ಸಹಕಾರಿ ಸಂಸ್ಥೆಗಳಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ: ಮಾಣಿಲ ಶ್ರೀ

ಪೆರಿಂಜೆ: ಕರಿಂಜೆ ಗ್ರಾ.ಸ.ಸೌ.ಸಹಕಾರಿ ಉದ್ಘಾಟನೆ

Team Udayavani, May 13, 2019, 6:06 AM IST

1205VNRE1

ವೇಣೂರು: ಸಮಾಜ ಕಟ್ಟುವ ಕಾಯಕದಲ್ಲಿ ಸಹಕಾರಿ ಸಂಸ್ಥೆಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿವೆ. ಆರ್ಥಿಕತೆಯಲ್ಲಿ ಸ್ವಾಭಿಮಾನದ ಜೀವನಕ್ಕೆ ಸಹಕಾರಿ ಸಂಸ್ಥೆಗಳು ಸಹಕಾರಿಯಾಗಿವೆ. ಗ್ರಾಮೀಣ ಭಾಗದ ಜನತೆಯ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವಲ್ಲಿ ಸಹಕಾರಿ ಸಂಸ್ಥೆಗಳು ಮಹತ್ವರ ಪಾತ್ರ ವಹಿಸಿವೆ ಎಂದು ಶ್ರೀಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.

ಹೊಸಂಗಡಿ ಗ್ರಾಮದ ಪೆರಿಂಜೆ ಹರಿ ಓಂ ಕಾಂಪ್ಲೆಕ್ಸ್‌ ನಲ್ಲಿ ರವಿವಾರ ಜರಗಿದ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಇದರ ಉದ್ಘಾಟನ ಸಮಾರಂಭದಲ್ಲಿ ದ್ವೀಪ ಪ್ರಜ್ವಲಿಸಿ, ಆಶೀರ್ವಚನ ನೀಡಿದ ಸ್ವಾಮೀಜಿ, ಮನುಷ್ಯನ ಬುದ್ಧಿ, ಮನಸ್ಸು, ಯೋಚನ ಶಕ್ತಿ ಇಂದು ಬದಲಾಗಿದೆ. ಆಧ್ಯಾತ್ಮದ ಕಡೆಗೆ ಒಲವು ತೋರಿಸಬೇಕಿದೆ. ದ್ವೇಷ ಭಾವನೆ ಬಿಟ್ಟು ಎಲ್ಲರನ್ನು ಪ್ರೀತಿಯಿಂದ ಕಂಡಾಗ ಸಾಮರಸ್ಯ ನೆಲೆಯಾಗಲು ಸಾಧ್ಯ ಎಂದರು.

ವಿಸ್ತರಿಸುವ ಯೋಜನೆ
ಶ್ರೀಕ್ಷೇತ್ರ ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ಗ್ರಾಮೀಣ ಭಾಗದ ಬಡ ಜನತೆಯ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ದೃಷ್ಟಿಯಿಂದ ಸಹಕಾರಿ ಸಂಘವನ್ನು ನಿರ್ಮಿಸಲಾಗಿದೆ. ಅಲ್ಲಲ್ಲಿ ಸ್ವಸಹಾಯ ಸಂಘಗಳನ್ನು ಜಾರಿಗೆ ತರಲಾಗುತ್ತಿದ್ದು, ವಿಸ್ತರಿಸುವ ಯೋಜನೆ ಇದೆ ಎಂದರು.

ಶಿರ್ವ ನಡಿಬೆಟ್ಟುವಿನ ನಿತ್ಯಾನಂದ ಹೆಗ್ಡೆ ನೂತನ ಕಚೇರಿಯನ್ನು ಉದ್ಘಾಟಿಸಿದರು. ಶ್ರೀಕ್ಷೇತ್ರ ಕರಿಂಜೆಯ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಜೆ. ಸುಧೀರ್‌ ಹೆಗ್ಡೆ ಬೈಲೂರು ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಹೊಸಂಗಡಿ ಅರಮನೆಯ ಸುಕುಮಾರ್‌ ಶೆಟ್ಟಿ, ಬರೋಡಾದ ಉದ್ಯಮಿ ಶಶಿಧರ ಶೆಟ್ಟಿ, ಪೆರಿಂಜೆ ಬಡಕೋಡಿಗುತ್ತುವಿನ ಡಾ| ಕೆ.ಆರ್‌. ಪ್ರಸಾದ್‌, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಇದರ ನಿರ್ದೇಶಕ ಮಂಜುನಾಥ್‌ ಎಸ್‌.ಕೆ., ಮಂಗಳೂರು ಶ್ರೀ ಮಾತೃಭೂಮಿ ಸೌಹಾರ್ದ ಸಹಕಾರಿ ಇದರ ಆಡಳಿತ ನಿರ್ದೇಶಕ ಕೃಷ್ಣ ಕೊಂಪದವು, ಕಾಪುವಿನ ಉದ್ಯಮಿ ಸುರೇಶ್‌ ಶೆಟ್ಟಿ ಗುರ್ಮೆ, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್‌ ಬಿ. ಸುವರ್ಣ, ವೇಣೂರು ಸಿಎ ಬ್ಯಾಂಕ್‌ ಅಧ್ಯಕ್ಷ ಸುಂದರ ಹೆಗ್ಡೆ, ಹೊಸಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ಲಲಿತಾ ಟಿ. ಹೆಗ್ಡೆ, ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಇದರ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಶಶಿಕಲಾ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಠೇವಣಿ ಪತ್ರ ಬಿಡುಗಡೆ ಹಾಗೂ ಷೇರು ಪ್ರಮಾಣಪತ್ರವನ್ನು ನೀಡಲಾಯಿತು.

ಶ್ರೀಕ್ಷೇತ್ರ ಕರಿಂಜೆಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ಅಮರನಾಥ ಶೆಟ್ಟಿ, ಮೂಲ್ಕಿ-ಮೂಡುಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್‌ ಆಗಮಿಸಿದ್ದರು.

ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಇದರ ಉಪಾಧ್ಯಕ್ಷ ಸುಧಾಕರ ನೂಯಿ ಪ್ರಸ್ತಾವಿಸಿ, ಸ್ವಾಗತಿಸಿದರು. ಸಂತೋಷ್‌ ಕುಲಾಲ್‌ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಸುಲೋಚನಾ ವಂದಿಸಿದರು.

ಟಾಪ್ ನ್ಯೂಸ್

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.