ಅನುಷ್ಠಾನಕ್ಕೆ ಗ್ರಾ.ಪಂ. ವಿರೋಧ; ನೀರು ಕೊಡುತ್ತೇವೆ ಎಂದರೂ ಕೇಳದ ಸ್ಥಳೀಯರು !

ಸಜಿಪಮುನ್ನೂರು: ನೀರಿನ ಯೋಜನೆ

Team Udayavani, Dec 20, 2019, 5:51 AM IST

1912KS3-PH

ಬಂಟ್ವಾಳ: ಉಳ್ಳಾಲ, ಕೋಟೆಕಾರು ನಗರ ಸ್ಥಳೀಯಾಡಳಿತ ಸಹಿತ 25 ಗ್ರಾಮಗಳಿಗೆ ನೀರು ಪೂರೈಕೆ ಮಾಡುವ ಯೋಜನೆಯೊಂದಕ್ಕೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆಯುಡಬ್ಲ್ಯೂ ಎಸ್‌ಡಿಬಿ)ಮಂಗಳೂರು ಉಪವಿಭಾಗವು ಬಂಟ್ವಾಳ ತಾಣ ಸಜಿಪಮುನ್ನೂರು ಗ್ರಾಮದ ಆಲಾಡಿಯಲ್ಲಿ ಜಾಕ್‌ವೆಲ್‌ ನಿರ್ಮಾಣಕ್ಕೆ ಉದ್ದೇಶಿಸಿದೆ. ಆದರೆ ಆದಕ್ಕೆ ಸಜೀಪ ಮುನ್ನೂರು ಗ್ರಾ.ಪಂ.ಸೇರಿದಂತೆ ಸ್ಥಳೀಯರ ವಿರೋಧ ವ್ಯಕ್ತವಾಗಿದೆ.

ಅಧಿಕಾರಿಗಳು ಗ್ರಾಮಕ್ಕೆ ನೀರು ಕೊಡುತ್ತೇವೆ ಎಂದರೂ ಗ್ರಾಮಸ್ಥರು ಒಪ್ಪಿಕೊಳ್ಳುತ್ತಿಲ್ಲ. ನೇತ್ರಾವತಿ ನದಿ ಕಿನಾರೆಯಲ್ಲೇ ವಿಸ್ತರಿಸಿಕೊಂಡಿರುವ ಸಜೀಪಮುನ್ನೂರು ಗ್ರಾಮವು ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ನಮ್ಮ ಗ್ರಾಮದಿಂದಲೇ ಇತರ ಗ್ರಾಮಗಳಿಗೆ ನೀರನ್ನು ಪೂರೈಕೆ ಮಾಡಲಾಗುತ್ತಿದ್ದರೂ ನಮಗೆ ನೀರು ನೀಡುತ್ತಿಲ್ಲ ಎಂಬುದು ಸ್ಥಳೀಯರ ವಾದ.

ಈ ಹಿಂದೆ ಕರೋಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡುವ ಸಂದರ್ಭದಲ್ಲೂ ಸಜೀಪ ಮುನ್ನೂರಿಗೆ ನೀರು ಕೊಡುತ್ತೇವೆ ಎಂದು ಹೇಳಿ ಬಳಿಕ ನೀರು ಕೊಟ್ಟಿಲ್ಲ. ಹೀಗಾಗಿ ಈ ಬಾರಿಯೂ ಅದೇ ರೀತಿ ಆಗುತ್ತದೆ ಎಂಬುದು ಸಜೀಪಮುನ್ನೂರು ಜನರ ಆರೋಪ.

ಬೇಡಿಕೆಗಳೇನಿದೆ ?
ಪ್ರಸ್ತುತ ನೂತನ ಕುಡಿಯುವ ನೀರಿನ ಯೋಜನೆಯಲ್ಲಿ ಸಜೀಪಮುನ್ನೂರು ಸೇರಿದಂತೆ ಬಂಟ್ವಾಳ ಕ್ಷೇತ್ರದ 5 ಗ್ರಾಮಗಳು ಸೇರಿದೆ ಎಂದು ಹೇಳಿದರೂ ಸ್ಥಳೀಯರು ಅದನ್ನುಒಪ್ಪಿಕೊಳ್ಳುತ್ತಿಲ್ಲ. ಹೀಗಾಗಿ ಅವರು ಕೆಲವು ಬೇಡಿಕೆಗಳನ್ನು ನಿಗಮದ ಮುಂದಿಟ್ಟಿದ್ದಾರೆ.

