ಮುಂಜಾಗ್ರತಾ ದೃಷ್ಟಿಯಿಂದ ಮಳೆಕೊಯ್ಲು ವ್ಯವಸ್ಥೆ ಅಳವಡಿಕೆ

ಮನೆ ಮನೆಗೆ ಮಳೆಕೊಯ್ಲು' ಉದಯವಾಣಿ ಅಭಿಯಾನದ ಯಶಸ್ಸು

Team Udayavani, Sep 16, 2019, 5:14 AM IST

1509MLR36

ಕೆನರಾ ಕಾಲೇಜು: ಕಾರ್ಯಾಗಾರ
ನಗರದ ಕೆನರಾ ಸಂಧ್ಯಾ ಕಾಲೇಜಿನ ಎನ್ವಿರೋನ್‌ಮೆಂಟ್‌ ಕ್ಲಬ್‌ ಆಶ್ರಯದಲ್ಲಿ ಮಳೆಕೊಯ್ಲು ಮಾಹಿತಿ ಕಾರ್ಯಕ್ರಮ ಶನಿವಾರ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಿಬಂದಿಗೆ ಮಳೆಕೊಯ್ಲು ಅಳವಡಿಕೆ ಮಾಡುವುದರಿಂದ ಆಗುವ ಪ್ರಯೋಜನ ಹಾಗೂ ಅದರ ಅಳವಡಿಕೆ ಕ್ರಮಗಳ ಬಗ್ಗೆ ನಿರ್ಮಿತಿ ಕೇಂದ್ರದ ಯೋಜನ ನಿರ್ದೇಶಕ ರಾಜೇಂದ್ರ ಕಲಾºವಿ ಅವರು ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲೆ ಡಾ| ಸಾವಿತ್ರಿ, ಕೆನರಾ ಸಂಧ್ಯಾ ಕಾಲೇಜಿನ ಸಂಚಾಲಕ ಸಿಎ ವಾಮನ್‌ ಕಾಮತ್‌, ಎನ್‌ಐಟಿಕೆ ನಿವೃತ್ತ ಪ್ರಾಂಶುಪಾಲ ಪ್ರೊ| ಸಿ.ಜಿ. ರೈ, ಕಾರ್ಯಕ್ರಮ ಸಂಯೋಜಕಿ ಪ್ರೊ| ಧನ್ಯಾಶ್ರೀ ಮೊದಲಾದವರು ಉಪಸ್ಥಿತರಿದ್ದರು.

ಬಾವಿಗೆ ಶುದ್ಧ ನೀರು
ಮೂಡುಬಿದಿರೆಯ ಬೈಲಾರೆ ನಿವಾಸಿ ಉಮೇಶ್‌ ಭಟ್‌ ಅವರು ಹತ್ತು ದಿನಗಳ ಹಿಂದೆ ತಮ್ಮ ಮನೆಯಲ್ಲಿ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದ್ದಾರೆ.

ತಮ್ಮ ಮನೆಯಲ್ಲಿ 2006ರಲ್ಲಿ ನಿರ್ಮಿಸಿದ ಬಾವಿಯಲ್ಲಿ ಮೊದಲ ಎರಡು ವರ್ಷಗಳ ಕಾಲ ಯಥೇತ್ಛವಾಗಿ ನೀರಿತ್ತು. ಆದರೆ ಬಳಿಕ ನೀರಿನ ಮಟ್ಟ ಕಡಿಮೆಯಾಗತೊಡಗಿತ್ತು. ಇದೇ ಕಾರಣಕ್ಕೆ ಸ್ಥಳೀಯಾಡಳಿತದ ನೀರು ಉಪಯೋಗಿಸುತ್ತಿದ್ದರು. ಆದರೆ ನೀರು ಶುದ್ಧವಾಗಿಲ್ಲದ್ದರಿಂದ ಇದೀಗ ಮಳೆಕೊಯ್ಲು ವ್ಯವಸ್ಥೆಯನ್ನು ಅಳವಡಿಸಿದ್ದಾರೆ.

