ಇಲ್ಯಾಸ್ ಕೊಲೆ: ಮೂವರ ಬಂಧನ
Team Udayavani, Feb 23, 2018, 8:36 AM IST
ಮಂಗಳೂರು: ಉಳ್ಳಾಲ ಟಾರ್ಗೆಟ್ ಗ್ರೂಪ್ನ ಇಲ್ಯಾಸ್ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಉಳ್ಳಾಲ ಧರ್ಮನಗರ ನಿವಾಸಿ ದಾವೂದ್ (38) ಸಹಿತ ಮೂವರನ್ನು ಮಂಗಳೂರು ದಕ್ಷಿಣ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಜೇಶ್ವರ ಉದ್ಯಾವರ ನಿವಾಸಿ ಮಹಮ್ಮದ್ ನಾಸಿರ್ ಯಾನೆ ನಾಸಿರ್ ಯಾನೆ ನಾಚಿ ( 25) ಹಾಗೂ ಮಂಜೇ ಶ್ವರ ಮಚ್ಚಂಪಾಡಿ ಸಿ.ಎಂ.ನಗರ ನಿವಾಸಿ ರಿಯಾಜ್ ಯಾನೆ ರಿಯಾ (32) ಇನ್ನಿಬ್ಬರು ಆರೋಪಿಗಳು.
ದಾವೂದ್ ಈ ಕೃತ್ಯದಲ್ಲಿ ನೇರ ಭಾಗಿಯಾಗಿದ್ದ. ಮಹಮ್ಮದ್ ನಾಸಿರ್ ಹಾಗೂ ರಿಯಾಜ್ ಹಂತಕ ರಿಗೆ ಆಶ್ರಯ ಹಾಗೂ ಹಣಕಾಸು ಸಹಾಯ ನೀಡಿದ್ದರು. ದಾವೂದ್ನ ಮೇಲೆ ಇಲ್ಯಾಸ್ ಕೊಲೆ ಪ್ರಕರಣ ಸೇರಿ ಒಟ್ಟು ನಾಲ್ಕು ಕೊಲೆ, ಎರಡು ಕೊಲೆ ಯತ್ನ ಹಾಗೂ ಇತರ ಐದು ಪ್ರಕರಣಗಳು ದಾಖಲಾಗಿವೆ.
ಮಹ ಮ್ಮದ್ ನಾಸಿರ್ ಮೇಲೆ ಮಂಜೇಶ್ವರ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖ ಲಾಗಿದೆ.
ಇಲ್ಯಾಸ್ ಪ್ರಕರಣದಲ್ಲಿ ಈಗಾಗಲೇ ಮಹಮ್ಮದ್ ಸಮೀರ್ ಅಲಿಯಾಸ್ ಸಮೀರ್ ಮತ್ತು ನಮೀರ್ ಹಂಝ ಅವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!