ಅಂದರೆ ಸಜೀಪಮುನ್ನೂರಿನ ಆಲಾ ಡಿಯ ಜಾಕ್‌ವೆಲ್‌ನಿಂದ ಮುಡಿಪಿನ ಶುದ್ಧೀಕರಣ ಘಟಕಕ್ಕೆ ನೀರು ಪೂರೈಕೆಗೆ ಹಾಕುವ ಪೈಪ್‌ಲೈನ್‌ನ ಜತೆಗೇ ಅಲ್ಲಿಂದ ಸಜೀಪಮುನ್ನೂರಿಗೆ ನೀರು ಬರುವ ಪೈಪ್‌ಲೈನನ್ನೂ ಕೂಡ ಅಳವಡಿಸಬೇಕು.

ಇಲ್ಲದೇ ಇದ್ದರೆ ಸಜೀಪಮುನ್ನೂರಿನಲ್ಲೇ ಪ್ರತ್ಯೇಕ ಶುದ್ಧೀಕರಣ ಘಟಕ ಮಾಡುವಂತೆ ಆಗ್ರಹಿಸಿದ್ದಾರೆ. ಜತೆಗೆ ಪೈಪ್‌ಲೈನ್‌ಗೆ ಅಗೆಯುವ ವೇಳೆ ರಸ್ತೆ ಚರಂಡಿಗೆ ಹಾನಿಯಾದರೆ ಅದನ್ನು ನಿಗಮವೇ ದುರಸ್ತಿ ಮಾಡಬೇಕು ಎಂಬುದು ಗ್ರಾ.ಪಂ.ನ ವಾದ.

ಆದರೆ ಈ ಬೇಡಿಕೆಯನ್ನು ಒಪ್ಪಿಕೊಳ್ಳುವುದಕ್ಕೆ ನಿಗಮದ ಅಧಿಕಾರಿಗಳು ಸಿದ್ಧವಿಲ್ಲ. ಅಧಿಕಾರಿಗಳು ಹೇಳುವ ಪ್ರಕಾರ ನಮ್ಮ ಯೋಜನೆಯಲ್ಲಿ ಮುಡಿಪಿನಲ್ಲಿ ಶುದ್ಧೀಕರಣ ಘಟಕಕ್ಕೆ ಮಾತ್ರ ಅವಕಾಶವಿದೆ. ಜತೆಗೆ ಮೊದಲ ಹಂತದಲ್ಲಿ ಶುದ್ಧೀಕರಣ ಘಟಕಕ್ಕೆ ನೀರು ಪೂರೈಕೆ ಮಾಡುವ ಪೈಪುಲೈನ್‌ ಮಾತ್ರ ಹಾಕಲಾಗುತ್ತದೆ ಎನ್ನುತ್ತಾರೆ.

5 ಗ್ರಾ.ಪಂ.ಗಳ ಸೇರ್ಪಡೆ
ಕುಡಿಯುವ ನೀರು ಪೂರೈಕೆಗೆ ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸ್ಥಳೀಯಾಡಳಿತ ಸಂಸ್ಥೆಯ ಜತೆಗೆ ಪ್ರಸ್ತುತ ಬಂಟ್ವಾಳ ವ್ಯಾಪ್ತಿಯ ಸಜೀಪಮುನ್ನೂರು, ಸಜೀಪಮೂಡ, ವೀರಕಂಭ, ಬೋಳಂತೂರು ಹಾಗೂ ಮಂಚಿ ಗ್ರಾಮಗಳು ಸೇರ್ಪಡೆಯಾಗಿವೆ. ಈ ರೀತಿ ಒಟ್ಟು 25 ಗ್ರಾಮಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿದ್ದು, ಅದಕ್ಕಾಗಿ ಸರ್ವೇ ನಡೆಸಿ ಡಿಪಿಆರ್‌ ಸಿದ್ಧಪಡಿಸಲು ಈಗಾಗಲೇ 30 ಲಕ್ಷ ರೂ.ಗಳನ್ನು ಸಂಬಂಧಪಟ್ಟ ನಿಗಮಕ್ಕೆ ಪಾವತಿಸಬೇಕಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಬಂಟ್ವಾಳ ಉಪವಿಭಾಗದ ಎಇಇ ಸಿ.ಮಹೇಶ್‌ ಅವರು ತಿಳಿಸಿದ್ದಾರೆ.

