ಅಕ್ರಮ ಮರಳುಗಾರಿಕೆ ಶಂಕೆ: ಲಾರಿಗಳನ್ನು ತಡೆದ ನಾಗರಿಕರು
Team Udayavani, Jun 7, 2019, 9:26 AM IST
ಕಡಬ: ಕೋಡಿಂಬಾಳ ಗ್ರಾಮದ ಕೋರಿಯಾರ್ನಲ್ಲಿ ಅಕ್ರಮ ಮರಳುಗಾರಿಕೆಯ ವರದಿ ಮಾಡಲು ತೆರಳಿದ ಪತ್ರಕರ್ತನಿಗೆ ಹಲ್ಲೆ ನಡೆಸಿದ ಪ್ರಕರಣದ ಬೆನ್ನಲ್ಲೇ, ಅಕ್ರಮ ಮರಳುಗಾರಿಕೆಯ ಲಾರಿ ಎಂಬ ಶಂಕೆಯಲ್ಲಿ ಅಧಿಕೃತ ಅನುಮತಿ ಪಡೆದಿರುವ ಜಾಗದಿಂದ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ಗ್ರಾಮಸ್ಥರು ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ.
ಲೋಕೋಪಯೋಗಿ ಇಲಾಖೆಯ ಅಧಿಕೃತ ಅನುಮತಿ ಪಡೆದು ಕುಮಾರಧಾರಾ ನದಿಯಿಂದ ಬಳ್ಪ ಗ್ರಾಮದ ಕೇನ್ಯ ಸೈಟ್ನಿಂದ ಮರಳು ಸಾಗಾಟ ನಡೆಸುತ್ತಿದ್ದ 3 ಲಾರಿಗಳನ್ನು ಆಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ತಡೆದು ನಿಲ್ಲಿಸಿದ್ದರು. ಸ್ಥಳಕ್ಕೆ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಹಾಗೂ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಬಳಿಕ ಗಣಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸಂಜೆಯ ವೇಳೆಗೆ ಗಣಿ ಇಲಾಖೆಯ ಅಧಿಕಾರಿ ಸುಷ್ಮಾ ಅವರು ಸ್ಥಳಕ್ಕೆ ಬಂದರು.
ಈ ಸಂದರ್ಭದಲ್ಲಿ ಸ್ಥಳೀಯರು ನಮಗೆ ಸ್ಥಳೀಯವಾಗಿ ಉಪಯೋಗಿ ಸಲು ಪಿಕ್ಅಪ್ ಹಾಗೂ ಸಣ್ಣ ವಾಹನಗಳಲ್ಲಿ ಮರಳು ಸಾಗಾಟ ಮಾಡಲು ಅವಕಾಶ ನೀಡಬೇಕು ಎಂದು ಅಗ್ರಹಿಸಿದರು.
ಗಣಿ ಇಲಾಖಾಧಿಕಾರಿಗಳು ಗ್ರಾಮಸ್ಥರು ತಡೆದು ನಿಲ್ಲಿಸಿರುವ ಮರಳು ಲಾರಿಗಳನ್ನು ತಪಾಸಣೆ ನಡೆಸಿದಾಗ ಅವುಗಳು ಲೋಕೋಪಯೋಗಿ ಇಲಾಖೆಯಿಂದ ಅನುಮತಿ ಪಡೆದು ಮರಳು ತೆಗೆದು ಸಾಗಾಟ ಮಾಡುವ ಲಾರಿಗಳು ಎಂದು ತಿಳಿದು ಬಂತು. ಈ ಮರುಳುಗಾರಿಕೆ ಕೇವಲ ಸರಕಾರಿ ಕಾಮಗಾರಿಗಳಿಗೆ ಮಾತ್ರ ಬಳಕೆ ಮಾಡಲಾಗುತ್ತಿದೆ. ಬಳ್ಪ ಗ್ರಾಮದಲ್ಲಿ ರಸ್ತೆ ಕಾಮಗಾರಿಯೊಂದು ನಡೆಯು ತ್ತಿರುವುದರಿಂದ ಈ ಲಾರಿಗಳು ಕೋಡಿಂಬಾಳ ಮೂಲ ಕ ಸುಳ್ಯ ಹಾಗೂ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದವು ಎನ್ನುವ ವಿಚಾರ ತಿಳಿಯಿತು. ಆದರೆ ಲಾರಿ ಚಾಲಕರಲ್ಲಿ ಲೋಕೋಪಯೋಗಿ ಇಲಾಖೆ ನೀಡಿರುವ ಸಾಗಾಟ ಅನು ಮತಿ ಚೀಟಿ ಇರಲಿಲ್ಲ. ಈ ಕಾರಣಕ್ಕಾಗಿ 4 ಲಾರಿಗಳ ಪೈಕಿ ಒಂದು ಲಾರಿ ಖಾಲಿ ಇದ್ದುದರಿಂದ ಅದನ್ನು ಬಿಟ್ಟು ಉಳಿದ 3 ಲಾರಿಗಳನ್ನು ತಹಶೀಲ್ದಾರ್ ಅವರಿಗೆ ಒಪ್ಪಿಸಿ ಸಾಗಾಟ ಅನುಮತಿ ಚೀಟಿ ತೋರಿಸಿ ಲಾರಿಗಳನ್ನು ಬಿಡಿಸಿಕೊಂಡು ಹೋಗಿ ಎಂದು ಸುಷ್ಮಾ ಅವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