ಅಸಮರ್ಪಕ ಹೆದ್ದಾರಿ ನಿರ್ವಹಣೆ; ಸುಂಕ ವಸೂಲಿಗೆ ಮಾತ್ರ ಆದ್ಯತೆ


Team Udayavani, Jul 18, 2019, 5:22 AM IST

asamarpaka-heddari1

ಸುರತ್ಕಲ್: ರಾಜ್ಯದ ಆರ್ಥಿಕ ಹೆಬ್ಟಾಗಿಲು, ಕೋಟ್ಯಂತರ ಆದಾಯ ತರುವ ಏಕೈಕ ಬಂದರು ಹೊಂದಿರುವ ನವ ಮಂಗಳೂರು ಬಂದರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ನಿರ್ವಹಣೆ ಮಾಡುವ ಕಂಪೆನಿ ಸರಿಯಾದ ನಿರ್ವಹಣೆ ಮಾಡದೆ ಸುಂಕ ವಸೂಲಿಗೆ ಮಾತ್ರ ಆದ್ಯತೆ ನೀಡುತ್ತಿರುವುದು ಜನಾಕ್ರೋಶಕ್ಕೆ ಕಾರಣವಾಗಿದೆ.

2004ರಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಹಾಗೂ ಮಂಗಳೂರು ಮತ್ತು ಬೆಂಗಳೂರು ಹೆದ್ದಾರಿಯ ಬಿ.ಸಿ. ರೋಡ್‌ನ‌ಮಧ್ಯದಲ್ಲಿರುವ ಎರಡು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ನಿರ್ವಹಣೆಗಾಗಿ ನ್ಯೂ ಮಂಗಳೂರು ಪೋರ್ಟ್‌ ರೋಡ್‌ ಕಂಪೆನಿಯನ್ನು ಅಸ್ತಿತ್ವಕ್ಕೆ ತರಲಾಗಿತ್ತು.

ಈ ಭಾಗದಲ್ಲಿ 35 ಕಿ.ಮೀ. ಉದ್ದದ ನಾಲ್ಕು ಲೇನ್‌ನ ಚತುಷ್ಪಥ ರಸ್ತೆ ನಿರ್ಮಾಣದ ಹೊಣೆಯನ್ನು ಈ ಕಂಪೆನಿ ವಹಿಸಿಕೊಂಡಿತ್ತು.

ಈ ಹೆದ್ದಾರಿ ನಿರ್ಮಾಣಕ್ಕೆ ಈ ಕಂಪೆನಿ ಬ್ಯಾಂಕ್‌ನಿಂದ 363 ಕೋಟಿ ರೂ. ಸಾಲ ಪಡೆದಿತ್ತು.

ಇರ್ಕಾನ್‌ ಕಂಪೆನಿಗೆ ರಸ್ತೆ ನಿರ್ಮಾಣ ಮಾಡಲು ಟೆಂಡರ್‌ ಕೂಡ ನೀಡಿತ್ತು. ಈ ಸಾಲ ಮರುಪಾವತಿಗಾಗಿ ಎನ್‌ಎಚ್ 66 ಸುರತ್ಕಲ್ ಮತ್ತು ಅಂದಿನ ಎನ್‌ಎಚ್75ರ ಬ್ರಹ್ಮರಕೂಟ್ಲು ಟೋಲ್ ಗೇಟ್‌ಗಳನ್ನು ನಿರ್ಮಾಣ ಮಾಡಿ ಟೋಲ್ ಸಂಗ್ರಹಿಸುತ್ತಿತ್ತು.

ಹಣದ ಕೊರತೆ

ಇದೀಗ ಸುರತ್ಕಲ್ನಿಂದ ನಂತೂರು ಬಿ.ಸಿ. ರೋಡ್‌ ಜಂಕ್ಷನ್‌ವರೆಗಿನ 35 ಕಿ.ಮೀ. ರಸ್ತೆ ಎರಡು ವರ್ಷಗಳಿಂದ ಹಣದ ಕೊರತೆಯಿಂದ ನಿರ್ವಹಣೆ ಇಲ್ಲದೆ ನಲುಗುತ್ತಿದೆ.

