ್ಟೆ  ಪ್ರೌಢಶಾಲೆಯಿಂದ ಮುಂದೆ ಸಾಗುವ ಈ ಹಾದಿ ಇಕ್ಕಟ್ಟಾಗಿದ್ದು, ಅಗಲಗೊಳಿಸಬೇಕೆಂಬ ಇಚ್ಛೆ ನಗರಸಭೆಗೆ ಇದೆ. ಇದಕ್ಕೆ ಪ್ರೌಢಶಾಲೆ ಜಾಗ ನೀಡಬೇಕು. ಮಾತ್ರವಲ್ಲ ಪಿಡಬ್ಲ್ಯುಡಿ ಹಾಗೂ ಶಾಸಕರು ಮುಂದೆ ಬರಬೇಕು. ಇದಕ್ಕೆ ಪೂರಕ ವಾತಾವರಣ ಕಲ್ಪಿಸಿದರೆ ಖಂಡಿತಾ ರಸ್ತೆ ವಿಸ್ತರಿಸುವ ಪ್ರಕ್ರಿಯೆಗೆ ಮುಂದಾಗುತ್ತೇವೆ.
-ಜಯಂತಿ ಬಲಾ°ಡು, 
ಅಧ್ಯಕ್ಷೆ, ನಗರಸಭೆ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.