ಮನೆಯ ಮೇಲ್ಛಾವಣಿಯಲ್ಲಿ ಪೈಪ್‌ ಅಳವಡಿಸಿ ಡ್ರಮ್‌ಗೆ ನೀರಿನ ಸಂಪರ್ಕವನ್ನು ಕಲ್ಪಿಸಿದ್ದಾರೆ. ಅಲ್ಲಿಂದ ಫಿಲ್ಟರ್‌ ಆಗಿ ಬಾವಿಗೆ ಶುದ್ಧ ನೀರು ಬೀಳುತ್ತದೆ. ಒಟ್ಟಾರೆ ಎರಡು ಹಂತದಲ್ಲಿ ನೀರು ಶುದ್ಧೀಕರಣವಾಗುತ್ತದೆ. ಕೊಳಚೆ ನೀರು ಹೋಗಲೆಂದು ಪೈಪ್‌ ಮುಖೇನ ಖಾಲಿ ಗುಂಡಿ ಮಾಡಿ ಸಂಪರ್ಕ ಕಲ್ಪಿಸಿದ್ದಾರೆ.

ಉಮೇಶ್‌ ಭಟ್‌ ಸುದಿನಕ್ಕೆ ಪ್ರತಿಕ್ರಿಯಿಸಿ ಸುದಿನದಲ್ಲಿ ಪ್ರಕಟವಾಗುತ್ತಿರುವ ಮನೆಮನೆಗೆ ಮಳೆಕೊಯ್ಲು ಅಭಿಯಾನವನ್ನು ಓದುತ್ತಿದ್ದೇನೆ. ಸಾರ್ವಜನಿಕರಿಗೆ ಉತ್ತಮ ಮಾಹಿತಿ ದೊರೆಯುತ್ತಿದೆ. ಪ್ರತಿಯೊಬ್ಬರು ಮನೆಯಲ್ಲಿ ಮಳೆಕೊಯ್ಲು ಅಳವಡಿಸಿದರೆ ಬೇಸಗೆಯಲ್ಲಿ ನೀರಿನ ಬಗ್ಗೆ ಕಳವಳ ಪಡಬೇಕಾಗಿಲ್ಲ ಎಂದರು.

ನೀವೂ ಅಳವಡಿಸಿ,
ವಾಟ್ಸಪ್‌ ಮಾಡಿ
ಉದಯವಾಣಿಯ ಅಭಿಯಾನದಿಂದ ಪ್ರೇರಣೆಗೊಂಡು ಕಾರ್ಯಾಗಾರದಲ್ಲಿ ಭಾಗವಹಿಸಿದವರು ಈಗ ಕಾರ್ಯೋನ್ಮುಖರಾಗಿ ಮಳೆ ನೀರು ಕೊಯ್ಲು ಪದ್ಧತಿಯನ್ನು ತಮ್ಮ ಮನೆ, ಸಂಘ- ಸಂಸ್ಥೆ, ಧಾರ್ಮಿಕ ಕೇಂದ್ರಗಳಲ್ಲಿ ಅಳವಡಿಸುತ್ತಿದ್ದಾರೆ. “ಮನೆ ಮನೆಗೆ ಮಳೆಕೊಯ್ಲು’ ಅಭಿಯಾನದಿಂದ ಪ್ರೇರಿತರಾಗಿ ನೀವೂ ನಿಮ್ಮ ಮನೆ, ಮಳೆ ಕೊಯ್ಲು ಪದ್ಧತಿ ಅಳವಡಿಸಿಕೊಂಡಿದ್ದರೆ ಫೋಟೋ ಸಮೇತ ನಮಗೆ ವಿವರವನ್ನು ವಾಟ್ಸಪ್‌ ಮಾಡಿ. ಅವುಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿ ಮತ್ತಷ್ಟು ಜನರನ್ನು ಉತ್ತೇಜಿಸೋಣ. 9900567000

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.