 ನೀರಿನ ಸಮಸ್ಯೆ ಸಾಕಷ್ಟಿದೆ
ಸಜೀಪಮುನ್ನೂರು ಗ್ರಾಮದಲ್ಲಿ ನೀರಿನ ಸಮಸ್ಯೆ ಸಾಕಷ್ಟಿದ್ದು, ಕೊಳವೆಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಪ್ರಸ್ತುತ 17 ಪಂಪುಗಳ ಮೂಲಕ ನೀರು ಕೊಡುವ ಪ್ರಯತ್ನ ಮಾಡುತ್ತಿದ್ದೇವೆ. ಹೀಗಾಗಿ ಇಲ್ಲಿನ ಗ್ರಾ.ಪಂ.ಆಡಳಿತ ಮಂಡಳಿ ಯೋಜನೆಯಲ್ಲಿ ಸಜೀಪಮುನ್ನೂರನ್ನು ಸೇರಿಸಿ ಗ್ರಾಮದ ನೀರಿನ ಸಮಸ್ಯೆ ಹೋಗಲಾಡಿಸುವಂತೆ ಪಕ್ಷಾತೀತವಾಗಿ ಒತ್ತಡ ಹಾಕುತ್ತಿದೆ.
 - ಪ್ರಕಾಶ್‌, ಅಭಿವೃದ್ಧಿ ಅಧಿಕಾರಿ, ಸಜಿಪಮುನ್ನೂರು ಗ್ರಾ.ಪಂ.

ಪ್ರತ್ಯೇಕ ಬೇಡಿಕೆ
ಹಿಂದೆ ಬಹುಗ್ರಾಮ ಯೋಜನೆಯಲ್ಲಿ ನೀರು ಕೊಟ್ಟಿಲ್ಲ ಎಂದು ಆರೋಪಿಸಿ ಸಾರ್ವಜನಿಕರು ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿ, ವಿವಿಧ ಬೇಡಿಕೆಗಳನ್ನಿಟ್ಟಿದ್ದಾರೆ. ಮೊದಲ ಹಂತದಲ್ಲೇ ಪೈಪ್‌ಲೈನ್‌, ಪ್ರತ್ಯೇಕ ಶುದ್ಧೀಕರಣ ಘಟಕಕ್ಕೆ ಬೇಡಿಕೆ ಇದ್ದು, ಆದರೆ ಅದರ ಅನುಷ್ಠಾನ ಕಷ್ಟಸಾಧ್ಯ. ಹೀಗಾಗಿ ಮುಂದೆ ಏನು ಎಂಬುದನ್ನು ತೀರ್ಮಾನಿಸಬೇಕಿದೆ.
-ಶೋಭಾಲಕ್ಷ್ಮೀ ಸಹಾಯಕ ಎಂಜಿನಿಯರ್‌, ಕೆಯುಡಬ್ಲ್ಯೂ ಎಸ್‌ಡಿಬಿ ಮಂಗಳೂರು

 ಅನುಕೂಲವಿಲ್ಲ
ಸಜೀಪಮುನ್ನೂರು ಗ್ರಾಮದಲ್ಲೇ ನೀರಿಗಾಗಿ ಸಾಕಷ್ಟು ತೊಂದರೆಯಿದ್ದು, ಇಲ್ಲಿಂದ ಎಲ್ಲರೂ ನೀರು ಕೊಂಡುಹೋಗುತ್ತಾರೆಯೇ ಹೊರತು ನಮ್ಮ ಗ್ರಾಮಕ್ಕೆ ಅನುಕೂಲವಾಗುವ ರೀತಿಯ ನೀರಿನ ಯೋಜನೆ ಮಾಡಿಲ್ಲ. ಹೀಗಾಗಿ ನಾವು ವಿರೋಧಿಸುತ್ತಿದ್ದೇವೆ. ನೂತನವಾಗಿ ಜಾಕ್‌ವೆಲ್‌ ಮಾಡುವುದಾದರೆ ಸಜೀಪಮುನ್ನೂರಿಗೆ ನೀರು ಕೊಡುವ ಹಾಗೇ ಶುದ್ಧಿಕರಣ ಘಟಕ ಮಾಡಬೇಕು. ನೀರು ಹೋಗುವ ಪೈಪ್‌ಲೈನ್‌ ಮಾಡುವಾಗಲೇ ಹಿಂದಕ್ಕೆ ಬರುವ ಪೈಪ್‌ಲೈನ್‌ ಕೂಡ ಹಾಕಬೇಕು ಎಂಬುದು ನಮ್ಮ ಆಗ್ರಹ.
-ಶರೀಫ್‌ ನಂದಾವರ,
ಅಧ್ಯಕ್ಷರು, ಸಜಿಪಮುನ್ನೂರು ಗ್ರಾ.ಪಂ.

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.