ಅಕ್ರಮ ಗೋ ಸಾಗಾಟ, ಹಲ್ಲೆ: 6 ಮಂದಿ ಬಂಧನ

ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಮೊಗ್ರುನಲ್ಲಿ ಪ್ರಕರಣ

Team Udayavani, Jun 29, 2019, 10:35 AM IST

go

ಉಪ್ಪಿನಂಗಡಿ: ಅಕ್ರಮ ಗೋ ಸಾಗಾಟಕ್ಕೆ ಸಂಬಂಧಿಸಿ ಇಬ್ಬರನ್ನು ಹಾಗೂ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ನಾಲ್ವರನ್ನು ಉಪ್ಪಿನಂಗಡಿ ಪೊಲೀಸರು ಗುರುವಾರ ರಾತ್ರಿ ಮೊಗ್ರುನಲ್ಲಿ ಬಂಧಿಸಿದ್ದಾರೆ. ಹಲ್ಲೆ ಆರೋಪದಲ್ಲಿ ಬಂಧಿಸಿದ ನಾಲ್ವರನ್ನು ತಡರಾತ್ರಿಯೇ ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಯಿತು.

ಪಿಕಪ್‌ ವಾಹನ ಚಾಲಕ ಬೆಳಾಲು ನಿವಾಸಿ ಹೊನ್ನಪ್ಪ ಗೌಡ (55) ಮತ್ತು ಮೊಗ್ರು ಗ್ರಾಮದ ಮಾಪಲ ಮನೆಯ ಉಸ್ಮಾನ್‌ (60) ಗೋ ಸಾಗಾಟಕ್ಕೆ ಸಂಬಂಧಿಸಿ ಬಂಧಿತರಾದವರು.

ಹಲ್ಲೆ ನಡೆಸಿದ ಆರೋಪದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯ ಕರ್ತರೆನ್ನಲಾದ ಬಂದಾರು ಗ್ರಾಮದ ಮೈರೋಲ್ತಡ್ಕದ ಸಂತೋಷ್‌ ಪೂಜಾರಿ (30), ಕಣಿಯೂರು ಗ್ರಾಮದ ಧನರಾಜ್‌ (21), ಕಣಿಯೂರು ಗ್ರಾಮದ ಪದುಜ ನಿವಾಸಿ ಲತೀಶ (20) ಹಾಗೂ ಮೋರ್ಜಾಲಿನ ಶರತ್‌ (19) ಅವರನ್ನು ಬಂಧಿಸಲಾಗಿದೆ. 2 ಎತ್ತು ಹಾಗೂ 1 ದನ ಸಹಿತ ಪಿಕಪ್‌ ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಘಟನೆ ವಿವರ
ಗುರುವಾರ ರಾತ್ರಿ ಹೊನ್ನಪ್ಪ ಗೌಡ ಪಿಕಪ್‌ನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದು, ಉಸ್ಮಾನ್‌ ದ್ವಿಚಕ್ರ ವಾಹನದಲ್ಲಿ ಅದರ ಜತೆಗೆ ಬರುತ್ತಿದ್ದರು. ಜಾನುವಾರುಗಳನ್ನು ಕದ್ದು ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸಲಾಗುತ್ತಿದೆ ಎಂದು ಆರೋಪಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಎರಡೂ ವಾಹನಗಳನ್ನು ಮೊಗ್ರು ಜಂಕ್ಷನ್‌ನಲ್ಲಿ ಅಡ್ಡಗಟ್ಟಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಉಪ್ಪಿನಂಗಡಿ ಪೊಲೀಸರು ಅಲ್ಲಿಗೆ ಧಾವಿಸಿ ಗೋ ಸಾಗಾಟಗಾರರನ್ನು ಹಾಗೂ ಹಲ್ಲೆ ಆರೋಪಿಗಳನ್ನು ವಶಕ್ಕೆ ಪಡೆದು ಕೊಂಡರು. ಪೊಲೀಸರನ್ನು ಕಂಡು ಜನರ ಗುಂಪು ಚದುರಿದ್ದು, ಸ್ಥಳದಲ್ಲಿದ್ದ ಬೈಕುಗಳನ್ನು ಪೊಲೀಸರು ಠಾಣೆಗೆ ತಂದರು.

