ಮೀನುಗಾರರ ಉತ್ತೇಜನಕ್ಕಾಗಿ “ಉತ್ಪಾದಕ ಸಂಸ್ಥೆ’ ಅನುಷ್ಠಾನ

ದ.ಕ.-3 ಉಡುಪಿಯಲ್ಲಿ 4 ಸಂಸ್ಥೆ ಕಾರ್ಯಾರಂಭ

Team Udayavani, Oct 24, 2022, 7:15 AM IST

ಮೀನುಗಾರರ ಉತ್ತೇಜನಕ್ಕಾಗಿ “ಉತ್ಪಾದಕ ಸಂಸ್ಥೆ’ ಅನುಷ್ಠಾನ

ಮಂಗಳೂರು: ಮೀನುಗಾರರ ಸಮೂಹವನ್ನು ಉತ್ತೇಜಿಸುವ ಸಲುವಾಗಿ ಮೀನು ಕೃಷಿಕರ ಉತ್ಪಾದಕ ಸಂಸ್ಥೆ ರಚಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಹಾಗೂ ಉಡುಪಿಯಲ್ಲಿ 4 ಸಂಸ್ಥೆಗಳು ಕಾರ್ಯಾರಂಭಿಸಿದೆ.

ರಾಜ್ಯದಲ್ಲಿ ಅನುಷ್ಠಾನಕ್ಕೆ ಬಂದಿರುವ ರೈತ ಉತ್ಪಾದಕ ಸಂಸ್ಥೆಯ (ಪಿಎಫ್‌ಒ)ಸ್ವರೂಪದಲ್ಲಿ ಮೀನುಗಾರರಿಗೆ ಸೀಮಿತವಾಗಿ ಮೀನು ಕೃಷಿಕರ ಉತ್ಪಾದಕ ಸಂಸ್ಥೆ (ಎಫ್‌ಎಫ್‌ಪಿಒ) ರಚಿಸಲಾಗುತ್ತದೆ. ಈ ಮೂಲಕ ಮೀನು ಕೃಷಿಕರಿಗೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡಲು ಸಂಸ್ಥೆ ಸಹಕಾರ ನೀಡಲಿದೆ.

ಸದ್ಯ ಮೀನುಗಾರ ಸಹಕಾರಿ ಸಂಘಗಳು ಬ್ಯಾಂಕಿಂಗ್‌ ಸ್ವರೂಪದಲ್ಲಿ ಕಾರ್ಯನಿರ್ವಹಿಸಿದರೆ, ಮೀನು ಕೃಷಿಕರ ಉತ್ಪಾದಕ ಸಂಸ್ಥೆಗಳು ಅವರ ಉದ್ಯಮಕ್ಕೆ ಬೇಕಾಗುವ ಸಲಹೆ-ಸಹಕಾರ ಹಾಗೂ ಮಾರ್ಗದರ್ಶನಕ್ಕಾಗಿ ಮೀಸಲಾಗಿರುತ್ತದೆ.

ಉತ್ಪಾದಕ ಸಂಸ್ಥೆಗಳು ತಮ್ಮ ಸದಸ್ಯರಿಗೆ ಅಗತ್ಯವಿರುವ ಗುಣಮಟ್ಟದ ಪರಿಕರಗಳನ್ನು ಖರೀದಿಸುವುದು ಹಾಗೂ ಅವರು ಉತ್ಪಾದಿಸಿದ ಉತ್ಪನ್ನಗಳನ್ನು ತನ್ನ ಸದಸ್ಯರಿಂದ ಖರೀದಿಸಿ ಮಧ್ಯವರ್ತಿಗಳನ್ನು ತಪ್ಪಿಸಿ ನೇರವಾಗಿ ಮಾರಾಟ ಮಾಡುವ ಮೂಲಕ ಹೆಚ್ಚಿನ ದರ ಪಡೆಯಬಹುದು.

ಯಾಕಾಗಿ ಎಫ್‌ಎಫ್‌ಪಿಒ?
ಉತ್ಪಾದಕರಾಗಿರುವ ಮೀನುಗಾರರ ಉತ್ಪನ್ನಗಳಿಗೆ ಹಲವು ಬಾರಿ ಸೂಕ್ತ ಬೆಲೆ ಪಡೆಯಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ಉತ್ಪಾದಕರ ಸಂಸ್ಥೆಗಳ ರಚನೆಯು ಉತ್ಪಾದಕರ ಸಂಘಟನೆಗೆ ಕಾರಣವಾಗುತ್ತದೆ. ಇದರಿಂದ ಉತ್ಪಾದಕರು ತಮ್ಮ ಉತ್ಪನ್ನಗಳಿಗೆ ಮಾರುಕಟ್ಟೆಗಾಗಿ ಒಗ್ಗಟ್ಟಿನಿಂದ ಎದುರಿಸಬಹುದು. ಈ ಮೂಲಕ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸಾಧ್ಯ. ಹಾಗೂ ಉತ್ಪಾದಕ ಸಂಸ್ಥೆಗಳ ಮೂಲಕ ಗುಣಮಟ್ಟದ ಪರಿಕರ, ಯಂತ್ರಗಳು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬಹುದಾಗಿದೆ. ಈ ಮೂಲಕ ಉತ್ಪಾದನೆಗೆ ಸೂಕ್ತ ಬೆಲೆ ದೊರಕಿಸಿ ಸದಸ್ಯರ ಆದಾಯ ಹೆಚ್ಚಿಸಬಹುದು.

