ರಸ್ತೆ ಬದಿಗೆ ಇಳಿದರೆ ಪ್ರಾಣಕ್ಕೆ ಆಪತ್ತು 


Team Udayavani, Mar 11, 2018, 12:17 PM IST

11-March-9.jpg

ಸುಳ್ಯ : ಬೆಳ್ಳಾರೆ-ಸವಣೂರು ಸಂಪರ್ಕ ರಸ್ತೆಯ ಕುಂಡಡ್ಕದಲ್ಲಿ ರಸ್ತೆ ಬದಿ ಕುಸಿದಿದ್ದು, ವಾಹನ ಸೈಡ್‌ಗೆ ಇಳಿದರೆ, ಪ್ರಾಣಕ್ಕೆ ಆಪತ್ತು ಕಟ್ಟಿಟ್ಟ ಬುತ್ತಿ. ಮಡಿಕೇರಿ, ಸುಳ್ಯ ಭಾಗದಿಂದ ಈ ರಸ್ತೆಯಿಂದ ಶಾಂತಿಮೊಗರು ಹೊಸ ಸೇತುವೆ ಮೂಲಕ ಧರ್ಮಸ್ಥಳಕ್ಕೆ ತೆರಳಬಹುದಾದ ಕಾರಣ, ವಾಹನ ಸಂಚಾರವು ಹೆಚ್ಚಾಗಿದೆ.

ಸವಣೂರು-ಬೆಳ್ಳಾರೆ ರಸ್ತೆಯ ಕನ್ನಡ ಕುಮೇರು ತನಕ ರಸ್ತೆ ಅಗಲ ಕಾಮಗಾರಿ ಆಗಿದ್ದು, ಉಳಿದ ಭಾಗ ವಿಸ್ತರಣೆ ಆಗಿಲ್ಲ. ಪರಣೆ-ಮುಕ್ಕೂರು-ಕುಂಡಡ್ಕ-ಪೆರುವಾಜೆ-ಬೆಳ್ಳಾರೆ ರಸ್ತೆ ಏಕ ಪಥ ರಸ್ತೆಯಾಗಿದ್ದು, ಎದುರಿನಿಂದ ವಾಹನ ಬಂದರೆ ಬದಿಗೆ ಇಳಿಸಬೇಕು. ಆಗ ಅಪಾಯ ಎದುರಾಗುತ್ತಿದ್ದು, ಹಲವು ವಾಹನಗಳು ಅಪಘಾತಕ್ಕೆ ಈಡಾಗಿವೆ. ಕೆಲವು ಕೂದಲಳೆಯ ಅಂತರದಿಂದ ಪಾರಾಗಿದೆ ಅನ್ನುತ್ತಾರೆ ವಾಹನ ಸವಾರ ಯೂಸುಫ್‌ ಮುಕ್ಕೂರು.

ಮನವಿಗೆ ಇಲ್ಲ ಸ್ಪಂದನೆ
ಕುಂಡಡ್ಕದ ರಸ್ತೆ ಕುಸಿತದ ಬಳಿ ವಾಹನ ಸೈಡ್‌ಗೆ ಇಳಿದರೆ ನೇರವಾಗಿ ಮಳೆನೀರು ಹರಿದು ಹೋಗುವ ದೊಡ್ಡ ಚರಂಡಿಗೆ ಬೀಳುವ ಅಪಾಯವಿದೆ. ಲೋಕೋಪಯೋಗಿ ಇಲಾಖಾ ವ್ಯಾಪ್ತಿಗೆ ಈ ರಸ್ತೆ ಸೇರಿದೆ. ಕುಸಿತದ ಜಾಗದಲ್ಲಿ ತಡೆಗೋಡೆ ನಿರ್ಮಿಸುವಂತೆ ಜನರು ಒತ್ತಾಯಿಸಿದ್ದಾರೆ. ಆದರೆ ಅದಕ್ಕೆ ಸ್ಪಂದನೆ ಸಿಕ್ಕಿಲ್ಲ ಎಂದು ಪಾದಚಾರಿ ವೆಂಕಟರಮಣ ಕುಂಡಡ್ಕ ತಿಳಿಸಿದ್ದಾರೆ.

ಅಪಾಯಕಾರಿ ಮರ
ರಸ್ತೆ ಕುಸಿತದ ಬಳಿಯೇ ಅಪಾಯಕಾರಿ ಮರವಿದೆ. ಇಲ್ಲಿ ಎಚ್‌ಟಿ ಲೈನ್‌, ಟಿ.ಸಿ. ಇದೆ. ಕೆಲ ತಿಂಗಳ ಹಿಂದಷ್ಟೇ ಎಚ್‌ಟಿ ಲೈನ್‌ ಮೇಲೆ ಮರದ ಗೆಲ್ಲು ಬಿದ್ದು, ವಿದ್ಯುತ್‌ ಕಂಬಧರೆಗುರುಳಿತ್ತು. ಮನೆಯ ಎಲೆಕ್ಟ್ರಾನಿಕ್‌ ಪರಿಕರಗಳು ಹಾನಿಗೀಡಾಗಿದ್ದವು. ಇಲ್ಲಿ ರಸ್ತೆಗೆ ತಡಗೋಡೆ, ಅಪಾಯಕಾರಿ ಮರ ತೆರವು ಆಗಬೇಕು ಎನ್ನುತ್ತಾರೆ ಉಮ್ಮರ್‌ ಕುಂಡಡ್ಕ.

ಅಪಾಯದ ಎಚ್ಚರಿಕೆ
ಶನಿವಾರವೂ ಕಾರೊಂದು ಇಲ್ಲಿ ಅದೃಷ್ಟವಶಾತ್‌ ಪಾರಾಗಿದ್ದು, ಅಪಾಯದ ಬಗ್ಗೆ ಕುಸಿತದ ಸ್ಥಳದಲ್ಲಿ ಮರದ ತುಂಡು, ಹಗ್ಗ ಕಟ್ಟಲಾಗಿದೆ. ಮೂರು ರಸ್ತೆ ಸೇರುವ ತಿರುವು ರಸ್ತೆ ಇದಾಗಿದೆ. ಆದರೂ ಇಲ್ಲಿ ಲೋಕೋಪಯೋಗಿ ಇಲಾಖೆ ಎಚ್ಚರಿಕೆಯ ಫಲಕ ಅಳವಡಿಸಿಲ್ಲ. ತಿರುವಿನ ಪರಿವೆಯೇ ಇಲ್ಲದ ಕಾರಣ ಕೆಲ ವರ್ಷಗಳ ಹಿಂದೆ ಬೈಕ್‌ ಸವಾರರಿಬ್ಬರು ಆಳೆತ್ತರದ ಚರಂಡಿ ಬಿದ್ದ ಘಟನೆ ಸಂಭವಿಸಿತ್ತು. ಅದಾಗ್ಯೂ ಅಧಿಕಾರಿಗಳು ಸ್ಪಂದಿಸುವ ಮನಸ್ಸು ಮಾಡಿಲ್ಲ.

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.