ಹಿಂದೂಪರ ಸಂಘಟನೆ ಕಾರ್ಯಕರ್ತರ ಜಮಾವಣೆ
ಅಕ್ರಮ ಗೋ ಸಾಗಾಟಗಾರರನ್ನು ತಡೆದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಸುಮಾರು 200ರಷ್ಟು ಕಾರ್ಯಕರ್ತರು ತಡರಾತ್ರಿ ಉಪ್ಪಿನಂಗಡಿ ಠಾಣೆ ಮುಂದೆ ಜಮಾಯಿಸಿದರು.  ಬಳಿಕ ಸ್ಥಳಕ್ಕೆ ಶಾಸಕ ಹರೀಶ್‌ ಪೂಂಜ, ನ್ಯಾಯವಾದಿ ಸುಬ್ರಹ್ಮಣ್ಯ ಅಗರ್ತ ಸಹಿತ ಹಿಂದೂಪರ ಸಂಘಟನೆಗಳ ಪ್ರಮುಖರು ಆಗಮಿಸಿ ತಮ್ಮ ಕಾರ್ಯಕರ್ತರ ಮೇಲೆ ಪ್ರಕರಣ ಕೈ ಬಿಡುವಂತೆ ಪಟ್ಟು ಹಿಡಿದರು. ಆದರೆ ಒತ್ತಡಕ್ಕೆ ಮಣಿಯದ ಪೊಲೀಸರು ಗೋ ಸಾಗಾಟಗಾರರು ಹಾಗೂ ಹಲ್ಲೆ ಆರೋಪಿಗಳ ಮೇಲೂ ಪ್ರಕರಣ ದಾಖಲಿಸಿಕೊಂಡರು. ಕಾನೂನಾತ್ಮಕ ಪ್ರಕ್ರಿಯೆಗಳ ಬಳಿಕ ಆರೋಪಿಗಳನ್ನು ಬಿಡುವುದಾಗಿ ಮುಖಂಡರಿಗೆ ಭರವಸೆ ನೀಡಿದರು. ಬಳಿಕ ಹಿಂದೂಪರ ಕಾರ್ಯಕರ್ತರು ಠಾಣೆ ಬಳಿಯಿಂದ ತೆರಳಿ ಉಪ್ಪಿನಂಗಡಿ ದೇವಾಲಯದ ಬಳಿ ಸೇರಿದರು. ರಾತ್ರಿ 1 ಗಂಟೆಯಾದರೂ ಆರೋಪಿಗಳನ್ನು ಬಿಡದಿದ್ದಾಗ ಮತ್ತೆ ಠಾಣೆಯ ಮುಂದೆ ಜಮಾಯಿಸಿ, ಶಾಸಕ ಹರೀಶ್‌ ಪೂಂಜ ಅವರ ನೇತೃತ್ವದಲ್ಲಿ ಠಾಣೆ ಮೆಟ್ಟಿಲಿನಲ್ಲಿ ಧರಣಿ ಕೂತರು. ಕಾನೂನಾತ್ಮಕ ಪ್ರಕ್ರಿಯೆಗಳು ಮುಗಿದ ಬಳಿಕ ನಾಲ್ವರು ಹಲ್ಲೆ ಆರೋಪಿಗಳನ್ನು ಜಾಮೀನಿನ ಮೂಲಕ ಬಿಡುಗಡೆಗೊಳಿಸಲಾಯಿತು.

ಉದ್ವಿಗ್ನ ಸ್ಥಿತಿ
ಇತ್ತ ಪೇಟೆಯಲ್ಲಿ ಮುಸ್ಲಿಂ ಪರ ಸಂಘಟನೆಗಳ ಕಾರ್ಯಕರ್ತರೂ ಜಮಾಯಿಸತೊಡಗಿದರು. ಅಕ್ರಮ ಗೋ ಸಾಗಾಟಗಾರರ ಪರವಾಗಿಯೂ ನಿಯೋಗವೊಂದು ಠಾಣೆಗೆ ತೆರಳಿ ಮಾತುಕತೆ ನಡೆಸಿತು. ಪುತ್ತೂರು ಗ್ರಾಮಾಂತರ ಸಿಐ ನಾಗೇಶ್‌ ಕದ್ರಿ ಹಾಗೂ ಉಪ್ಪಿನಂಗಡಿ ಎಸ್‌ಐ ನಂದ ಕುಮಾರ್‌ ಅವರು ಸಮರ್ಥವಾಗಿ ಪರಿಸ್ಥಿತಿಯನ್ನು ನಿಭಾಯಿಸಿದರು.

ಟಾಪ್ ನ್ಯೂಸ್

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.