ನದಿ ಪಾತ್ರಗಳಲ್ಲಿ ಅಕ್ರಮ ಮರಳುಗಾರಿಕೆ

 ಅಧಿಕಾರಿಗಳ ಮೌನ ; ಸರಕಾರಕ್ಕೆ ಭಾರೀ ತೆರಿಗೆ ವಂಚನೆ

Team Udayavani, Oct 12, 2021, 5:26 AM IST

ನದಿ ಪಾತ್ರಗಳಲ್ಲಿ ಅಕ್ರಮ ಮರಳುಗಾರಿಕೆ

ಬೆಳ್ತಂಗಡಿ: ಮರಳುಗಾರಿಕೆ ಮಾಯಾಜಾಲ ಬೆಳ್ತಂಗಡಿ ತಾಲೂಕಿನಾದ್ಯಂತ ವ್ಯಾಪಕವಾಗಿ ವಿಸ್ತರಿಸುತ್ತಿದೆ. ಈ ಜಾಲ ದೊಡ್ಡ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದರೂ ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮೌನ ವಹಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿ ಕಂಡುಬರುತ್ತಿದೆ.

ಖಚಿತ ಮಾಹಿತಿಯಂತೆ ತಾಲೂಕಿನ ನೇತ್ರಾವತಿ, ಮೃತ್ಯುಂಜಯ ನದಿಗಳ ಪಾತ್ರಗಳಲ್ಲಿ ಧರ್ಮಸ್ಥಳ ಗ್ರಾಮದ ಅಜಿಕುರಿ, ಕಲ್ಮಂಜ ಗ್ರಾಮದ ಪಜಿರಡ್ಕ, ಇಂದಬೆಟ್ಟು ಗ್ರಾಮದ ಬೆಳ್ಳೂರು ಬೈಲು, ಮಿತ್ತಬಾಗಿಲು ಗ್ರಾಮದ ಕಿಲ್ಲೂರು, ಮುಂಡಾಜೆ ಗ್ರಾಮದ ಗುಂಡಿ, ಹೊಸಕಾಪು ಹಾಗೂ ಕೊಯ್ಯೂರು ಗ್ರಾಮದ ಡೆಂಬುಗ ಪ್ರದೇಶಗಳ ನದಿ ಪಾತ್ರಗಳಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಹಾಗೂ ದಿನಂಪ್ರತಿ ಹತ್ತಾರು ಲೋಡ್‌ ಮರಳು ಸಾಗಾಟವಾಗುತ್ತಿದೆ ಎಂಬ ವರದಿಯನ್ನು ಜಿಲ್ಲಾಧಿಕಾರಿಗೆ ಸಂಬಂಧಪಟ್ಟ ಇಲಾಖೆ ನೀಡಿದೆ.

ಧರ್ಮಸ್ಥಳ ಸಮೀಪದ ಅಜಿಕುರಿ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ದೋಣಿಗಳನ್ನು ಬಳಸಿ ಭಾರೀ ಪ್ರಮಾಣದಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಈ ಬಗ್ಗೆ ಸ್ಥಳೀಯಾಡಳಿತ, ತಹಶೀಲ್ದಾರ್‌, ಪೊಲೀಸ್‌, ಗಣಿ ಇಲಾಖೆಗೆ ಮಾಹಿತಿ ಇದ್ದರೂ ಪ್ರಭಾವಿಗಳ ಕುಣಿಕೆಯಿಂದಾಗಿ ಮೌನಕ್ಕೆ ಶರಣಾಗಿದೆ.

ಮುಂಡಾಜೆ ಗ್ರಾಮದ ಗುಂಡಿ, ಹೊಸಕಾಪು ಪ್ರದೇಶಗಳ ಮೃತ್ಯುಂಜಯ ನದಿ ಪಾತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಇದ್ದರೂ ಯಾವುದೇ ಕ್ರಮ ವಹಿಸುತ್ತಿಲ್ಲ. ಪರಿಣಾಮ ಸ್ಥಳೀಯ ರಸ್ತೆಗಳು ಹಾಳಾಗುತ್ತಿರುವ ಕುರಿತು ಗ್ರಾಮಸ್ಥರು ಹಲವು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ.

ಇದನ್ನೂ ಓದಿ:ಗಾಂಧೀಜಿ, ಜೆಪಿ ತಂದುಕೊಟ್ಟ ಸ್ವಾತಂತ್ರ್ಯ ನಶಿಸಿ ಹೋಗುತ್ತಿದೆ : ಮಾಜಿ ಪ್ರಧಾನಿ ಎಚ್ ಡಿಡಿ

ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿ ಅಕ್ರಮ ಮರಳುಗಾರಿಕೆ ಮಾಡುತ್ತಿರುವ ಮರಳು ಮಾಫಿಯಾದ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಕೂಗು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಅಧಿಕಾರಿಗಳು ದಾಳಿ ನಡೆಸುವ ಮುನ್ನವೇ ಮಾಫಿಯಾ ರೂವಾರಿಗಳಿಗೆ ಮಾಹಿತಿ ಲಭಿಸುತ್ತಿರುವುದು ಅಚ್ಚರಿ. ಎರಡು ದಿನಗಳಿಂದ ದಾಳಿ ಸಾಧ್ಯತೆ ಹಿನ್ನೆಲೆ ಬೋಟ್‌ಗಳನ್ನು ನದಿಯಿಂದ ಮೇಲೆತ್ತಿರುವುದು ಇದಕ್ಕೆ ಸಾಕ್ಷಿ.

ಟೆಂಡರ್‌ದಾರರಿಗೆ ಕಂಟಕ
ತಾಲೂಕಿನ ಪಟ್ರಮೆಯಲ್ಲಿ ಮಾತ್ರ 5 ವರ್ಷಗಳ ಅವಧಿಗೆ ಮರಳು ತೆಗೆಯಲು ಪರವಾನಿಗೆ ನೀಡಿರುವುದಾಗಿ ಸಂಬಂಧಪಟ್ಟ ಇಲಾಖೆ ತಿಳಿಸಿದೆ. ಆದರೆ ಈ ಭಾಗಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯಿಂದಾಗಿ ಸ್ಪರ್ಧಾತ್ಮಕ ಬೆಲೆಯಲ್ಲಿ ಮರಳು ಪೂರೈಕೆ ಮಾಡುತ್ತಿರುವುದರಿಂದ ಸುಮಾರು 15 ಲಕ್ಷ ರೂ. ವ್ಯಯಿಸಿ ಪರವಾನಿಗೆ ಪಡೆದು ನಡೆಸುತ್ತಿರುವ ಟೆಂಡರ್‌ದಾರರಿಗೆ ಕಂಟಕ ಎದುರಾಗಿದೆ.

ಪ್ರತ್ಯೇಕ ತಂಡ
ಬೆಳ್ತಂಗಡಿ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ವಿಚಾರವಾಗಿ ಈಗಾಗಲೆ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪ್ರತ್ಯೇಕ ತಂಡ ರಚಿಸಿ ಅಗತ್ಯ ಕ್ರಮ ವಹಿಸಲಾಗುವುದು.
-ಡಾ| ರಾಜೇಂದ್ರ ಕೆ.ವಿ.,
ಜಿಲ್ಲಾಧಿಕಾರಿ, ದ.ಕ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.