ಕೂಳೂರಿನಿಂದ ಕೊಟ್ಟಾರ ಚೌಕಿರಸ್ತೆ ಗಮನಿಸಿದರೆ ಪಾದಚಾರಿಗಳು ನಡೆದಾ ಡಲೂ ಜಾಗವಿಲ್ಲದ ಸ್ಥಿತಿಯಿದೆ. ಹೆದ್ದಾರಿ ಬದಿ ಸರ್ವಿಸ್‌ ರಸ್ತೆ ಮಾಡಿದ್ದರೆ ಇನ್ನೊಂದೆಡೆ ಮಾಡಲು ಭೂಮಿಯ ಕೊರತೆ ಎದುರಾಗಿದೆ. ಭೂಸ್ವಾಧೀನವನ್ನೇ ಮಾಡಲಾಗಿಲ್ಲ. ಇನ್ನು ಕೋಡಿಕಲ್ ತಿರುವಿನಿಂದ ಕೂಳೂರುವರೆಗೆ ಏಕ ಸಂಚಾರದಲ್ಲಿ ಸರ್ವಿಸ್‌ ರಸ್ತೆ ನಿರ್ಮಿಸಿ ಇಲಾಖೆ ಕೈ ತೊಳೆದುಕೊಂಡಿದೆ. ಕೂಳೂರಿನಿಂದ ಬರುವವರಿಗೆ ಕೋಡಿಕಲ್ ಬಳಿಯೇ ತಿರುಗಿ ಮತ್ತೆ ಚಲಿಸಬೇಕಾಗುತ್ತದೆ. ಇದರಿಂದ ಸಮಯ ವ್ಯರ್ಥ, ಡೀಸೆಲ್ ವ್ಯರ್ಥವಾಗುತ್ತದೆ.

ಮಳೆ ಬಂದರೆ ದ್ವೀಪ!

ಮಳೆ ಏನಾದರೂ ಒಂದೆರಡು ದಿನ ಬಂದರೆ ಕೊಟ್ಟಾರಚೌಕಿ ಪ್ರದೇಶ ಮುಳುಗಡೆಯಾಗುತ್ತದೆ. ರಾಜಕಾಲುವೆ ಸಂಪರ್ಕ ಕೇಂದ್ರವಿರುವುದರಿಂದ ಸುವ್ಯ ವಸ್ಥಿತ ಚರಂಡಿ ಅಗತ್ಯ. ಪ್ರಮುಖ ರಾಜ ಕಾಲುವೆಯೂ ಇಲ್ಲಿ ಸೇರು ವುದರಿಂದ ಮಳೆ ನೀರು ಸರಿಯಾಗಿ ಹರಿಯದೆ ವಿವಿಧ ರೋಗಗಳ ಕೇಂದ್ರ ವಾಗಿಯೂ ಕೊಟ್ಟಾರಚೌಕಿ ಸಮಸ್ಯೆಯನ್ನು ಎದುರಿ ಸುತ್ತಿದೆ.ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲ ಗಳಲ್ಲಿ ಸರ್ವಿಸ್‌ ರಸ್ತೆ, ಮಳೆ ನೀರು ರಾಜಕಾಲುವೆಗೆ ಸೇರಲು ವ್ಯವಸ್ಥೆ, ಪಾದಚಾರಿಗಳ ಓಡಾಟಕ್ಕೆ ಸೂಕ್ತ ವ್ಯವಸ್ಥೆ ಮಾಡಿ ಕೊಡಬೇಕಿದೆ.

ಸ್ಮಾರ್ಟ್‌ ಸಿಟಿಗೆ ಸಂಪರ್ಕ ಕಲ್ಪಿಸುವ ಇಲ್ಲಿನ ಹೆದ್ದಾರಿಗಳು ಇದುವರೆಗೂ ಸ್ಮಾರ್ಟ್‌ ಆಗದಿರುವುದು ನಮ್ಮನ್ನಾಳುವ ಮಂದಿಗೆ ಕಣ್ಣಿಗೆ ಕಂಡಂತಿಲ್ಲ. ಇದರ ಪರಿಣಾಮ ಹೆದ್ದಾರಿಯಲ್ಲಿ ಬೃಹತ್‌ ಗಾತ್ರದ ಗುಂಡಿಗಳು ಬಿದ್ದಿವೆ. ಅನೇಕ ಪ್ರಾಣಾಪಾಯಗಳು ಸಂಭವಿಸಿದೆ. ನೂರಾರು ಸವಾರರು ಅಂಗ ವೈಕಲ್ಯವನ್ನು ಹೊಂದಿದ್ದಾರೆ. ಎರಡು ಟೋಲ್ಗಳಿಂದ ಕೋಟಿಗಟ್ಟಲೆ ಟೋಲ್ ಸಂಗ್ರಹ ವಾಗುತ್ತಿದೆ. ಆದರೆ ನಿರ್ವಹಣೆ ಮಾತ್ರ ಆಗುತ್ತಿಲ್ಲ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.