ಸರಕಾರದ ಅಭಿವೃದ್ಧಿ ಇಲಾಖೆ, ವಿ.ವಿ., ಸರಕಾರೇತರ ಸಂಸ್ಥೆಗಳು, ಸಾರ್ವಜನಿಕ-ಖಾಸಗಿ ಪಾಲುದಾರರೊಂದಿಗೆ ಸಂಬಂಧ ವೃದ್ಧಿಸುವ ಮೂಲಕ ಉತ್ಪಾದಕ ಸಂಸ್ಥೆಗಳ ಪ್ರಭಾವ ಹೆಚ್ಚಿಸಬಹುದು. ನವೀನ ಕಲಿಕೆಯನ್ನು ರಾಜ್ಯಕ್ಕೆ ಹಾಗೂ ಸಹಭಾಗಿ ಸಂಸ್ಥೆಗಳಿಗೆ ನೀಡಲು ಪ್ರಖ್ಯಾತ ಸಂಸ್ಥೆಗಳೊಂದಿಗೆ ಸಹಯೋಗ ಬೆಳೆಸಬಹುದಾಗಿದೆ.

750 ವಿವಿಧ ಉತ್ಪಾದಕ ಸಂಸ್ಥೆ
ರೈತರು, ಮೀನುಗಾರರು, ನೇಕಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ರಾಜ್ಯದಲ್ಲಿ 750 ಉತ್ಪಾದಕರ ಸಂಸ್ಥೆಗಳನ್ನು ಸ್ಥಾಪಿಸಲು ಸರಕಾರ ಈಗಾಗಲೇ ಅನುಮೋದನೆ ನೀಡಿದೆ. ಈ ಪೈಕಿ ಉತ್ಪಾದಕ ಸಂಸ್ಥೆಗಳ ಇಲಾಖಾವಾರು ಹಾಗೂ ವರ್ಷವಾರು ಗುರಿ ನಿಗದಿ ಮಾಡಲಾಗಿದೆ. ಈ ಪೈಕಿ ಮೀನುಗಾರಿಕೆ ಇಲಾಖೆಗೆ ಒಟ್ಟು 93 ಸಂಸ್ಥೆಯ ವಾರ್ಷಿಕ ಗುರಿ ನಿಗದಿ ಮಾಡಲಾಗಿದೆ. ಈಗಾಗಲೇ ವಿವಿಧ ಜಿಲ್ಲೆಗಳಿಂದ 15 ಎಫ್‌ಎಫ್‌ಪಿಒಗಳನ್ನು ನೋಂದಣಿ ಮಾಡಲಾಗಿದೆ.

ಸಂಸ್ಥೆಯಲ್ಲಿ 100 ಮಂದಿ
ಕನಿಷ್ಠ 100 ಮಂದಿಯ ಸೇರುವಿಕೆಯಿಂದ ಮೀನು ಕೃಷಿಕರ ಉತ್ಪಾದಕ ಸಂಸ್ಥೆ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ. ಮೀನು ಕೃಷಿಯ ಉತ್ಪಾದನೆ ಹಾಗೂ ಮಾರಾಟಕ್ಕೆ ಈ ಸಂಸ್ಥೆಯಿಂದ ಲಾಭವಾಗಲಿದೆ. ಮುಂಬರುವ ದಿನಗಳಲ್ಲಿ ವಿವಿಧ ಕಡೆಗಳಲ್ಲಿ ಇಂತಹ ಸಂಸ್ಥೆ ರಚಿಸಲು ಕ್ರಮ ಕೈಗೊಳ್ಳಲಾಗುವುದು.
-ದಿಲೀಪ್‌ ಕುಮಾರ್‌,
ಸಹಾಯಕ ನಿರ್ದೇಶಕರು,
ಮೀನುಗಾರಿಕಾ ಇಲಾಖೆ

-ದಿನೇಶ್‌ ಇರಾ

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.